ನೇಣು ಬಿಗಿದುಕೊಂಡು ಯುವತಿ ಆತ್ಮ*ತ್ಯೆ

Spread the love

ಮೈಸೂರು: ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ರಾಮಕೃಷ್ಣನಗರ ಹೆಚ್ ಬ್ಲಾಕ್ ನಿವಾಸಿ
ಅಧ್ವಿಕ(21) ಆತ್ಮಹತ್ಯೆ ಮಾಡಿಕೊಂಡ‌ ತರುಣಿ

ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಅಧ್ವಿಕ.

ಮಾತಾ ಅಮೃತಾನಂದಮಯಿ ಕಾಲೇಜಿನಲ್ಲಿ ಬಿಕಾಂ ಮುಗಿಸಿ ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದಳು.ಕೆಲಸ ಮುಗಿಸಿ ಮನೆಗೆ ಬಂದ ಅಧ್ವಿಕ ಕೊಠಡಿಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾಳೆ.

ತಾಯಿ ಶೋಭಾ ಊಟಕ್ಕೆ ಕರೆದಾಗ ಏನೂ ಮತನಾಡಿಲ್ಲ,ಬಾಗಿಲೂ ತೆಗೆದಿಲ್ಲ.ಇದರಿಂದ ಅನುಮಾನಗೊಂಡು ಅವರು
ಪರಿಶೀಲಿಸಿದಾಗ ಕೊಠಡಿಯ ಸೀಲಿಂಗ್ ಫ್ಯಾನ್ ಗೆ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿದ್ದಾಳೆ.

ತಕ್ಷಣ ಅಕ್ಕಪಕ್ಕದವರನ್ನು ಆಕೆ ಕೂಗಿದ್ದಾರೆ.
ಸುದ್ದಿ ತಿಳಿದು ಕುವೆಂಪುನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ನೊಇಡಿದಾಗ ಡೆತ್ ನೋಟ್ ಪತ್ತೆಯಾಗಿದೆ.

ಅಧ್ವಿಕ ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಇರಬಹುದೆಂದು ಶಂಕಿಸಲಾಗಿದೆ.
ಕುವೆಂಪುನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.