ಹುಣಸೂರು: ಹುಣಸೂರು ತಾಲೂಕು ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಅವರ ನೇತೃತ್ವದಲ್ಲಿ ಈ ವರ್ಷ ಸುಮಾರು ಒಂದು ಸಾವಿರ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿ ವಿತರಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಏಳೂರು ಮಕ್ಕಳಿಗೆ ಇವುಗಳನ್ನು ವಿತರಿಸಲಾಗಿದೆ.
ಇಂದು ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಈ ಶಾಲೆಯ ಮುಖ್ಯ ಶಿಕ್ಷಕರಾದ ದೊಡ್ಡಸ್ವಾಮಿ ಅವರು ವಯೋನಿವೃತ್ತಿ ಹೊಂದಿದ್ದು ಅವರಿಗೆ ಚೆಲುವರಾಜು ಮತ್ತು ಶಾಲೆಯವರು ಬೀಳ್ಕೊಡುಗೆ ನೀಡಿ ಅಭಿನಂದಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರುಗಳಾದ ಗಂಗರಾಜು, ರೂಪ, ಲಿಖಿನ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಕುಮಾರಸ್ವಾಮಿ ಹಾಗೂ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಧರ್ಮರಾಜ್ ಮತ್ತು ನಂದಿನಿ ಅವರುಗಳು ಉಪಸಿತರಿದ್ದರು.