ಮೈಸೂರು: ಶ್ರವಾಣ ಮಾಸದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಶ್ರೀ ಕಾಲ ಶನೇಶ್ವರ ದೇವಸ್ಥಾನ ದಲ್ಲಿ ವಿಶೇಷ ಪೂಜಾ ಕಾರ್ಯಗಳು ನೆರವೇರುತ್ತಿವೆ.
ಶನೇಶ್ವರ ಸ್ವಾಮಿಗೆ ವಿಜೃಂಭಣೆಯಿಂದ ಪೂಜಾ ಕಾರ್ಯಗಳು ರಾತೋತ್ಸವ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ನಡೆಯುತ್ತಿದೆ.
ಈ ವಿಶೇಷ ಸಂದರ್ಭದಲ್ಲಿ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಅವರು ಕಾಲ ಶನೇಶ್ವರ ಸ್ವಾಮಿ ದೇವಸ್ಥಾನ ದ ಗುಡ್ಡಪ್ಪ ನವರಾದ ಸೂರ್ಯ ದೇವ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಆಶಿರ್ವಾದ ಪಡೆದರು.