ಮೈಸೂರು: ಜಿಲ್ಲೆಯಲ್ಲಿ ಲಂಚ ಪಡೆಯುವಾಗ ಪಿಎಸ್ಐ ಒಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಈ ಪ್ರಕರಣ ನಡೆದಿದೆ.
ಬೆಟ್ಟದಪುರ ಠಾಣೆಯ ಪಿಎಸ್ಐ ಶಿವಶಂಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಟ್ಟದಪುರ ಠಾಣೆಯ ಪಿಎಸ್ಐ 80,000 ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಗಳು ಹಿಡಿದಿದ್ದಾರೆ.
ಪ್ರಕರಣ ಒಂದನ್ನು ಇತ್ಯರ್ಥ ಗೊಳಿಸಲು ಲಂಚಕ್ಕೆ ಶಿವಶಂಕರ್ ಬೇಡಿಕೆ ಇಟ್ಟಿದ್ದರು,
ಈ ಸಂಬಂಧ ದೂರುದಾರರು ಲೋಕಾ ಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.
80,000 ಹಣ ಪಡೆಯುವ ವೇಳೆ ಪಿಎಸ್ಐ ಶಿವಶಂಕರ್ ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದ್ದಾರೆ, ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.