ಚಾಮರಾಜನಗರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಚಾಮರಾಜನಗರ: ಚಾಮರಾಜನಗರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ನಗರಸಭೆಯಲ್ಲಿ ಭ್ರಷ್ಟಾಚಾರ, ಕೆಲಸ ವಿಳಂಬ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ಈ ವೇಳೆ ಲೋಕಾ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದರು.

ಮೈಸೂರು ಹಾಗೂ ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳ ಐದು ತಂಡ ನಗರಸಭೆಗೆ ದಿಢೀರ್ ದಾಳಿ ನಡೆಸಿದ್ದು, ಪೌರಾಯುಕ್ತರ ಕಚೇರಿ, ಕಂದಾಯ ಶಾಖೆ, ಆರೋಗ್ಯ ಶಾಖೆ ಸೇರಿದಂತೆ ಇತರೆ ಶಾಖೆಗಳಿಗೂ ತೆರಳಿ, ಕಡತಗಳನ್ನು ಸಂಜೆಯ ವರೆಗೂ ಪರಿಶೀಲನೆ ನಡೆಸಿದ್ದಾರೆ.

ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆ ಹಾಗೂ ಕಡತಗಳನ್ನು ಪ್ರಶ್ನಿಸಿದರು.

ನಗರಸಭೆಯಲ್ಲಿ ಭ್ರಷ್ಟಾಚಾರ, ಅಕ್ರಮ ಖಾತೆ, ಅಕ್ರಮವಾಗಿ ಇ-ಸ್ವತ್ತು, ಸಾರ್ವಜನಿಕರ ಕೆಲಸ ವಿಳಂಬದ ಬಗ್ಗೆ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿ ಗಳಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆದಿದೆ.