ಮೈಸೂರು: ಮೈಸೂರು ವಿಜಯನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಪಹರಣವಾಗಿದ್ದ ಕೆಲವೇ ಗಂಟೆಗಳಲ್ಲಿ ಫೈನಾನ್ಷಿಯರ್ ಲೋಕೇಶ್ ಅವರನ್ನು ರಕ್ಷಿಸಿದ್ದಾರೆ.
ಒಂದು ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ನಾಲ್ವರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂತೋಷ್ ಹೆಚ್ ಎಂ,ಅಭಿಷೇಕ್ ಹೆಚ್ ಎಸ್, ಪ್ರಜ್ವಲ್ ಆರ್ ಹಾಗೂ ದರ್ಶನ್ ಬಿ.ಎನ್ ಬಂಧಿತ ಆರೋಪಿಗಳು.
ಡಿ. 6 ರಂದು ರಾತ್ರಿ 8.15 ರ ಸಮಯದಲ್ಲಿ ವಿಜಯನಗರ 3ನೇ ಹಂತ ಹೆರಿಟೇಜ್ ಕ್ಲಬ್ ನಿಂದ ಮನೆಗೆ ಹೋಗಲು ಹೊರಗೆ ಬಂದ ಲೋಕೇಶ್ ಅವರ ಮೇಲೆ ಅಟ್ಯಾಕ್ ಮಾಡಿದ ಈ ನಾಲ್ಕು ಮಂದಿ ಕಣ್ಣಿಗೆ ಖಾರದ ಪುಡಿ ಎರಚಿ ಬಲವಂತವಾಗಿ ಒಂದು ಟಾಟಾ ಸುಮೋ ವಾಹನದಲ್ಲಿ ಹಾಕಿಕೊಂಡು ಅಪಹರಿಸಿದ್ದರು.
ನಂತರ ಲೋಕೇಶ್ ಅವರನ್ನು ಒತ್ತೆಯಾಳಗಿರಿಸಿಕೊಂಡು ಒಂದು ಕೋಟಿ ರೂ ಗಳಿಗೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಕಿಡ್ನಾಪ್ ಆದ ಲೋಕೇಶ್ ಪತ್ನಿ ನಯನ ಅವರು ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತಕ್ಷಣ ಅಲರ್ಟ್ ಆದ ವಿಜಯನಗರ ಠಾಣೆ ಪೊಲೀಸರು ಕೆಲವೇ ಘಂಟೆಗಳಲ್ಲಿ ಆರೋಪಿಗಳನ್ನು ಕೆ ಆರ್ ನಗರದ ಹಂಪಾಪುರ ಬಳಿ ವಶಕ್ಕೆ ಪಡೆದು ಲೋಕೇಶ್ ಅವರನ್ನು ರಕ್ಷಿಸಿದ್ದಾರೆ.
ಲೋಕೇಶ್ ಕುಟುಂಬ ದಿಂದ ಹಣ ಪಡೆಯಲು ಹೋಗಿದ್ದ ಮತ್ತೊಬ್ಬ ಆರೋಪಿ ಪ್ರೀತಮ್ ತಲೆಮರೆಸಿಕೊಂಡಿದ್ದು, ಶೀಘ್ರವೆ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಂತೋಷ್ ಮೂಲತಃ ಮಂಡ್ಯ ಜಿಲ್ಲೆ, ಕೆ ಆರ್ ಎಸ್ ರಸ್ತೆಯ ಪಂಪ್ ಹೊಸಳ್ಳಿ ಗ್ರಾಮದವನು,ಈತನಿಗೆ ಲೋಕೇಶ್ ಪರಿಚಯವಿತ್ತು ಮತ್ತು ಲೋಕೇಶ್ ಫೈನಾನ್ಸ್, ರಿಯಲ್ ಎಸ್ಟೇಟ್ ನಲ್ಲಿ ಹಣ ಮಾಡಿರುವ ವಿಚಾರ ಗೊತ್ತಿದ್ದು ಈತ ತನ್ನ ಗ್ರಾಮದವರೇ ಆದ ಪ್ರಜ್ವಲ್, ಪ್ರೀತಮ್, ದರ್ಶನ್ ಹಾಗೂ ಮೇಟಗಳ್ಳಿ ನಿವಾಸಿ ಅಭಿಷೇಕ್ ಅವರೊಂದಿಗೆ ಸೇರಿ ಲೋಕೇಶ್ ರನ್ನು ಕಿಡ್ನಾಪ್
ಮಾಡಲು ಸಂಚು ರೂಪಿಸಿದ್ದರು.
