ಮೈಸೂರಿನ ಜೈಲ್ ಗೆ ದಿಢೀರ್ ದಾಳಿ ಮಾಡಿದ ಪೊಲೀಸರು

ಮೈಸೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೋಜು ಮಸ್ತಿ ಕುರಿತು ಸುದ್ದಿ ಹರಡುತ್ತಿದ್ದಂತೆ ಮೈಸೂರು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.

ಮೈಸೂರಿನ ಕಾರಾಗೃಹಕ್ಕೆ ಬೆಳ್ಳಂಬೆಳಿಗ್ಗೆ ಪೊಲೀಸರು ದಿಢೀರ್ ದಾಳಿ ಮಾಡಿ ಪರಿಶೀಲನೆ ನಡೆಸಿದರು.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬಿಂದುಮಣಿ ಅವರಿಗೆ ಎಸಿಪಿಗಳು ಹಾಗೂ ವಿವಿಧ ಠಾಣೆಯ ನಿರೀಕ್ಷಕರು ಸಾಥ್ ನೀಡಿದರು.

ಒಂದೆಡೆ ಗೃಹಸಚಿವ ಪರಮೇಶ್ವರ್ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರೆ ಮತ್ತೊಂದೆಡೆ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಕುತೂಹಲ ಮೂಡಿಸಿದ್ದಾರೆ.