ಕೋರ್ಟ್ ತೀರ್ಪು ಸ್ವಾಗತಾರ್ಹ:ಬಸವರಾಜ ಬಸಪ್ಪ

Spread the love

ಮೈಸೂರು: ಮುಡಾ ಪ್ರಕರಣ ಸಿಬಿಐಗೆ ಒಪ್ಪಿಸಬೇಕೆಂದು ಕೋರಿದ ಪ್ರಕರಣ ಹೈಕೋರ್ಟ್‌ ತಿರಸ್ಕರಿಸಿರುವುದು ಸ್ವಾಗತಾರ್ಹ ಎಂದು ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತ ಬಂದಿರುವ ಬಿಜೆಪಿ ನಾಯಕರಿಗೆ ಇಂದಿನ ಹೈಕೋರ್ಟ್ ತೀರ್ಪು ಬುದ್ದಿ ಕಲಿಸಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಮುಡಾ ಪ್ರಕರಣದ ಬಗ್ಗೆ ಈಗಾಗಲೇ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಆದರೆ ಸಿಬಿಐ ಮೂಲಕ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಬೇನ್ನುವ ಬಿಜೆಪಿ ನಾಯಕರ ಕನಸಿಗೆ ಭಂಗವಾಗಿದೆ,ಇನ್ನಾದರೂ ನಾಯಕರು ಎಚ್ಚೆತ್ತು ಕೊಳ್ಳಲಿ ಎಂದು ಬಸವರಾಜ್ ಬಸಪ್ಪ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿಯೇ 50:50 ರಂತೆ ಸೈಟ್ ಹಂಚಿಕೆ ನಿಯಮ ಮಾಡಿಕೊಂಡು, ಅದೇ ಅವಧಿಯಲ್ಲಿ ಸೈಟ್ ಹಂಚಿಕೆ ಮಾಡಿ ಸಿದ್ದರಾಮಯ್ಯನವರದ್ದೇ ತಪ್ಪು ಎಂದು ಸಾರಲು ಹೊರಟವರಿಗೆ ಹೈಕೋರ್ಟ್ ನೀಡಿದ ತೀರ್ಪು ಚಾಟಿ ಏಟು ನೀಡಿದಂತಾಗಿದೆ
ಎಂದು ಅವರು ತಿಳಿಸಿದ್ದಾರೆ.