(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ತಾಲ್ಲೂಕಿನ ಶಿವನ ಸಮುದ್ರದ ಸಮೂಹ ದೇವಾಲಯಗಳ ಹುಂಡಿ ಏಣಿಕೆ ಕಾರ್ಯ ಗುರುವಾರ ನಡೆದಿದ್ದು, 5 ತಿಂಗಳ ಅವಧಿಯಲ್ಲಿ ಬರೋಬ್ಬರಿ 21, 78, 740 ರೂ. ಹಣ ಸಂಗ್ರಹವಾಗಿದೆ.
ಉಪವಿಭಾಗಾಧಿಕಾರಿ ಮಹೇಶ್ ನೇತೃತ್ವದಲ್ಲಿ ಮಧ್ಯ ರಂಗನಾಥಸ್ವಾಮಿ ದೇವಾಲಯದ ದಾಸೋಹ ಭವನದಲ್ಲಿ ಸಮೂಹ ದೇವಾಲಯಗಳಾದ ಮಧ್ಯ ರಂಗನಾಥಸ್ವಾಮಿ ದೇವಾಲಯ, ಪ್ರಸನ್ನ ಮೀನಾಕ್ಷಿ ಹಾಗೂ ಸೋಮೇಶ್ವರ ದೇವಾಲಯ ಮತ್ತು ಆದಿಶಕ್ತಿ ಮಾರಮ್ಮ ದೇವಾಲಯಗಳ ಹುಂಡಿಗಳ ಎಣಿಕೆ ನಡೆಯಿತು.

ಈ ಮೂರು ದೇವಾಲಯಗಳಿಂದ ಒಟ್ಟು 21, 78, 740 ರೂ. ನಗದು ಸಂಗ್ರಹವಾಗಿದೆ. 2 ಗ್ರಾಂ. ಚಿನ್ನದ ಪದಾರ್ಥಗಳು, 8 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಬೆಳಿಗ್ಗೆ ಯಿಂದ ಸಂಜೆ ವರೆಗೆ ಹುಂಡಿಗಳ ಎಣಿಕೆ ಕಾರ್ಯ ನಡೆದಿದೆ. ಈ ವೇಳೆ ಸಮೂಹ ದೇವಾಲಯಗಳ ಕಾರ್ಯ ನಿರ್ವಾಹಕಾಧಿಕಾರಿ ಸುರೇಶ್, ಪಾಳ್ಯ ಉಪ ತಹಶೀಲ್ದಾರ್ ವಿಜಯ ಕುಮಾರ್, ರಾಜಸ್ವ ನೀರಿಕ್ಷಕ ರಂಗಸ್ವಾಮಿ, ಕಸಬಾ ರಾಜಸ್ವ ನೀರಿಕ್ಷಕ ನಿರಂಜನ್, ಕಸಬಾ ಮತ್ತು ಪಾಳ್ಯ ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳಾದ ರಾಕೇಶ್, ಮಮತ, ಪ್ರದೀಪ್, ಶಾಂತರಾಜು, ಭೀಮಪ್ಪ, ಮಹೇಶ್, ಅನಿಲ್, ಗ್ರಾಮ ಸಹಾಯಕರುಗಳಾದ ಸೀಗನಾಯಕ, ಬಸವರಾಜು, ನಾಗರಾಜು ಕೋಟೆಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ಮತ್ತು ಸಿಬ್ಬಂದಿ, ಕೊಳ್ಳೇಗಾಲ ಗ್ರಾಮಾಂತರ ಠಾಣೆ ಸಿಬ್ಬಂದಿಗಳಾದ ಮುಖ್ಯಪೇದೆ ವಿನೋದ್, ಕಿರಣ್ ಕುಮಾರ್, ರೇವಣ್ಣಸ್ವಾಮಿ, ದೇವಾಲಯದ ಅರ್ಚಕರಾದ ಶ್ರೀಧರ್ ಆಚಾರ್, ಮಾಧವನ್, ಮಧುಸೂದನ್, ನಾಗರಾಜು ದೀಕ್ಷಿತ್ ಮತ್ತಿತರರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.