ರೈತನ ಗಾಯಗೊಳಿಸಿದ್ದ ಹುಲಿಯ ಸೆರೆ

Spread the love

ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯುವಲ್ಲಿ
ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದು,ಗ್ರಾಮದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಶನಿವಾರ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿದಿದ್ದಾರೆ.

ಆನೆಗಳ ಹುಲಿಯನ್ನು ಸುತ್ತುವರಿದ ವೇಳೆ ಅರವಳಿಕೆ ಮದ್ದು ನೀಡಿ ವ್ಯಾಘ್ರನನ್ನು ಸೆರೆಹಿಡಿಯಲಾಗಿದೆ.

ಈ ಹುಲಿ ಕಳೆದ ಮೂರು ದಿನಗಳ ಹಿಂದೆ ರೈತನ ಮೇಲೆ ದಾಳಿ ಮಾಡಿದ್ದು,ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾಗಾಗಿ ಗ್ರಾಮಸ್ಥರ ಆಗ್ರಹದ ಮೇರೆಗೆ ನಿನ್ನೆಯಿಂದ ಅರಣ್ಯ ಇಲಾಖೆ ತಂಡವು ನಿರಂತರವಾಗಿ ಸೆರೆ ಕಾರ್ಯಾಚರಣೆ ನಡೆಸುತ್ತಿತ್ತು,ಕಡೆಗೂ* ಯಶಸ್ವಿಯಾಗಿದ್ದು, ಗ್ರಾಮಸ್ಥರು ಸಧ್ಯ ಬದುಕಿದೆವು ಎಂದು ನಿಟ್ಟುಸಿರು ಬಿಟ್ಟು ಅರಣ್ಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.