ನಂಜನಗೂಡು: ಮುಂಬಡ್ತಿ ಪಡೆದು ಬೇರೆ ಕಾಲೇಜಿಗೆ ವರ್ಗಾವಣೆಗೊಂಡ
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ
ಉಪನ್ಯಾಸಕ ಅಶ್ವಥ್ ನಾರಾಯಣ ಗೌಡರನ್ನು ಕಾಲೇಜಿನ ಪ್ರಾಂಶುಪಾಲರು ಅಭನಂದಿಸಿದರು.
ಅಶ್ವಥ್ ನಾರಾಯಣ ಗೌಡ ಅವರು
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಈಗ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇಗೂರಿಗೆ ಪ್ರಾಂಶುಪಾಲರಾಗಿ ಮುಂಬಡ್ತಿ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಹಾಗಾಗಿ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್ ದಿನೇಶ್, ಉಪನ್ಯಾಸಕರಾದ ಅಲ್ಮಸ್ ಬೇಗಂ,ಷಡಕ್ಷರಿ ಸ್ವಾಮಿ, ಮಂಜುನಾಥ, ಡಾ.ಟಿ.ಕೆ.ರವಿ,ಮಿಲ್ಟನ್ ಅವರುಗಳು ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.