ಮೈಸೂರು: ಮೈಸೂರು ಸಮೀಪದ ಸಿದ್ದಲಿಂಗಪುರ ಬಳಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಸ್ಥಳೀಯರು ಆತಂಕಗೊಂಡಿದ್ದಾರೆ.
ಸಿದ್ದಲಿಂಗಪುರ ಗ್ರಾಮದ ಹೆದ್ದಾರಿ ಪಕ್ಕದಲ್ಲಿರುವ ಪೆಟ್ರೋಲ್ ಬಂಕ್ ಬಳಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ಸುಮಾರು 42 ವರ್ಷದ ವ್ಯಕ್ತಿ ಕೊಲೆ ವ್ಯಕ್ತಿ ಕೊಲೆಯಾಗಿದ್ದು,ಆತ ಯಾರೆಂದು ಗೊತ್ತಾಗಿಲ್ಲ.
ಕೊಲೆಯಾದ ವ್ಯಕ್ತಿಯ ಹೆಸರು,ವಿಳಾಸ ಮತ್ತಿತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮೇಟಗಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
