ಸೈನಿಕ ಅಕಾಡೆಮಿ ವತಿಯಿಂದ ರಾಜ್ಯೋತ್ಸವ

Spread the love

ಮೈಸೂರು: ಮೈಸೂರಿನ ಸೈನಿಕ ಅಕಾಡೆಮಿ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು
ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಿಲಿಕಾನ್ ವ್ಯಾಲಿ ಬಡಾವಣೆ ಸದಸ್ಯರು, ಸೈನಿಕ ಅಕಾಡೆಮಿಯ ಅಭ್ಯರ್ಥಿಗಳ ಸಮ್ಮುಖದಲ್ಲಿ ಸೈನಿಕ ಅಕಾಡೆಮಿಯ ಸಂಸ್ಥಾಪಕರೂ ಕಮಾಂಡೋ ಶ್ರೀಧರ ಸಿ ಎಂ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳವಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿ ಜೈಕಾರ ಕೂಗಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ರೀಡಾ ಪಟುಗಳಿಗೆ ಪದಕ ಮತ್ತು ಬಹುಮಾನ ವಿತರಣೆ ಮಾಡಿ ಭವಿಷ್ಯದ ಸೈನಿಕರನ್ನು ಪ್ರೋತ್ಸಾಹಿಸಲಾಯಿತು.

ಸಮಾರಂಭದಲ್ಲಿ ಸಹ ಸಂಸ್ಥಾಪಕಿ ಅನಿತಾ ಶ್ರೀಧರ, ಅಧ್ಯಾಪಕರಾದ ಸಂತೋಷ ಕುಮಾರ್, ಸ್ವಾಮಿಗೌಡ, ಸಹ ಸಿಬ್ಬಂದಿಗಳು, ಬಡಾವಣೆಯ ಸದಸ್ಯರು ಬೊರೇಗೌಡರು, ಪ್ರಭುದೇವ್, ದೀಪು, ಸೈನಿಕ ಅಕಾಡೆಮಿಯ ಅಭ್ಯರ್ಥಿಗಳು ಮತ್ತು ನಾಡ ಪ್ರೇಮಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.