ಸಿದ್ದರಾಮಯ್ಯ,ಡಿ.ಕೆ ಶಿವಕುಮಾರ್ ಅನ್ಯೋನ್ಯವಾಗಿದ್ದಾರೆ-ಚಲುವರಾಯಸ್ವಾಮಿ

Spread the love

ಮೈಸೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬಹಳ‌ ಅನ್ಯೂನ್ಯವಾಗಿದ್ದಾರೆ. ಯಾರು ಏನೇ ಕುತಂತ್ರ ಮಾಡಿದರೂ ಬೇರೆ ಮಾಡಲು ಆಗುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವರು, ಈ ನಾಡಿನ‌ ಎಲ್ಲಾ ರೈತರಿಗೆ ಒಳ್ಳೇ ಮಳೆ ಬೆಳೆಯಾಗಿದೆ. ಎಲ್ಲರಿಗೂ ಸಮೃದ್ದಿ ತರಲಿ ಎಂದು ತಾಯಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

ಸಿಎಂ ಬದಲಾವಣೆ ಕುರಿತು ಶಾಸಕರು ಬಹಿರಂಗ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಅವರವರ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಹಳ‌ ಅನೂನ್ಯವಾಗಿದ್ದಾರೆ, ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯಬೇಕಾ ಬೇಡವಾ ಎನ್ನುವುದನ್ನ ನಿರ್ಧಾರ ಮಾಡುವವರು ಹೈಕಮಾಂಡ್ ಎಂದು ಚಲುವರಾಯಸ್ವಾಮಿ‌ ತಿಳಿಸಿದರು.