ಮೈಸೂರು: ಕುವೆಂಪು ಅವರ ವಿಶ್ವಮಾನವ ಸಂದೇಶ ಎಂದೆಂದಿಗೂ ಪ್ರಸ್ತುತ ಎಂದು ಬಿಜೆಪಿ ಮೈಸೂರು ನಗರ(ಜಿಲ್ಲೆ) ಪ್ರಧಾನ ಕಾರ್ಯದರ್ಶಿ ಬಿ ಎಂ ರಘು ತಿಳಿಸಿದರು.
ರಾಷ್ಟ್ರಕವಿ ಕುವೆಂಪುರವರ 120ನೇ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ನಗರ ಮಂಡಲದ ವತಿಯಿಂದ ಕುವೆಂಪುನಗರದಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಯುವ ಜನತೆ ಹೆಚ್ಚಾಗಿ ಕುವೆಂಪು ಅವರ ಸಾಹಿತ್ಯವನ್ನು ಓದಿ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರಾಕೇಶ್ ಭಟ್ ಮಾತನಾಡಿ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ, ಕವಿತೆಗಳು ಕನ್ನಡಿಗರ ಅಸ್ಮಿತೆ. ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ, ಕನ್ನಡಿಗರ ಮನದಲ್ಲಿ ಅವರು ಎಂದಿಗೂ ಚಿರಸ್ಥಾಯಿ ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿ ಈರೇಗೌಡ, ಉಪಾಧ್ಯಕ್ಷೆ ಹೆಚ್ ಜಿ ರಾಜಮಣಿ, ಮುಖಂಡರಾದ ಈ.ಸಿ. ನಿಂಗರಾಜ ಗೌಡ, ಡಾ. ಭಾನುಪ್ರಕಾಶ್, ಶಿವಕುಮಾರ್, ಮಧು ಸೋಮಶೇಖರ್, ಚಂದನ್ ಗೌಡ, ಸಾಗರ್ ಸಿಂಗ್, ರಾಘವೇಂದ್ರ, ಶ್ರೀನಿವಾಸ್ ಪ್ರಸಾದ್, ಶುಭಶ್ರೀ, ಪುಟ್ಟಮ್ಮಣ್ಣಿ, ದೇವರಾಜ್, ಕಲಾವತಿ, ರಮಾಬಾಯಿ, ರಾಧಾ ಮುತಾಲಿಕ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.