post

ಮುಡಾ ಹಗರಣ; ಸಿಎಂ, ಕುಟುಂಬದ ಪಾತ್ರವಿದೆ: ದಾಖಲೆ ಇಟ್ಟ ಕುಮಾರಸ್ವಾಮಿ

ಬೆಂಗಳೂರು,ಆ.23: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಾಖಲೆ ಸಮೇತ ಉತ್ತರ ನೀಡಿದ್ದಾರೆ.

ಇದರ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಹೆಚ್ ಡಿ ಕೆ, ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನೂ ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಸುಳ್ಳು ಹೇಳುವ ನಿಮಗೆ ಭಾಷೆ ಗೊತ್ತಿದೆ ಎಂದು ನಾನಾ ಪರಿಭಾವಿಸುತ್ತೇನೆ ನೀವು ಸ್ವಯಂಘೋಷಿತ ವಕೀಲರಲ್ಲವೇ, ದಾಖಲೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ಒತ್ತಾಯ ಮಾಡಿದ್ದಾರೆ ಹಾಗೂ ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ,ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ, ಈಗ ಹೇಳಿ, ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ ಎಂದು ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ‌ ಪ್ರಶ್ನಿಸಿದ್ದಾರೆ.

ಮುಡಾ ಹಗರಣ; ಸಿಎಂ, ಕುಟುಂಬದ ಪಾತ್ರವಿದೆ: ದಾಖಲೆ ಇಟ್ಟ ಕುಮಾರಸ್ವಾಮಿ Read More

ಗಣಪತಿಯನ್ನು ಕೂರಿಸಲು ಸಿಂಗಲ್ ವಿಂಡೋ ಅನುಮತಿಗೆ ಬಿಜೆಪಿ ಮನವಿ

ಮೈಸೂರು, ಆ.22: ಗಣಪತಿಗಳನ್ನು ಕೂರಿಸಲು ಸಿಂಗಲ್ ವಿಂಡೋ ಅನುಮತಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್‍. ಜಿ ಗಿರಿಧರ್ ಮನವಿ ಮಾಡಿದರು.

ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಎಚ್‍. ಜಿ ಗಿರಿಧರ್ ನೇತೃತ್ವದ ನಿಯೋಗ ಅಪರಾ ಜಿಲ್ಲಾಧಿಕಾರಿ ಪಿ ಶಿವರಾಜು ರವರಿಗೆ ಮನವಿ ಸಲ್ಲಿಸಿತು.

ಸಾಮೂಹಿಕವಾಗಿ ಅನೇಕ ಸಂಘ ಸಂಸ್ಥೆಗಳು ಮತ್ತು ಯುವಕರು ರಸ್ತೆ ಬದಿ, ಪಾರ್ಕ್ ಗಳಲ್ಲಿ ಮತ್ತು ಅವರವರ ಏರಿಯಾಗಳಲ್ಲಿ ಸಾಮೂಹಿಕವಾಗಿ ಕೂರಿಸುವ ಗಣಪತಿಗಳನ್ನು ಸಲೀಸಾಗಿ ಕೂರಿಸುವ ರೀತಿಯಲ್ಲಿ ಎಲ್ಲಾ ಅನುಮತಿ ಗಳನ್ನು ಒಂದೇ ಕಡೆ ನೀಡಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

ಕಾರ್ಪೊರೇಷನ್, ಕೆಇಬಿ, ಕೆಎಸ್ಆರ್ಟಿಸಿ ಮತ್ತು ಪೊಲೀಸ್ ಹಾಗೂ ಅಗ್ನಿಶಾಮಕ ದಳ ಈ ಎಲ್ಲವೂ ಒಂದೇ ಕಡೆ ಅರ್ಜಿಗಳನ್ನು ತೆಗೆದುಕೊಂಡು 24 ಗಂಟೆಗಳಲ್ಲಿ ಪರಿಶೀಲಿಸಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಸರಳವಾಗಿ ಅನುಮತಿ ಸಿಗುವ ರೀತಿಯಲ್ಲಿ ಮಾಡಿಕೊಡಬೇಕು.

