ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ ರವರ 49ನೇ ಹುಟ್ಟುಹಬ್ಬವನ್ನು ಸೇವಾ ಕಾರ್ಯಗಳ ಮೂಲಕ ಆಚರಣೆ ಮಾಡಲಾಯಿತು.
ಚಾಮುಂಡೇಶ್ವರಿ ಕ್ಷೇತ್ರದ ನಗರ ಮಂಡಲದ ಯುವ ಮೋರ್ಚಾ ವತಿಯಿಂದ ಬೋಗಾದಿಯ ಶ್ರೀದೇವಿ ನರ್ಸಿಂಗ್ ಹೋಮ್ ನಲ್ಲಿನ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.
ಮಹಿಳಾ ಮೋರ್ಚಾ ವತಿಯಿಂದ ರಾಮಕೃಷ್ಣ ನಗರದ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಗಿಡ ನೆಟ್ಟು ನೀರು ಹಾಕಲಾಯಿತು.
ಈ ವೇಳೆ ನಗರ ಪ್ರಧಾನ ಕಾರ್ಯದರ್ಶಿ ಬಿ. ಎಂ. ರಘು, ಚಾಮುಂಡೇಶ್ವರಿ ನಗರ ಮಂಡಲದ ಅಧ್ಯಕ್ಷ ರಾಕೇಶ್ ಭಟ್, ನಗರ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಯುವ ಮೋರ್ಚಾ ಪ್ರಭಾರಿ ರುದ್ರಮೂರ್ತಿ, ಮಂಡಲ ಉಪಾಧ್ಯಕ್ಷೆ ಹೆಚ್.ಜಿ.ರಾಜಮಣಿ, ಎಸ್ ಸಿ ಮೋರ್ಚಾ ನಗರ ಉಪಾಧ್ಯಕ್ಷರಾದ ಎನ್. ಪ್ರತಾಪ್, ಯುವ ಮೋರ್ಚಾ ಅಧ್ಯಕ್ಷ ಮಧು ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ಚಂದನ್ ಗೌಡ ಮತ್ತು ಸಾಗರ್ ಸಿಂಗ್, ಉಪಾಧ್ಯಕ್ಷರುಗಳಾದ ರಾಘವೇಂದ್ರ ಸಿ, ಸೂರ್ಯಪ್ರಕಾಶ್ ಪಿ, ಮಧು ಸಿ ಎಸ್, ಶಿವು,
ಮಹಿಳಾ ಮೋರ್ಚಾ ಅಧ್ಯಕ್ಷರಾದ ಲಕ್ಷ್ಮಿ ಜಯಶಂಕರ್, ಪ್ರದಾನ ಕಾರ್ಯದರ್ಶಿಗಳಾದ ಪುಟ್ಟಮ್ಮಣ್ಣಿ, ಮಂಜುಳಾ, ಉಪಾಧ್ಯಕ್ಷರಾದ ರಮಾಭಾಯಿ, ರಾಧಾ ಮುತಾಲಿಕ್,
ಮುಖಂಡರಾದ ಶುಭಶ್ರೀ, ಬಸವಣ್ಣ, ಸ್ವಾಮಿಗೌಡ, ವಿನುತಾ, ತುಳಸಿ, ಗಿರೀಶ್ ಹಾಗೂ ಆಸ್ಪತ್ರೆ ಸಿಬ್ಬಂದಿ ನಾಗರಾಜ್ ಭಾಗವಹಿಸಿದ್ದರು.