ಲೋಕೇಶ್ ರನ್ನು ಒತ್ತೆಯಾಳಾಗಿ ಇರಿಸಿಕೊಂಡು ಹಣ ಮಾಡಿಕೊಳ್ಳಬಹುದು ಎಂಬ ದುರುದ್ದೇಶ ದಿಂದ ಸುಮಾರು 15 ದಿನ ಅವರನ್ನು ಹಿಂಬಾಲಿಸಿ ಹೊಂಚು ಹಾಕಿದ್ದರು.
ಡಿ.6 ರಂದು ರಾತ್ರಿ ಹೇರಿಟೇಜ್ ಕ್ಲಬ್ ನಿಂದ ಹೊರಬಂದ ಲೋಕೇಶ್ ರನ್ನ ಅಪಹರಿಸಿ ಪತ್ನಿ ಗೆ ಒಂದು ಕೋಟಿ ರೂ ಹಣ ಕಳುಹಿಸುವಂತೆ ಡಿಮ್ಯಾಂಡ್ ಮಾಡಿದ್ದರು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಈ ಬಗ್ಗೆ ಪತ್ನಿ ನಯನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಿ ಎರಡು ಮೂರು ತಂಡಗಳನ್ನ ರಚಿಸಿ ಕಾರ್ಯಾಚರಣೆ ಆರಂಭಿಸಲಾಯಿತು.
ಘಟನೆ ನಡೆದ ಕೆಲವೇ ಗಂಟೆ ಗಳಲ್ಲಿ ಪೊಲೀಸರು ಕೆ ಆರ್ ನಗರ ಹಂಪಾಪುರ ಬಳಿ ಲೋಕೇಶ್ ರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ವಿಜಯನಗರ ಎಸಿಪಿ ರವಿ ಪ್ರಸಾದ್, ಇನ್ಸ್ಪೆಕ್ಟರ್ ಎಸ್ ಡಿ ಸುರೇಶ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಗಳಾದ ಜೈ ಕೀರ್ತಿ ಎಂ, ಆನಂದ್ ಹಾಗೂ ಸಿಬ್ಬಂದಿ ಶಂಕರ್, ವೆಂಕಟೇಶ್, ಸುನೀಲ್, ಗಂಗಾಧರ್, ಲಿಖಿತ್, ಮಂಜುನಾಥ್, ಲೋಕೇಶ್, ಚಾಲಕ ಗಿರೀಶ್ ಭಾಗವಹಿಸಿದ್ದರು.
ಅಪಹರಣವಾಗಿದ್ದ ವ್ಯಕ್ತಿಯನ್ನ ರಕ್ಷಿಸಿ ಆರೋಪಿಗಳನ್ನು ಬಂಧಿಸಿದ ಇಡೀ ತಂಡಕ್ಕೆ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಉಪ ಪೊಲೀಸ್ ಆಯುಕ್ತರುಗಳಾದ ಬಿಂದುಮಣಿ ಹಾಗೂ ಸುಂದರರಾಜ್ ಅಭಿನಂದಿಸಿದ್ದಾರೆ.
ಅಪಹರಣವಾಗಿದ್ದ ಕೆಲ ಗಂಟೆಗಳಲ್ಲೇ ಲೋಕೇಶ್ ರನ್ನು ರಕ್ಷಿಸಿದ ಪೊಲೀಸರು