ಮೈಸೂರು: ವೇದ, ಮಂತ್ರಗಳು ವ್ಯಕ್ತಿ ಜೀವನದ ಸಮಗ್ರ ಚಿತ್ರಣವನ್ನು ನೀಡಬಲ್ಲವು ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತ್ರಿ ಎಂದು ಹೇಳಿದರು.

ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಬುಧವಾರ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಏರ್ಪಡಿಸಿದ್ದ ಉಚಿತ ಸಾಮೂಹಿಕ ಉಪನಯನದ ವೇಳೆ ಅವರು ಮಾತನಾಡಿದರು.
ವೇದವೆಂದರೆ ಜ್ಞಾನ, ಸಂಸ್ಕೃತಿ, ಪರಂಪರೆಗೆ ಸಾಕ್ಷಿ. ಭಾರತ ಮಾತ್ರವಲ್ಲ; ವಿಶ್ವಮಟ್ಟದಲ್ಲೂ ಮಾನ್ಯತೆ ಗಳಿಸಿದೆ ಎಂದು ತಿಳಿಸಿದರು.

ತ್ರಿಮತಸ್ಥ ವಿಪ್ರ ಸಮುದಾಯದವರ ಅನುಕೂಲಕ್ಕಾಗಿ ಹಲವಾರು ವರ್ಷಗಳಿಂದ ಈ ಉಚಿತ ಉಪನಯನ ನಡೆಸಿಕೊಂಡು ಬರಲಾಗಿದೆ ಎಂದು ರವಿಶಾಸ್ತ್ರಿ ಹೇಳಿದರು.
ಬೆಳಗ್ಗೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ 10.15 ಕ್ಕೆ ಬ್ರಹ್ಮೋಪದೇಶ ಮಾಡಿ ನಂತರ ವಟುಗಳಿಂದ ಶೋಭಾ ಯಾತ್ರೆ ಮತ್ತು ಅಶ್ವತ್ಥ ಪೂಜೆ ನೆರವೇರಿಸಲಾಯಿತು.
ವಿದ್ವಾನ್ ಸುರೇಶ್ ಭಟ್ ಅವರು
ನೂತನ ವಟುಗಳಿಗೆ ಮಾರ್ಗದರ್ಶನ ನೀಡಿ, ಉಪನಯನದ ಮಹತ್ವ ತಿಳಿಸಿಕೊಟ್ಟರು.
ಆನಂತರ ವಟುಗಳಿಗೆ ಮತ್ತು ಪೋಷಕರಿಗೆ ಪ್ರಸಾದ ವಿತರಿಸಲಾಯಿತು.

ಶ್ರೀ ಕೃಷ್ಣ ಟ್ರಸ್ಟ್ ನ ಉಪಾಧ್ಯಕ್ಷರಾದ ರವಿಶಾಸ್ತ್ರಿ,ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್, ಕಾರ್ಯದರ್ಶಿ ರಾಘವೇಂದ್ರ, ಸುಬ್ರಹ್ಮಣ್ಯ ತಂತ್ರಿ, ವಿಜೇಂದ್ರ, ಕಿರಣ್ ತಂತ್ರಿ, ಪದ್ಮನಾಭ ಭಟ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಹಾಗೂ ವಟುಗಳ ಪೋಷಕರು ವಿಪ್ರರು ವಟುಗಳನ್ನು ಆಶೀರ್ವದಿಸಿದರು.