ಬೆಂಗಳೂರು: ಮೂಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಬಿಸಿ ಆಗಿರುವ ಸಿಎಂಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಪಾವತಿ ಆಗದುರುವುದು ಗೊತ್ತಿಲ್ಲವಂತೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕಯರಿತು ಟ್ವೀಟ್ ಮಾಡುರುವ ಅಶೋಕ್ ಔಟ್ ಗೋಯಿಂಗ್ ಸುಎಂ ಸಿದ್ದರಾಮಯ್ಯನವರೇ,ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು ಎಂದು ಕಾಲೆಳೆದಿದ್ದಾರೆ.
ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ.
ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ, ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರೆಂಟಿ ಎಂದು ಅಶೋಕ್ ಎಚ್ಚರಿಸಿದ್ದಾರೆ.