ಸಣ್ಣ ಸಣ್ಣ ಮಕ್ಕಳು ತೋರಿಸುವ ಗಣಪತಿ ಗಳಿಗೆ ಅನುಮತಿ ಅಗತ್ಯವಿಲ್ಲವೆಂದು ಘೋಷಿಸಬೇಕು ಸಾಮೂಹಿಕವಾಗಿ ಕೂರಿಸುವ ಗಣಪತಿಗಳನ್ನ ಮುಂದಿನ ಪೀಳಿಗೆಗೆ ಕೊಂಡುಯುವುದಕ್ಕೆ ಸಹಕರಿಸಬೇಕೆಂದು ಮನವಿ ಪತ್ರಯಲ್ಲಿ ಕೋರಲಾಗಿದೆ.

ನಿಯೋಗದಲ್ಲಿ ಬಿಜೆಪಿ ನಗರ ಉಪಾಧ್ಯಕ್ಷರಾದ ಎಸ್. ಕೆ ದಿನೇಶ್, ಜೋಗಿ ಮಂಜು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಎನ್ ಆರ್ ಕ್ಷೇತ್ರದ ಅಧ್ಯಕ್ಷ ಸ್ಮಾರ್ಟ್ ಮಂಜು, ಎನ್ ಆರ್ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ನವೀನ್ ರಾಜ್, ಮತ್ತಿತರರು ಹಾಜರಿದ್ದರು.

ಗಣಪತಿಯನ್ನು ಕೂರಿಸಲು ಸಿಂಗಲ್ ವಿಂಡೋ ಅನುಮತಿಗೆ ಬಿಜೆಪಿ ಮನವಿ Read More

ವಿಕಲಚೇತನರಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ಕಲ್ಪಿಸಿ:ಭವಾನಿ ಶಂಕರ್

ಮೈಸೂರು,ಆ.22:ಚಾಮುಂಡಿಪುರಂನಲ್ಲಿರುವ ಅರುಣೋದಯ ವಿಶೇಷ ಶಾಲಾ ಮಕ್ಕಳಿಗೆ ಮಹರ್ಷಿ ಶಾಲೆಯ ವ್ಯವಸ್ಥಾಪಕ ಅಧ್ಯಕ್ಷರಾದ ಭವಾನಿ ಶಂಕರ್ ಸಮವಸ್ತ್ರ ಹಾಗೂ ಊಟ ವಿತರಿಸಿದರು.

ಈ‌ ವೇಳೆ ಮಾತನಾಡಿದ ಭವಾನಿ ಶಂಕರ್,
ವಿಕಲಚೇತನರಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ಕಲ್ಪಿಸಬೇಕು,ಈ ಮಕ್ಕಳ ಪೋಷಣೆ, ಶಿಕ್ಷಣ, ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ವದ್ದು ಎಂದು ತಿಳಿಸಿದರು.

ಅನೇಕ ವಿಕಲಚೇತನರು ಹಲವಾರು ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ, ಅಂತಹ ಸಾಧಕರ ಜೀವನವನ್ನು ಮಾದರಿಯಾಗಿ ಅನುಸರಿಸಿ, ಕೀಳರಿಮೆ ಹೊಂದದೇ ಉತ್ತಮವಾದುದುನ್ನು ಸಾಧಿಸಲು ಶ್ರಮಿಸಬೇಕು, ಸರ್ಕಾರದ ಸವಲತ್ತುಗಳನ್ನು ಸದುಪಯೋಗ
ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ಮಾತನಾಡಿ
ಈ ಶಾಲೆಯಲ್ಲಿ ಬುದ್ಧಿಮಾಂದ್ಯ ಹಾಗೂ ವಿಕಲಚೇತನ ಮಕ್ಕಳಿಗೆ ಪ್ರತ್ಯೇಕವಾಗಿ ಆರೈಕೆ ಮಾಡಲಾಗುತ್ತಿದ್ದು, ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅವರಿಗೆ ವಿಶೇಷ ತರಬೇತಿಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.

