ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ:ವೆಂಕಟೇಶ್

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ತಿಳಿಸಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬೆಟ್ಟದ ತಪ್ಪಲಿನಲ್ಲಿ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಬಾಲಕರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಸಚಿವರು ಮಾತನಾಡಿದರು.

ಭಾರತ ಸಂವಿಧಾನ ಸಮರ್ಪಣೆ ದಿನಾಚರಣೆಯನ್ನು ದೇಶದ್ಯಾಂತ ಆಚರಿಸಲಾಗುತ್ತಿದೆ ನಾವು ಕೂಡ ಚಾಮರಾಜನಗರ ಜಿಲ್ಲಾ ಘಟಕದಲ್ಲಿ ಆಚರಣೆ ಮಾಡಿ ನಿಲಯ ಉದ್ಘಾಟನೆಗೆ ಆಗಮಿಸಿ ಉದ್ಘಾಟನೆ ಮಾಡಿದ್ದೇವೆ, ಸರ್ಕಾರದ ಮಟ್ಟದಲ್ಲಿ ಹಿಂದುಳಿದ ಗಡಿ ಜಿಲ್ಲೆ ಚಾಮರಾಜನಗರವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತಿದೆ ಎಂದು ‌ತಿಳಿಸಿದರು.

ಶಿಕ್ಷಣಕ್ಕೆ ಅದರಲ್ಲೂ ವೃತ್ತಿ ಪರ ಶಿಕ್ಷಣಕ್ಕೂ ಆದ್ಯತೆ ಕೊಟ್ಟು ಕಾಲೇಜುಗಳಿಗೆ ಅನುದಾನಗಳನ್ನು ನೀಡಿ ಅಭಿವೃದ್ಧಿ ಪಡಿಸಲಾಗುತ್ತಿದೆ, ಪಾಲಿಟೆಕ್ನಿಕ್ ಕಾಲೇಜು ಹಾಸ್ಟೆಲ್ ಗೆ ಅನುದಾನ ಕೊಟ್ಟು ಕಟ್ಟಡ ನಿರ್ಮಾಣವಾಗಿದೆ ಕ್ಷೇತ್ರದ ಶಾಸಕರು ಎ. ಆರ್. ಕೃಷ್ಣಮೂರ್ತಿಯವರು ಎಲ್ಲಾ ರೀತಿಯಲ್ಲೂ ಶ್ರಮ ವಹಿಸುತ್ತಿದ್ದಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಲಾಗುತ್ತದೆ, ಆದರೆ ವಿರೋಧ ಪಕ್ಷದವರು ಸುಮ್ಮನೆ ನಮ್ಮ ಸರ್ಕಾರ ಲಾಸ್ ಆಗಿದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಅವರಿಗೆ ಅಧಿಕಾರ ದಾಹ ಇದೆ ಆದ್ದರಿಂದ ಹೇಗಾದರೂ ಮಾಡಿ ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದೆ ಎಂದು ‌ದೂರಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ, ನಮ್ಮ ಚಾಮರಾಜನಗರ ಜಿಲ್ಲೆಗೆ 1 ಲಕ್ಷ ಕೋಟಿ ಅನುದಾನ ಕೊಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನುದಾನವನ್ನು ಕೊಟ್ಟಿದೆ ಆದರೆ ಬಿಜೆಪಿಯವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ, ಕೇಂದ್ರ ಸರ್ಕಾರ ನಮ್ಮ ರಾಜ್ಯದ ಅಭಿವೃದ್ಧಿಗೆ ಯಾವುದೇ ಅನುದಾನವನ್ನು ಕೊಟ್ಟಿಲ್ಲ ಬಿಜೆಪಿಯವರು ಅದರ ಬಗ್ಗೆ ಮಾತನಾಡುತ್ತಿಲ್ಲ, ನಮ್ಮ ಸರ್ಕಾರ ಜನರಿಗೆ ಏನೇನು ಭರವಸೆಗಳನ್ನು ಕೊಟ್ಟಿತ್ತೋ ಏನು ಮಾತು ಕೊಟ್ಟಿತ್ತೊ ಅದರಂತೆ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುವ ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಅಭಿವೃದ್ಧಿ ಕೆಲಸವನ್ನು ಮಾಡುತ್ತಾ ಬರುತ್ತಿದೆ ಎಂದು ವೆಂಕಟೇಶ್ ತಿಳಿಸಿದರು.

