ಆರೋಗ್ಯ ಅರಿವಿನ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿ:ರಾಜೇಶ್

Spread the love

ನಂಜನಗೂಡು: ಆರೋಗ್ಯ ಅರಿವಿನ ಕಾರ್ಯಕ್ರಮಗಳು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಸಹಾಯವಾಗುತ್ತದೆ ಎಂದು
ತಾಲೂಕು ಆರೋಗ್ಯ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಾಜೇಶ್ ತಿಳಿಸಿದರು.

ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ಹದಿಹರೆಯದ ಆರೋಗ್ಯ ಶಿಕ್ಷಣ ಕಾರ್ಯಕ್ರಮದಡಿ ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ಮತ್ತು ಇತರ ಮಾರಕ ರೋಗಗಳ ಅರಿವಿನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾವು ತಿಳಿದುಕೊಂಡ ವಿಷಯಗಳನ್ನು ನಿಮ್ಮ ಕುಟುಂಬದವರಿಗೆ ಸ್ನೇಹಿತರಿಗೆ ನೆರೆಹೊರೆ ಅವರಿಗೆ ತಿಳಿಸಬೇಕೆಂದು ಸಲಹೆ ನೀಡಿದರು.

ರಾಜೇಶ್ ರವರು ವಿದ್ಯಾರ್ಥಿಗಳಿಗೆ ಮಾರಕ ರೋಗಗಳ ಹರಡುವಿಕೆ, ಅವುಗಳ ಪರಿಣಾಮಗಳು ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ನಾಗವೇಣಿ, ಚೇತನ್, ಯಶವಂತ ಉಪಸ್ಥಿತರಿದ್ದರು