ಇಲ್ಲಿರುವ ಮಕ್ಕಳಲ್ಲಿ ಶೇ.50ರಷ್ಟು ಮಕ್ಕಳು ಕಂಪ್ಯೂಟರ್ ಕಲಿತಿದ್ದಾರೆ. ಅವ ರಲ್ಲಿರುವ ಪ್ರತಿಭೆಯನ್ನು ಹೊರತರು ವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪ್ರಿಯಾಂಕ, ಅಂಕಿತ ಅರುಣೋದಯ ಶಾಲೆಯ ಶಿಕ್ಷಕಿಯರು ಹಾಜರಿದ್ದರು.

ವಿಕಲಚೇತನರಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ಕಲ್ಪಿಸಿ:ಭವಾನಿ ಶಂಕರ್ Read More

ಕೊರಗಜ್ಜ ದೈವಸ್ಥಾನದ ಅರ್ಚಕ ತೇಜುಕುಮಾರ್ ನಾಪತ್ತೆ ಆಗಿಲ್ಲ:ತೇಜಸ್ವಿ

ಮೈಸೂರು, ಆ.22:ಮೈಸೂರಿನ ಕೊರಗಜ್ಜ ದೈವಸ್ಥಾನದ ಪ್ರದಾನ ಅರ್ಚಕ ತೇಜುಕುಮಾರ್ ನಾಪತ್ತೆ ಆಗಿಲ್ಲ ಮೈಸೂರಿನಲ್ಲೇ ಇದ್ದಾರೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.

ಮೈಸೂರು, ಭೂ ವಿವಾದದ ಜತೆಗೆ ಸಂಬಂಧಿಕರ ಕಲಹದಿಂದಾಗಿ ಮೈಸೂರಿನ ರಿಂಗ್ ರಸ್ತೆಯ ಕೇರ್ಗಳ್ಳಿ ಬಳಿ ಇರುವ ಕೊರಗಜ್ಜ ದೇವಸ್ಥಾನಕ್ಕೆ ಕಳೆದ ಒಂದು ತಿಂಗಳಿಂದ ಬೀಗ ಹಾಕಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ದೇವಸ್ಥಾನದ ಅರ್ಚಕ ತೇಜುಕುಮಾರ್ ದೇವಸ್ಥಾನಕ್ಕೆ ಬೀಗ ಜಡಿದು ನಾಪತ್ತೆಯಾಗಿದ್ದಾರೆ ಎಂದು ಯಾರೊ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಎಂದು ತೇಜಸ್ವಿ ಬೇಸರ ವ್ಯಕ್ತಪಡಿಸಿದ್ದಾರೆ.

ತೇಜುಕುಮಾರ್ ಮೈಸೂರಿನಲ್ಲೇ ಇದ್ದಾರೆ ಎಲ್ಲೂ ತಲೆ ಮರೆಸಿಕೊಂಡು ಹೋಗಿಲ್ಲ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ತೇಜುಕುಮಾರ್ ಸರಳ ಸಜ್ಜನಿಕೆಯ ವ್ಯಕ್ತಿತ್ವ ಇರುವ ಮನುಷ್ಯ ಇಂತವರ‌‌ ಮೇಲೆ ಕೋಟ್ಯಂತರ ರೂಪಾಯಿ ದುಡ್ಡು ಮಾಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ

ಕೊರಗಜ್ಜ ದೈವದ ಭಕ್ತಾದಿಗಳು ಆತಂಕ ಪಡುವ ಅಗತ್ಯವಿಲ್ಲ ಕೆಲವೇ ದಿನಗಳಲ್ಲಿ ಪ್ರಧಾನ ಅರ್ಚಕರಾದ ತೇಜುಕುಮಾರ್ ಮೈಸೂರಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಮಾಡಿ ಎಲ್ಲದಕ್ಕೂ ಉತ್ತರಿಸಲಿದ್ದರೆ ಎಂದು ತೇಜಸ್ವಿ ತಿಳಿಸಿದ್ದಾರೆ.

