ಬೆಳಗಾವಿ: ಸಾಲೂರು ಮಠದ ಶ್ರೀಗಳನ್ನು ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ, ಜಿಲ್ಲಾ ಸಮಿತಿಯ ಖಾಯಂ ಸಮಿತಿ ಸದಸ್ಯರನ್ನಾಗಿ ನೇಮಿಸಬೇಕೆಂದು ಮೈಸೂರು ಕೆ ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ಆಗ್ರಹಿಸಿದರು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯ ಕುರಿತು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಗಮನ ಸೆಳೆದರು.
ಬೆಳಗಾವಿ ಅಧಿವೇಶನದಲ್ಲಿ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ ಅವರು ಶ್ರೀ ಮಲೈ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಜಿಲ್ಲಾ ಮಟ್ಟದ ಸಮಿತಿ 2025ರ ವಿಧೇಯಕ ರಚನೆಯ ವಿಷಯ ಪ್ರಸ್ತಾಪಿಸಿದಾಗ ಶಾಸಕ ಟಿ.ಎಸ್ ಶ್ರೀವತ್ಸ ಅವರು ಮಾತನಾಡಿ ಮಲೈ ಮಹದೇಶ್ವರ ಬೆಟ್ಟದಲ್ಲಿರುವ ಪುರಾತನ ಸಾಲೂರು ಮಠದ ನೇತೃತ್ವದಲ್ಲಿಯೇ ಹಲವಾರು ವರ್ಷಗಳಿಂದ ಪೂಜಾವಿಧಾನ ಧಾರ್ಮಿಕ ಕಾರ್ಯಕ್ರಮಗಳು ಜರಗುತ್ತಾ ಬಂದಿವೆ. ಹಾಗಾಗಿ ಸಾಲೂರು ಮಠದ ಸ್ವಾಮೀಜಿಯವರನ್ನೇ ಶ್ರೀ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಹಾಗೂ ರಾಜ್ಯ ಜಿಲ್ಲಾ ಮಟ್ಟದ ಖಾಯಂ ಸಮಿತಿಯ ಸದಸ್ಯರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ರವರು ಸದನದಲ್ಲೇ ಒಪ್ಪಿಗೆ ಸೂಚಿಸಿದ್ದಾರೆ.
ಮಹದೇಶ್ವರ ಅ. ಪ್ರಾ. ರಾಜ್ಯ, ಜಿಲ್ಲಾ ಸಮಿತಿಗೆ ಸಾಲೂರು ಮಠದ ಶ್ರೀ ನೇಮಕಕ್ಕೆ ಶ್ರೀವತ್ಸ ಆಗ್ರಹ