ನಂಜನಗೂಡು: ವಿದ್ಯಾರ್ಥಿಗಳು ಜ್ಞಾನಾರ್ಜನೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದರೆ ಖಂಡಿತ ತಮ್ಮ ಜೀವನದಲ್ಲಿ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯವಾಗುತ್ತದೆ ಎಂದು ಡಾ. ಎಂ ಪಿ ವರ್ಷ ರವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡಿದ ಡಾ. ಎಂ ಪಿ ವರ್ಷ, ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯಾಭ್ಯಾಸದ ಅವಧಿಯಲ್ಲಿ ಕ್ರಮಬದ್ಧವಾಗಿ ಓದಬೇಕು ಎಂದು ಹೇಳಿದರು.
ನಂಜನಗೂಡಿನ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ಅವರು ಮಾತನಾಡಿ, ಪದವಿ ಪೂರ್ವ ಹಂತ ಎಂಬುದು ವಿದ್ಯಾರ್ಥಿಗಳಿಗೆ ತಮ್ಮ ಜೀವನವನ್ನು ತಿರುವು ತೆಗೆದುಕೊಳ್ಳುವ ಹಂತ. ಹಾಗಾಗಿ ವಿದ್ಯಾರ್ಥಿಗಳು ಈ ಹಂತದಲ್ಲಿ ಉತ್ತಮ ನಡುವಳಿಕೆಯನ್ನು ಹೊಂದಬೇಕೆಂದು ಕಿವಿ ಮಾತು ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎಂ.ಎಸ್ ರಾಮಪ್ರಸಾದ್ ಮಾತನಾಡಿ ವಿದ್ಯಾರ್ಥಿಗಳು ತಾವು ಏನನ್ನು ಮಾಡುತ್ತಿದ್ದೇವೆ ಎಂಬ ಅರಿವನ್ನು ಹೊಂದಿರಬೇಕು. ಆಗ ಮಾತ್ರ ಪರೀಕ್ಷೆಯಲ್ಲಿ ಸಫಲತೆಯನ್ನು ಸಾಧಿಸಬಹುದು ಎಂದು ಹೇಳಿದರು.
ನಗರಸಭಾ ಸದಸ್ಯರಾದ ಶ್ರೀ ಮಹೇಶ್ ಅತ್ತೀಖಾನೆ ಅವರು ಮಾತನಾಡಿ ಪಾಠ ಮತ್ತು ಪಾಠೇತರ ವಿದ್ಯಾರ್ಥಿಗಳಿಗೆ ಅವಿಭಾಜ್ಯ ಅಂಗ. ಎರಡನ್ನು ಸಮಭಾಗವಾಗಿ ಸ್ವೀಕರಿಸಿದರೆ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಸಮಾಜಕ್ಕೆ ಯೋಗ್ಯ ವ್ಯಕ್ತಿಗಳಾಗಲು ಸಾಧ್ಯ ಎಂದು ತಿಳಿಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಸಿ.ಅರ್. ದಿನೇಶ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದೆ ಸಾರ್ಥಕತೆಯ ಬದುಕನ್ನು ಕಂಡುಕೊಳ್ಳಬೇಕಾದರೆ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಅಧ್ಯಯನವನು ಸಾರ್ಥಕ ರೀತಿಯಲ್ಲಿ ಅಭ್ಯಸಿಸಬೇಕು. ಆಗ ಮಾತ್ರ ಸಾರ್ಥಕ ಜೀವನ ಮಾಡಲು ವಿದ್ಯಾಭ್ಯಾಸ ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಅಶ್ವತ್ ನಾರಾಯಣಗೌಡ, ಲಿಂಗಣ್ಣ ಸ್ವಾಮಿ, ರಂಗಸ್ವಾಮಿ, ಡಾ. ಟಿ.ಕೆ ರವಿ, ಸ್ವಾಮಿ ಗೌಡ ,ಡಾ.ಸುಮಾ ,ದಿನೇಶ್ ಎನ್. ಮತ್ತಿತರರು ಉಪಸ್ಥಿತರಿದ್ದರು.