ಕೊರಗಜ್ಜ ದೈವಸ್ಥಾನದ ಅರ್ಚಕ ತೇಜುಕುಮಾರ್ ನಾಪತ್ತೆ ಆಗಿಲ್ಲ:ತೇಜಸ್ವಿ Read More

ರಾಜ್ಯಪಾಲ ಸಿ.ಎಚ್ ವಿಜಯಶಂಕರ್ ಗೆ ಅಭಿನಂದನೆ

ಮೈಸೂರು, ಆ.22: ಮೈಸೂರಿಗೆ ಆಗಮಿಸಿದ ಮೇಘಾಲಯದ ರಾಜ್ಯಪಾಲರಾದ ಸಿ. ಎಚ್ ವಿಜಯಶಂಕರ್ ಅವರನ್ನು ವಿವಿಧ ಸಂಘಟನೆಯ ಮುಖಂಡರು ಅಭಿನಂದಿಸಿದರು.

ಹಾಲುಮತ ಮಹಾಸಭಾದ ಮಾಜಿ ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಈಶ್ವರ್, ವಿವನ್, ಕಡಕೋಳ ಮಹೇಶ್, ಮುಸಲ್ಮಾನ ಮುಖಂಡರಾದ ಕಲೀಮ್, ಶರೀಫ್, 55ನೇ ವಾರ್ಡಿನ ಯುವ ಮುಖಂಡರಾದ ಶಶಿ ರಾಜ್ ಎಂ ಎನ್ ಮತ್ತಿತರರು ಸಿ.ಹೆಚ್. ವಿಜಯಶಂಕರ್ ಅವರಿಗೆ‌ ಶಾಲು ಹೊದಿಸಿ ಹಾರ ಹಾಕಿ ಅಭಿನಂದಿಸಿ ಶುಭ ಕೋರಿದರು.

ರಾಜ್ಯಪಾಲ ಸಿ.ಎಚ್ ವಿಜಯಶಂಕರ್ ಗೆ ಅಭಿನಂದನೆ Read More

ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ:ನಾರಾಯಣಗೌಡ

ಮೈಸೂರು,ಆ.22: ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಮಹಿಳೆಯರಿಗಾಗಿ ಆಯೋಜಿಸಿದ್ದ ಆನ್ ಲೈನ್ ವರಮಹಾಲಕ್ಷ್ಮಿ ಸೆಲ್ಫಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಬಹುಮಾನ ವಿತರಿಸಿ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಸಿ,ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿ ಮಾಡಬೇಕು ಎಂದು ಸಲಹೆ ನೀಡಿದರು.

ನಮ್ಮ ಧರ್ಮದ ಜಾಗೃತಿಯನ್ನು ಎಲ್ಲರಲ್ಲೂ ಮೂಡಿಸಬೇಕು, ಮಂದಿನ ಪೀಳಿಗೆಯ ಮಕ್ಕಳನ್ನು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು, ಈ ಮೂಲಕ ಹಿಂದೂ ಸನಾತನ ಸಂಸ್ಕೃತಿ ರಕ್ಷಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಮಾತನಾಡಿ,
ತಾಯಂದಿರನ್ನೆಲ್ಲಾ ತೊಡಗಿಸಿಕೊಂಡು ನಡೆಸಿಕೊಂಡು ಬರುವಂತಹ ಅತಿ ದೊಡ್ಡ ಹಬ್ಬ ಶ್ರೀ ವರಮಹಾಲಕ್ಷ್ಮಿ ವ್ರತ , ನಮ್ಮ ಸಂಸ್ಕಾರ ಸಂಸ್ಕೃತಿ ಉಳಿಯಬೇಕೆಂದರೆ ಇಂತಹ ಹಬ್ಬಗಳು ಎಲ್ಲಾ ಕಡೆಗಳಲ್ಲಿ ಒಟ್ಟುಗೂಡಿ ನಡೆಸಲ್ಪಡುವುದು ಅತಿ ಮುಖ್ಯವಾಗಿದೆ ಎಂದು ಹೇಳಿದರು.

