ನಾಳೆಯಿಂದ ಪ.ಜಾ ಒಳಮೀಸಲಾತಿ ವರ್ಗೀಕರಣ: ದತ್ತಾಂಶ ಶೇಖರಣಾ ಸಮೀಕ್ಷೆ

Spread the love

ಮೈಸೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್. ಏನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆಯು ಮೈಸೂರು ಜಿಲ್ಲೆಯಲ್ಲಿ ಮೇ 5 ರಿಂದ 17 ರವೆರೆಗೆ ನಡೆಯಲಿದೆ.

ಪರಿಶಿಷ್ಟ ಜಾತಿ ಸಮುದಾಯದವರು ಸಮೀಕ್ಷೆಯ ಸಂದರ್ಭದಲ್ಲಿ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ನಿಖರ ಮಾಹಿತಿ ನೀಡುವಂತೆ ಹಾಗೂ ಪರಿಶಿಷ್ಟ ಜಾತಿಯ ಕುಟುಂಬಸ್ಥರು ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ.

ಮೇ 5 ರಿಂದ 17 ರವರೆಗೆ ಮನೆ ಮನೆ ಸಮೀಕ್ಷೆ ನಡೆಯಲಿದೆ. ಗಣತಿದಾರರನ್ನು ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಸಮೀಕ್ಷೆಯನ್ನು ಆ್ಯಪ್ ನಲ್ಲಿ ಭರ್ತಿ ಮಾಡಲಾಗುವುದು.

ಇದಲ್ಲದೇ ಮೇ 19 ರಿಂದ 23 ರವರೆಗೆ ಆನ್‌ಲೈನ್ ಮೂಲಕ ಸ್ವಯಂ-ಘೋಷಣೆಗೆ ಅವಕಾಶವಿದೆ.

ಸಮೀಕ್ಷೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ತಮ್ಮ ಜಾತಿ ಹಾಗೂ ಉಪಜಾತಿಗಳನ್ನು ಸರಿಯಾಗಿ ತಿಳಿಸಬೇಕೆಂದು ಜಿಲ್ಲಾಧಿಕಾರಿ ಗಳು ಮನವಿ ಮಾಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 2950 ಗಣತಿದಾರರನ್ನು ನೇಮಕ ಮಾಡಲಾಗಿದ್ದು ಶೇಕಡಾ 10ರಷ್ಟು ಗಣತಿದಾರರನ್ನು ಕಾಯ್ದಿರಿಸಲಾಗಿದೆ, ಪ್ರತಿ 10 ಗಣದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಸಮೀಕ್ಷೆಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದೆ ಮೊದಲ ಹಂತದಲ್ಲಿ ಮೇ 5 ರಿಂದ 17ರವರೆಗೆ ಸಮೀಕ್ಷೆದಾರರು ಮನೆಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು.ಎರಡನೇ ಹಂತದಲ್ಲಿ ಮೇ 19 ರಿಂದ 21 ರವರೆಗೆ ಸಮೀಕ್ಷೆ ಬ್ಲಾಕ್ ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು ಮನೆ ಮನೆ ಭೇಟಿಯ ಅವಧಿಯಲ್ಲಿ ಬಿಟ್ಟು ಹೋದ ಎಸ್ ಸಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು.

ಮೂರನೇ ಹಂತದಲ್ಲಿ ಮೇ 22 ಮತ್ತು 23 ನೇ ತಾರೀಕಿನಂದು ಆನ್ಲೈನ್ ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಲಕ್ಷ್ಮೀಕಾಂತರೆಡ್ಡಿ ತಿಳಿಸಿದ್ದಾರೆ.