ಹನೂರು: ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು,ನಿಷೇಧಿತ 2000 ಮುಖ ಬೆಲೆಯ ನೋಟುಗಳೂ ಪತ್ತೆಯಾಗಿವೆ
28 ದಿನಗಳ ಅವಧಿಯಲ್ಲಿ 2,27, 24,757 ರೂ ಗಳು ಸಂಗ್ರಹವಾಗಿದೆ.
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಬೆಳಿಗ್ಗೆ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯಸಾನಿದ್ಯದಲ್ಲಿ ಕಾರ್ಯದರ್ಶಿ ರಘು ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಭಾನುವಾರ, ರಜಾ ದಿನಗಳು, ಆಯುಧ ಪೂಜೆ ಹಾಗೂ ವಿಜಯದಶಮಿ ಇದ್ದುದ್ದರಿಂದ 28 ದಿನಗಳಲ್ಲಿ ಹುಂಡಿ ಮತ್ತು ಒಟ್ಟು ಇ- ಹುಂಡಿ ಸೇರಿದಂತೆ 2,27, 24,757 ರೂ ಗಳು ಸಂಗ್ರಹವಾಗಿದೆ.
ಚಿನ್ನ 46 ಗ್ರಾಂ, ಬೆಳ್ಳಿ 01 ಕೆ.ಜಿ 350 ಗ್ರಾಂ ದೊರೆತಿದೆ. 9 ವಿದೇಶಿ ನೋಟುಗಳು ಹಾಗೂ ನಿಷೇಧಿತ 2,000 ರೂ ಮುಖಬೆಲೆಯ 18 ನೋಟುಗಳು ಕಾಣಿಕೆಯಾಗಿ ಬಂದಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಕಾಗಲವಾಡಿ, ಭಾಗ್ಯಮ್ಮ, ಕುಪ್ಯಾ, ಮಹದೇವಪ್ಪ, ಕೀಳನಪುರ, ಗಂಗನ ತಿಮ್ಮಯ್ಯ ಹಾರೋಹಳ್ಳಿ (ಮೆಲ್ಲಹಳ್ಳಿ), ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಕಲ್ಯಾಣಮ್ಮ, ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.