250ಕ್ಕೂ ಹೆಚ್ಚು ಸ್ಪರ್ಧಿಗಳು ಆನ್ಲೈನ್ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ವಿಜೇತರಾದ
ರಿಷು ಪುರುಷೋತ್ತಮ್,
ಪ್ರಮೀಳಾ ರಾಧಾಕೃಷ್ಣ, ಎಚ್ ಎಸ್ ಪ್ರೇಮಾವತಿ, ಗಾಯಿತ್ರಿ ಜಿ, ಚೈತ್ರ ಗುರುದತ್, ಹರ್ಷಿತ, ರೂಪಶ್ರೀ, ವಿಜಯಲಕ್ಷ್ಮಿ, ಕಲಾ, ಶೃತಿ, ಸುಧಾಬಾಯಿ, ಶಿಲ್ಪ ಅರುಣ್, ಹರ್ಷಿಣಿ ವಿಜಯ್,ನೇತ್ರಾವತಿ ಯಶವಂತ್ ಕುಮಾರ್, ಪ್ರೀತಿ ವಿನಯ್ ಅವರುಗಳಿಗೆ
ಬಹುಮಾನ ನೀಡಲಾಯಿತು.

ನಗರ ಪಾಲಿಕೆ ಮಾಜಿ ಸದಸ್ಯ ಮ. ವಿ ರಾಮಪ್ರಸಾದ್, ಸಮೃದ್ಧಿ ವಾರ್ತಾ ಪತ್ರಿಕೆಯ ಸಂಪಾದಕರಾದ ಸಹನಾ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿದನ್ವಿ ಟ್ರಸ್ಟ್ ಅಧ್ಯಕ್ಷೆ ನಾಗಮಣಿ, ಅಥರ್ವ ಸ್ಕಿಲ್ ಫೌಂಡೇಶನ್ ಅಧ್ಯಕ್ಷೆ ಪುಷ್ಪ, ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ,ಸಚಿಂದ್ರ, ಚಕ್ರಪಾಣಿ ಮತ್ತಿತರರು ಹಾಜರಿದ್ದರು.

ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ:ನಾರಾಯಣಗೌಡ Read More

ಸಹಜ ಸ್ಥಿತಿಗೆ ಬಾರದ ಬಾಂಗ್ಲಾ

ನವದೆಹಲಿ,ಆ.22: ಬಾಂಗ್ಲಾ ದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದ್ದರೂ, ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಮರಳಲೇ ಇಲ್ಲ.

ವಿದ್ಯಾರ್ಥಿಗಳು ಜಾಗೃತ ಗುಂಪುಗಳನ್ನು ರಚಿಸಿ ಕೊಂಡಿದ್ದಾರೆ ಜತೆಗೆ ತಮ್ಮನ್ನು ಹೇಗೆ ನಡೆಸಿಕೊಳ್ಳಬೇಕೆಂದು ನಾಗರಿಕರಿಗೆ ಉಪದೇಶ ಕೂಡಾ ಮಾಡುತ್ತಿದ್ದಾರೆ.

ಮಾಜಿ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಸರ್ಕಾರಕ್ಕೆ ಹತ್ತಿರವಾಗಿದ್ದ ಪತ್ರಕರ್ತರನ್ನು ಅಪರಾಧಿಗಳೆಂದು ಪರಿಗಣಿಸಲಾಗುತ್ತಿದ್ದು ಹಿಂಸೆ ನೀಡಲಾಗುತ್ತಿದೆ,ಜತೆಗೆ ಒಂದಿಬ್ಬರು
ಪತ್ರಕರ್ತರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಸಹಜ ಸ್ಥಿತಿಗೆ ಬಾರದ ಬಾಂಗ್ಲಾ Read More

ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ:ಅಭಿಮಾನಿಗಳು ಖುಷ್

ಬೆಂಗಳೂರು, ಆ‌.22: ಕಾಂತಾರ ಚಾಪ್ಟರ್ 1
ಸಿನಿಮಾದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ಕಳರಿ ಪಯಟ್ಟು ಮಾಡಿದ್ದು ಅಭಿಮಾನಿಗಳು‌ ಕುಣಿಯುವಂತೆ ಮಾಡಿದೆ.

