ಶಿವನ ಸಮುದ್ರ ಸಮೂಹ ದೇವಾಲಯಗಳ ಹುಂಡಿ ಏಣಿಕೆ:18. 22 ಲಕ್ಷ ರೂ.ಸಂಗ್ರಹ

ಕೊಳ್ಳೇಗಾಲ: ತಾಲ್ಲೂಕಿನ‌ ಶಿವನ ಸಮುದ್ರದ ಸಮೂಹ ದೇವಾಲಯಗಳ ಹುಂಡಿ ಏಣಿಕೆ ಕಾರ್ಯ ಗುರುವಾರ ನಡೆದಿದ್ದು, 5 ತಿಂಗಳ ಅವಧಿಯಲ್ಲಿ ಬರೋಬ್ಬರಿ 18. 22 ಲಕ್ಷ ರೂ. ಹಣ ಸಂಗ್ರಹವಾಗಿದೆ.

ತಹಶೀಲ್ದಾರ್ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ಮಧ್ಯ ರಂಗನಾಥಸ್ವಾಮಿ ದೇವಾಲಯದ ದಾಸೋಹ ಭವನದಲ್ಲಿ ಸಮೂಹ ದೇವಾಲಯಗಳಾದ ಮಧ್ಯ ರಂಗನಾಥಸ್ವಾಮಿ ದೇವಾಲಯ, ಪ್ರಸನ್ನ ಮೀನಾಕ್ಷಿ ಹಾಗೂ ಸೋಮೇಶ್ವರ ದೇವಾಲಯ ಮತ್ತು ಆದಿಶಕ್ತಿ ಮಾರಮ್ಮ ದೇವಾಲಯಗಳ‌ ಹುಂಡಿಗಳ ಎಣಿಕೆ ನಡೆಯಿತು.

ಈ ಮೂರು ದೇವಾಲಯಗಳಿಂದ ಒಟ್ಟು 18, 22, 640 ರೂ. ನಗದು 1.5 ಗ್ರಾಂ. ಚಿನ್ನ ಹಾಗೂ 8 ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿದೆ.

ಬೆಳಿಗ್ಗೆಯಿಂದ ಸಂಜೆ ವರೆಗೆ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು, ಈ ವೇಳೆ ಸಮೂಹ ದೇವಾಲಯಗಳ ಕಾರ್ಯ ನಿರ್ವಾಹಕಾಧಿಕಾರಿ ಸುರೇಶ್, ಪಾಳ್ಯ ಉಪ ತಹಶೀಲ್ದಾರ್ ವಿಜಯ ಕುಮಾರ್, ರಾಜಸ್ವ ನೀರಿಕ್ಷಕ ರಂಗಸ್ವಾಮಿ, ಕಸಬಾ ರಾಜಸ್ವ ನೀರಿಕ್ಷಕ ನಿರಂಜನ್, ಕಸಬಾ ಮತ್ತು ಪಾಳ್ಯ ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳಾದ ರಾಕೇಶ್ ಮರಾಠ್, ಜ್ಯೋತಿ, ಪ್ರದೀಪ್, ಶಾಂತರಾಜು, ಸತೀಶ್, ಮೀನಾಕ್ಷಿ, ಗ್ರಾಮ ಸಹಾಯಕರುಗಳಾದ ಸೀಗನಾಯಕ, ಬಸವರಾಜು, ನಾಗರಾಜು ಕೋಟೆಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ಮತ್ತು ಸಿಬ್ಬಂದಿ, ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪ್ರಭಾರ ಎಎಸ್ಐ ಉಮಾವತಿ, ಮುಖ್ಯಪೇದೆ ರಾಘವೇಂದ್ರ, ರಾಜಪ್ಪ, ದೇವಾಲಯದ ಅರ್ಚಕರಾದ ಶ್ರೀಧರ್ ಆಚಾರ್, ಮಾಧವನ್, ಮಧುಸೂದನ್, ನಾಗರಾಜು ದೀಕ್ಷಿತ್ ಮತ್ತಿತರರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.