ಹನುಮ ಜಯಂತಿ ಅಂಗವಾಗಿ ಪಂಚಮುಖಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ

ಮೈಸೂರು: ನಗರದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಮಾಡಿ ಅಲಂಕಾರ ಮಾಡಲಾಗಿತ್ತು.

ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಹನುಮ ಜಯಂತಿ ಅಂಗವಾಗಿ ಪಂಚಮುಖಿ ಆಂಜನೇಯನಿಗೆ ವಿಶೇಷ ಅಲಂಕಾರ ಹಾಗೂ ಅಭಿಷೇಕ ಪೂಜೆ ಮಾಡಿ ಹನುಮ ಜಯಂತಿ ಮಹೋತ್ಸವವನ್ನು ಸಂಪನ್ನಗೊಳಿಸಲಾಯಿತು.

ಸ್ವಾಮಿಗೆ ಲೋಕಕಲ್ಯಾಣಾರ್ಥವಾಗಿ ಪೂಜೆ ನೆರವೇರಿಸಲಾಗಿದೆ. ಪಂಚಮುಖಿ ಆಂಜನೇಯ ಸ್ವಾಮಿ ಆಯುರ್, ಆರೋಗ್ಯ ಅಭಿವೃದ್ಧಿ ಯಶಸ್ಸು ಕೀರ್ತಿ ಲಾಭಗಳನ್ನು ಸಮಸ್ತ ಪ್ರಜೆಗಳಿಗೆ ಕರುಣಿಸಲಿ,ರಾಷ್ಟ್ರ ರಾಜ್ಯ ಅಭಿವೃದ್ಧಿಯಾಗಿ ರಾಜ್ಯದಲ್ಲಿ ಮಳೆ ಬೆಳೆ ಸಕಾಲಕ್ಕೆ ಆಗಿ ಸಮೃದ್ಧಿ ಗೊಳ್ಳಲೆಂದು ವಿಶೇಷ ಪ್ರಾರ್ಥನೆ ಮಾಡಲಾಗಿದೆ ಎಂದು ಕೃಷ್ಣಮೂರ್ತಿ ತಿಳಿಸಿದ್ದಾರೆ.