ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿಯಲಿದೆ,ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು, ಈಗಲಾದರೂ ಈ ನಿರ್ಧಾರ ಮಾಡಲಾಗಿದೆ ಅದಕ್ಕೆ ಖುಷಿ ಇದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.
ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಮುಂದಿನ ಅಧಿವೇಶನದಲ್ಲಿ ಇದರ ಮಸೂದೆ ಮಂಡನೆ ಆಗಲಿದೆ. ಕೇಂದ್ರ ಸರ್ಕಾರದ ನಡೆ ಸ್ವಾಗತಾರ್ಹವಾಗಿದೆ,ಇದರಿಂದ ಕೋಟ್ಯಂತರ ಹಣ ಉಳಿತಾಯ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.
ವಿಪಕ್ಷಗಳು ಒಂದು ದೇಶ ಒಂದು ಚುನಾವಣೆಗೆ ವಿರೋಧ ಮಾಡುತ್ತಿವೆ, ವಿಪಕ್ಷಗಳಿಗೆ ಮೋದಿಯವರ ಭಯ ಇದೆ. ಮತ್ತೆ ಮೋದಿಯವರೇ ಗೆದ್ದು ಬರುತ್ತಾರೆ ಎಂಬ ಭಯ ಅವರಿಗೆ ಎಂದು ಅಶೋಕ್ ವ್ಯಂಗ್ಯವಾಡಿದರು.