ಕೊಳ್ಳೇಗಾಲ ಪಾಲಿಟೇಕ್ನಿಕ್ ಕಟ್ಟಡ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣ ಕಾರ್ಯ ನಡೆದಿದೆ, ಕುಡಿಯುವ ನೀರಿನ ಸೌಲಭ್ಯಗಳನ್ನು ಮಾಡಿ ಕೊಡಲು ಕೇಳಿಕೊಂಡಿದ್ದಾರೆ ಮುಂದಿನ ದಿನಗಳಲ್ಲಿ ಕಾಲೇಜಿಗೆ ಕುಡಿಯುವ ನೀರಿನ ಸೌಲಭ್ಯಗಳನ್ನು ಮಾಡಿ ಕೊಡಲಾಗುವುದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮ ವಹಿಸಲಾಗುವುದು ಎಂದು ‌ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ ಯವರು ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ನಿಲಯ ಸಂವಿಧಾನ ಸಮರ್ಪಣೆ ಅದ ಶುಭ ದಿವಸ ಉದ್ಘಾಟನೆಯಾದುದು ಸಂತೋಷದ ಸಂಗತಿ,ಮಾಜಿ ಶಾಸಕರಾದ ಜಯಣ್ಣ ಅವರ ಅವಧಿಯಲ್ಲಿ ಮಂಜೂರಾದ ಪಾಲಿಟೆಕ್ನಿಕ್ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯ  ಪ್ರಾರಂಭವಾಗಿ ಹಳ್ಳಿಗಾಡಿನ ಮಕ್ಕಳಾ ವ್ಯಾಸಂಗಕ್ಕೆ ಅನುಕೂಲವಾಗಿದೆ ಹಾಗೂ ವಿದ್ಯಾರ್ಥಿ ನಿಲಯ ಗ್ರಾಮೀಣ ಭಾಗದ ಮಕ್ಕಳು ಉಳಿದುಕೊಂಡು ವ್ಯಾಸಂಗ ಮಾಡುವುದಕ್ಕೆ ಉಪಯುಕ್ತವಾಗಿದೆ,  ಜಿಲ್ಲೆಯ ಸಚಿವರಾದ ವೆಂಕಟೇಶ್ ಅವರ ಅನುದಾನಗಳಿಂದ ಬಿಳಿಗಿರಿ ರಂಗನ ಬೆಟ್ಟ ಹಾಗೂ ಹಲವು ಕಡೆ ಅಭಿವೃದ್ಧಿ ಕೆಲಸ ನಡೆಯುತ್ತಿದೆ,ನಮ್ಮ ಕ್ಷೇತ್ರದಲ್ಲಿ 250 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ರೇಷ್ಮೆ ಇಲಾಖೆ ಜಾಗದಲ್ಲಿ ನಿರ್ಮಾಣಕ್ಕೆ ಸಚಿವರು ಅನುಕೂಲ ಮಾಡಿ ಕೊಟ್ಟಿದ್ದಾರೆ,ಈ ಆಸ್ಪತ್ರೆ ನಿರ್ಮಾಣವಾಗುವುದರಿಂದ ಹನೂರು ಯಳಂದೂರು ಕಡೆಯಿಂದ ಬರುವ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮುಡಿಗುಂಡ ಬಳಿ ನೂತನ ಸೇತುವೆ ನಿರ್ಮಾಣಕ್ಕೆ ಸಚಿವರು 15 ಕೋಟಿ ಅನುದಾನ ಕೊಟ್ಟಿದ್ದಾರೆ, ಆದ್ದರಿಂದ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಬಾರಿ ಬಜೆಟ್ ನಲ್ಲಿ 50 ಕೋಟಿ ಅನುದಾನದಲ್ಲಿ ರಸ್ತೆ ಕಾಮಗಾರಿಗಳಿಗೆ ಉಪಯೋಗಿಸಿಕೊಳ್ಳಲು ಆದೇಶವಾಗಿತ್ತು ಆದ್ದರಿಂದ ಕ್ಷೇತ್ರ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ಕೊಟ್ಟು ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಯಳಂದೂರು ತಾಲ್ಲೂಕು ಅಧ್ಯಕ್ಷ ಪ್ರಭುಪ್ರಸಾದ್, ಕುಂತೂರು ಗ್ರಾ.ಪಂ ಅಧ್ಯಕ್ಷೆ ಗಂಗಮ್ಮಣಿ, ಉಪಾಧ್ಯಕ್ಷೆ ನಾಗರತ್ನಮ್ಮ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಇಒ ಮೋನಾರೋತ್, ಉಪವಿಭಾಗಾಧಿಕಾರಿ ದಿಲೀಪ್ ಕುಮಾರ್ ಮೀನಾ, ತಹಶಿಲ್ದಾರ್ ಬಸವರಾಜು, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ತೋಟೇಶ್ ಮತ್ತಿತರರು ಹಾಜರಿದ್ದರು.