ಮೈಸೂರು: ಮೈಸೂರಿನ ಊಟಿ ರಸ್ತೆಯಲ್ಲಿರುವ ಮೈಸೂರು ಅರಸರ ಸಮಾಧಿಗಳಿರುವ ಚಾರಿತ್ರಿಕ ಮಹತ್ವದ ಮನುವನ ದಲ್ಲಿರುವ ಸ್ಮಾರಕಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಭೇಟಿ ನೀಡಿದರು.
ಮೈಸೂರಿನಲ್ಲಿ ನಡೆದ ಜನಾಕ್ರೋಶ ಸಮಾವೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅರಸರ ಸಮಾಧಿಗಳಿರುವ ಚಾರಿತ್ರಿಕ ಮಹತ್ವದ ಮನುವನ ದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕಕ್ಕೆ ಉದ್ಯಮಿಗಳೂ ಆದ ಮುರುಗೇಶ್ ನಿರಾಣಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು
ಮರೆಯೋದುಂಟೆ ಮೈಸೂರು ದೊರೆಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಎಂದು ಸ್ಮರಿಸಿದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ
ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದೆ
ಹಾಗೂ ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಮನವಿ ಕೋರಿದ್ದೆ ಎಂದು ಮುರುಗೇಶ್ ನಿರಾಣಿ ಹೇಳಿದರು.