ಮೈಸೂರು: ಮೈಸೂರಿನಲ್ಲಿ ಬ್ರಾಹ್ಮಣ ಸಂಘಟನೆ ಬಲಪಡಿಸೋಣ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ ಪ್ರಕಾಶ್ ತಿಳಿಸಿದರು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ನಗರದ ಸರಸ್ವತಿಪುರದಲ್ಲಿರುವ ಮೈಸೂರಿನ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳಿಗೆ ನೇಮಕ ಪತ್ರ ನೀಡಲಾಯಿತು.
ಮಾತು ಮುಂದುವರಿಸಿದ ಡಿ.ಟಿ ಪ್ರಕಾಶ್ ಅವರು, ಮೈಸೂರಿನಲ್ಲಿ ಬ್ರಾಹ್ಮಣ ಸಮುದಾಯವನ್ನ ಸಾಮಾಜಿಕವಾಗಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನೂತನ ಸಮಿತಿಯನ್ನ ರಚಿಸಲಾಗಿದೆ, ಶಿಕ್ಷಣ ಆರೋಗ್ಯ ಉದ್ಯೋಗ, ಧಾರ್ಮಿಕ, ಸಾಂಸ್ಕೃತಿಕ ಸಾಹಿತ್ಯ ಸಹಕಾರಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ವಿಪ್ರ ಸಮುದಾಯವರಿಗೆ ಬೆನ್ನುಲುಬಾಗಿ ನಿಂತು ವಿಪ್ರರ ಪ್ರಾತಿನಿಧ್ಯಕ್ಕೆ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಪ್ರೋತ್ಸಾಹಿಸಲು ವಿವಿಧ ಕಾರ್ಯಕ್ರಮಗಳನ್ನ ರೂಪಿಸಲಾಗುತ್ತಿದ್ದು, ಮೈಸೂರು ಜಿಲ್ಲಾ ವ್ಯಾಪ್ತಿಯ ಬ್ರಾಹ್ಮಣ ಸಂಘ ಸಂಸ್ಥೆಗಳು ಹೆಚ್ಚಿನ ಮಾಹಿತಿಗಾಗಿ 9945266832 ಸಂಪರ್ಕಿಸಬಹುದು ಎಂದು ಹೇಳಿದರು.
2026-27 ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿ
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಉಪಾಧ್ಯಕ್ಷರುಗಳಾಗಿ ಗೋಪಾಲ್ ರಾವ್, ಕೆ ಆರ್ ಸತ್ಯನಾರಾಯಣ್, ಎಂ ಆರ್ ಬಾಲಕೃಷ್ಣ, ಡಾಕ್ಟರ್ ಲಕ್ಷ್ಮೀದೇವಿ, ರಾಜಗೋಪಾಲ್, ಕಡಕೋಳ ಜಗದೀಶ್, ರವಿ ಶಾಸ್ತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಗಳಾಗಿ ಸೌಭಾಗ್ಯ ಮೂರ್ತಿ,ಎಸ್ ರಂಗನಾಥ,ಸುರೇಶ್, ಕೆ ಎಂ ನಿಶಾಂತ್, ಅಜಯ್ ಶಾಸ್ತ್ರಿ, ಕಲ್ಕೆರೆ ನಾಗರಾಜ್, ಖಚಾಂಚಿಗಳಾಗಿ ಎಂ ಎ ಸುಮ, ಮಂಜುನಾಥ, ಜಂಟಿ ಕಾರ್ಯದರ್ಶಿಗಳಾಗಿ ಜ್ಯೋತಿ, ಲತಾ ಬಾಲಕೃಷ್ಣ,ಅರುಣ್ ಟಿ ಎಸ್ ಹಾಗೂ ಮಾಧ್ಯಮ ಸಂಚಾಲಕರಾಗಿ ವಿಕ್ರಮ್ ಅಯ್ಯಂಗಾರ್ ಅವರನ್ನು ಆಯ್ಕೆ ಮಾಡಿ ಡಿ.ಟಿ.ಪ್ರಕಾಶ್ ನೇಮಕ ಪತ್ರ ವಿತರಿಸಿದರು.
