ಕೆಂಪೇಗೌಡ ಜಯಂತಿ:ಜೂ. 26 ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Spread the love

ಮೈಸೂರು: ಶ್ರೀ ಚಾಮುಂಡೇಶ್ವರಿ ಬಳಗದ ವತಿಯಿಂದ ನಾಡಪ್ರಭು ಕೆಂಪೇಗೌಡ 516ನೇ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜೂ.26 ರಂದು ಏರ್ಪಡಿಸಲಾಗಿದೆ.

ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಜೂನ್ 26ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2ರವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸ್ವಯಂ ಪ್ರೇರಿತ ರಕ್ತದಾನ ಮಾಡಬೇಕೆಂದು ಚಾಮುಂಡೇಶ್ವರಿ ಬಳಗದ ಸಂಚಾಲಕ ರವಿಚಂದ್ರ ಮನವಿ ಮಾಡಿದ್ದಾರೆ.

ಈ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಗೌಡ,ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್,ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಆಯುಬ್ ಖಾನ್, ಪ್ರದೇಶ ಕುರುಬರ ಸಂಘದ ನಿಕಟಪೂರ್ವ ರಾಜ್ಯ ಅಧ್ಯಕ್ಷ ಸುಬ್ರಹ್ಮಣ್ಯ ( ಸುಬ್ಬಣ್ಣ), ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.