ಇತ್ತೀಚೆಗೆ ರಿಷಬ್ ಕಳರಿ ಪಯಟ್ಟು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಕಾಂತಾರ ಚಾಪ್ಟರ್ 1 ರಲ್ಲಿ
ಕಳರಿ ಪಯಟ್ಟು ‌ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿರುವುದು ಇದು ನಿಜ ಎಂಬುದನ್ನು ಸಾಬೀತು ಮಾಡಿದೆ.

ಚಿತ್ರದಲ್ಲಿನ ಕಳರಿ ಪಯಟ್ಟು ವೀರನ ಪಾತ್ರದ ಲುಕ್ ಅನಾವರಣ ಆಗಿದ್ದು,ಈ ಭಂಗಿಯಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

ಕಾಂತಾರ ಚಾಪ್ಟರ್ 1 ಸಿನಿಮಾವು ಆಗಸ್ಟ್ ಕೊನೆಯ ವಾರದಲ್ಲಿ 4ನೇ ಹಂತದ ಚಿತ್ರೀಕರಣ ನಡೆಯಲಿದೆ.

ಕಾಂತಾರ ಚಾಪ್ಟರ್ 1 ಸಿನಿಮಾ ಕಾಂತಾರದ ಹಿಂದಿನ ಕತೆಯಾಗಿದೆ. ಕದಂಬ ಯುಗದ ಪಂಜುರ್ಲಿ ದೇವತೆಯ ಕಥೆಯನ್ನು ಇದು ಹೊಂದಿದೆ.

ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ:ಅಭಿಮಾನಿಗಳು ಖುಷ್ Read More

ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 79,270 ರೂ ವಶ

ಮೈಸೂರು, ಆ.22: ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿ 79,270 ರೂ ವಶ ಪಡಿಸಿಕೊಂಡಿದ್ದಾರೆ.

ಮೈಸೂರಿನ ಕುವೆಂಪುನಗರ 2ನೇ ಹಂತ, ಎಂ ಬ್ಲಾಕ್ 10ನೇ ಕ್ರಾಸ್ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಅಂದರ್‌ಬಾಹರ್ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ದಾಳಿ ನಡೆಸಿತು.

ಈ‌ ವೇಳೆ ಜೂಜಾಟದಲ್ಲಿ ತೊಡಗಿದ್ದ 6 ಜನರುಗಳನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಪಣವಾಗಿಟ್ಟಿದ್ದ ಒಟ್ಟು 79,270 ರೂ ಹಣ ಮತ್ತು ಇತರೆ ಪರಿಕರಗಳನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 79,270 ರೂ ವಶ Read More

ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಭ್ರಮ

ರಾಯಚೂರು,ಆ.22: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಪ್ರಯುಕ್ತ ರಾಯರ ಉತ್ತರಾರಾಧನೆ ಸಂಭ್ರಮ ಮನೆ ಮಾಡಿದೆ.

ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯುತ್ತಿದೆ.

ಆರಾಧನಾ ಮಹೋತ್ಸವದ ಕೊನೆಯ ಘಟ್ಟ ತಲುಪಿದ್ದು, ರಾಯರು ವೃಂದಾವನಸ್ಥರಾದ ಮರುದಿನವನ್ನ ಉತ್ತರರಾಧನೆಯಾಗಿ ಆಚರಣೆ ಮಾಡಲಾಗಿತ್ತಿದೆ. ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಲಿದ್ದು, ಅಂತಿಮ ಸಿದ್ದತೆಗಳು ನಡೆದಿವೆ.

ಬಳಿಕ ಉತ್ಸವ ಮೂರ್ತಿ ಪ್ರಹ್ಲಾದ ರಾಜರ ಮೆರವಣಿಗೆ ನಡೆಯುತ್ತದೆ. ಮೆರವಣಿಗೆ ಬಳಿಕ ಮಹಾರಥೋತ್ಸವ ನಡೆಯಲಿದೆ. ರಥಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಟಿವೃಷ್ಠಿ ಮಾಡಲಾಗುತ್ತದೆ.

ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಭ್ರಮ Read More