ಮೈಸೂರು: ನಗರ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಭೇಟಿ ನೀಡಿ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಅವರು ಕಾರಾಗೃಹಕ್ಕೆ ಭೇಟಿ ಕೊಡುತ್ತಿದ್ದಂತೆ ಅಹವಾಲುಗಳ ಕೊಡಲು ಮುಗಿ ಬಿದ್ದ ಮಹಿಳೆಯರು ಮುಗಿ ಬಿದ್ದರು.
ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮನವಿ ಪತ್ರಗಳನ್ನು ಸಾರ್ವಜನಿಕರು ಸಲ್ಲಿಸಿದರು.
ಹೊರ ಭಾಗದಲ್ಲೇ ನಿಂತು ಸಾರ್ವಜನಿಕರ ಜೊತೆ ಕೆಲ ಕಾಲ ಸಮಸ್ಯೆಯನ್ನು ಆಲಿಸಿದ ನಾಗಲಕ್ಷ್ಮಿ ಚೌದರಿ ಆಲಿಸಿದರು.
ಸೌಜನ್ಯ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಹಿಳಾ ಆಯೋಗದ ಅಧ್ಯಕ್ಷರು, ಸೌಜನ್ಯ ಕೊಲೆ ಪ್ರಕರಣ ಕುರಿತು ನ್ಯಾಯಾಲಯದಿಂದ ತೀರ್ಪು ಬಂದಿದೆ. ನಾನು ಒಂದು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡಲು ಆಗುವುದಿಲ್ಲ, ನಾನು ಮಾತ್ರ ಆ ಹೆಣ್ಣು ಮಗಳ ಪರವಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.
ಆ ಪ್ರಕರಣದಲ್ಲಿ ಸಾವಿಗೀಡಾದ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವುದು ನನ್ನ ಆಶಯ,ನಾನು ಸಂತ್ರಸ್ತ ಕುಟುಂಬನ್ನು ಭೇಟಿ ಮಾಡಿಲ್ಲ,ಧರ್ಮ ಸ್ಥಳಕ್ಕೆ ಹೋದಾಗ ಭೇಟಿ ಮಾಡುತ್ತೇನೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ, ಅದನ್ನ ಪ್ರಶ್ನೆ ಮಾಡುವ ಅಧಿಕಾರ ವಿಪಕ್ಷಗಳಿಗೆ ಇಲ್ಲ, ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಒಳ್ಳೆ ಕೆಲಸ ಸರ್ಕಾರ ಮಾಡುತ್ತಿದೆ. ಗ್ಯಾರಂಟಿಗಳಿಂದ ಒಬ್ಬ ಹೆಣ್ಣು ಮಗಳಿಗೆ ತಿಂಗಳಿಗೆ ನಾಲ್ಕೈದು ಸಾವಿರ ಉಳಿತಾಯ ಆಗುತ್ತದೆ. ಅದರ ಬಗ್ಗೆ ಟೀಕೆ ಮಾಡೋದು ತಪ್ಪುಎಂದುನಾಗಲಕ್ಷ್ಮಿ ಚೌಧರಿ ಹೇಳಿದರು.
ಕೊಪ್ಪಳದಲ್ಲಿ ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು,ಇದೊಂದು ಅಮಾನವೀಯ ಕೃತ್ಯ, ಈಗಾಗಲೇ ಅಲ್ಲಿನ ಎಸ್ಪಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಜೊತೆಗೆ ಅಲ್ಲಿರುವ ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ಗಳನ್ನ ಬಂದ್ ಮಾಡಬೇಕು ಎಂದು ಅವರು ತಿಳಿಸಿದರು.
