ಮೈಸೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಇಂದು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ. ಹಾಗಾಗಿ ಮೈಸೂರಿನ ಪುರಭವನ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಕಾಂಗ್ರೆಸ್ ಮುಖಂಡ ಜೆ.ಜೆ ಆನಂದ್, ಸೇವಾದಳ ಕಾರ್ಯಧ್ಯಕ್ಷ ಮೋಹನ್, ರಮ್ಮನಹಳ್ಳಿ ಸುರೇಶ್ ಮತ್ತು ಅಂಬೇಡ್ಕರ್ ಯುವ ಸೇನೆ ಬ್ರಿಗೇಡ್ ಪದಾಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದರು.