ಮೈಸೂರು,ಮಾ.4: ಮೈಸೂರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ಭೇಟಿ ನೀಡಿದರು.
ಮೈಸೂರಿನ ಜಲ ದರ್ಶಿನಿ ಅತಿಥಿಗೃಹಕ್ಕೆ ಆಗಮಿಸಿದ ಸಂಸದ ಸುನಿಲ್ ಬೋಸ್ ರವರನ್ನು ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ಈ ವೇಳೆ ಸಂಸದರ ಆಪ್ತ ಕಾರ್ಯದರ್ಶಿ ಹಾಜರಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಸುನಿಲ್ ಬೋಸ್ ಆಲಿಸಿದರು.