ಮಂಡ್ಯ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ,ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಡ್ಯದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದು ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿ, ಜೈಶ್ರೀರಾಮ್, ನಾವೆಲ್ಲ ಹಿಂದೂ ನಾವೆಲ್ಲರೂ ಒಂದು ಎಂಬ ಘೋಷಣೆ ಕೂಗಿದರು.
ಬಾಂಗ್ಲಾದೇಶದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ, ಅಲ್ಲಿನ ಸರ್ಕಾರ ಹಿಂದೂಗಳಿಗೆ ರಕ್ಷಣೆ ಕೊಡದೆ ನಿರ್ಲಕ್ಷ್ಯ ತೋರಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದೌರ್ಜನ್ಯ ನಡೆಸಿದ ಮುಸ್ಲಿಂರ ವಿರುದ್ಧ ಕ್ರಮ ತೆಗೆದುಕೊಂಡು, ತಕ್ಷಣವೇ ಹಿಂದೂಗಳಿಗೆ ರಕ್ಷಣೆ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಜಿಹಾದಿ ಮನೋಭಾವ ಉಳ್ಳ ಧರ್ಮಿಯರು ಕೊರೋನಾದಂತಹ ಸಂದರ್ಭದಲ್ಲಿ ಜಾತಿ ಧರ್ಮ ಭೇದ ಭಾವವನ್ನೆಲ್ಲ ಮರೆತು ಆಶ್ರಯವನ್ನು ನೀಡಿದ ಇಸ್ಕಾನ್ ಸೇವೆಯನ್ನು ಮರೆತು ಸ್ವಾಮಿಯನ್ನು ಬಂಧಿಸಿ ಹಿಂದುಗಳ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂದು ಕಿಡಿಕಾರಿದರು.
ಅಲ್ಲಿನ ಸರ್ಕಾರ ಹಿಂದುಗಳ ವಿರುದ್ಧವಾಗಿ ನಿಂತಿದೆ ಇದನ್ನೆಲ್ಲಾ ನಾವು ಸಹಿಸಿಕೊಂಡು ಕುಳಿತರೆ ನಮ್ಮ ಸಮಾಜ, ನಮ್ಮ ಧರ್ಮವನ್ನ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ ಆದಕಾರಣ ನಾವು ಒಗ್ಗಟ್ಟಾಗಿ ನಮ್ಮ ಧರ್ಮವನ್ನ ನಾವು ಸಂರಕ್ಷಿಸಬೇಕು ಎಂದು ಸಂಘಟನೆಗಳು ಕರೆ ನೀಡಿದವು.