ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿದ ಸರ್ಕಾರ: ಅಶೋಕ್ ಟೀಕೆ

Spread the love

ಬೆಂಗಳೂರು: ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ಸರ್ಕಾರ ರಾಜಕೀಯ ವೇದಿಕೆ ಮಾಡಿದೆ ಎಂದು ಪ್ರತಿಪಕ್ಷ‌ ನಾಯಕ ಆರ್.ಅಶೋಕ್ ‌ಟೀಕಿಸಿದ್ದಾರೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದೆ ಎಂದು ಅಶೋಕ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ – ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ ಎಂದು ಪ್ರಶ್ನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅಶೋಕ್
ಆಗ್ರಹಿಸಿದ್ದಾರೆ.