ಮೃತ ಸುರೇಶ್ ಅಂಗಾಂಗ ದಾನ ಮಾಡಲು ನಿರ್ಧರಿಸಿದ ಕುಟುಂಬ

Spread the love

ಮೈಸೂರು: ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಮುಂದಾಗಿದ್ದಾರೆ.

ಡ್ರೈವರ್ ಕೆಲಸ ಮಾಡುತಿದ್ದ ಸುರೇಶ್ ಕಳೆದ ಶನಿವಾರ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮೈಸೂರಿನ ದೇವೇಗೌಡ ಸರ್ಕಲ್ ಬಳಿ ಅಪಘಾತ ಸಂಭವಿಸಿ ಮೆದುಳು ನಿಷ್ಕ್ರಿಯವಾಗಿತ್ತು.

ಹಾಗಾಗಿ ಕುಟುಂಬಸ್ಥರು ಸುರೇಶ್ ಅವರ ಅಂಗಾಂಗ ದಾನ ಮಾಡಲು ಇಚ್ಚಿಸಿದ್ದಾರೆ. ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ನೀಡಿದ್ದು ಕಣ್ಣು,ಕಿಡ್ನಿ, ಹೃದಯ ದಾನ ಮಾಡುವ ಮೂಲಕ ಸುರೇಶ್ ನಾಲ್ಕಾರು ಜನರ ಜೀವನಕ್ಕೆ ಬೆಳಕಾಗಲಿದ್ದಾರೆ.

ಸುರೇಶ್ ಅನುರಾಧ ದಂಪತಿಗೆ ಹನ್ನೊಂದು‌ ವರ್ಷದ ಅಭಿಲಾಷ್, ದೀಕ್ಷಾ ಎಂಟು ವರ್ಷದ ಇಬ್ಬರು ಮಕ್ಕಳಿದ್ದಾರೆ. ಇದೀಗ ಸುರೇಶ್ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಂಗಾಂಗ ದಾನ ಮಾಡಿದ್ದೇವೆ ಸುರೇಶ್ ಮಕ್ಕಳಿಗೆ ಏನಾದರೂ ಸಹಾಯ ಮಾಡಿ. ಬೆಂಕಿಯಲ್ಲಿ ಸುಟ್ಟು ಬೂದಿ ಆಗುವ ಬದಲು ನಾಲ್ಕು ಜನಕ್ಕೆ ಬೆಳಕಾಗಲಿ ಎಂದು ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕುಟುಂಬಸ್ಥರು ದುಃಖಿಸಿದ್ದಾರೆ.