ಮೈಸೂರು: ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ವತಿಯಿಂದ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಭೈರವೈಕ್ಯ ಪೂಜ್ಯ ಜಗದ್ಗುರು ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ರವರ 80ನೇ ಜಯಂತೋತ್ಸವ ಆಚರಿಸಲಾಯಿತು
ಅಗ್ರಹಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ ಅವರು ಪುಷ್ಪ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಅನ್ನದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ಎಲ್ಲಾ ವರ್ಗದ, ಸಮುದಾಯದ, ಬಡ ಜನರ ಸೇವೆಯನ್ನು ಮಾಡಿ, ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಿದವರು ಶ್ರೀ ಬಾಲಗಂಗಾಧರನಾಥ ಗುರುಗಳು ಎಂದು ಸ್ಮರಿಸಿದರು.
ದೇಶಾದ್ಯಂತ ಸುಮಾರು 545 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಕೋಟ್ಯಂತರ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ಜಗತ್ತು ಕಂಡ ಮಹಾನ್ ಪುರುಷರಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಒಬ್ಬರು,ಸ್ವಾಮೀಜಿಯವರ ಕೊಡುಗೆ ನಾಡಿಗೆ ಅಪಾರ ಎಂದು ಬಣ್ಣಿಸಿದರು.
ರಾಜ್ಯಾಧ್ಯಕ್ಷ ಸಿ.ಜಿ ಗಂಗಾಧರ್ ಮಾತನಾಡಿ, ಸ್ವಾಮೀಜಿಯವರು ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಬಹಳ ಬೃಹತ್ ರೀತಿಯಲ್ಲಿ ಕಟ್ಟಿ, ಚಿನ್ನದ ಗರಿಯನ್ನಾಗಿ ಮಾಡಿ, ಪ್ರತಿ ನಿತ್ಯ ಅಲ್ಲಿಗೆ ಆಗಮಿಸುವ ಭಕ್ತಾದಿಗಳಿಗೆ ಕಾಲಭೈರವೇಶ್ವರ ದರ್ಶನದ ಜೊತೆಗೆ ನಿತ್ಯ ದಾಸೋಹವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಹಿಂದುಳಿದ ವರ್ಗ, ದಲಿತರು ಸೇರಿದಂತೆ
ಪ್ರತಿಯೊಂದು ಸಮುದಾಯದವರಿಗೂ, ದೀಕ್ಷೆಕೊಟ್ಟು ಮಠಗಳನ್ನು ಸ್ಥಾಪಿಸಲು ಸಹಾಯ ಮಾಡಿದವರು, ರಾಮಜನ್ಮಭೂಮಿಗಾಗಿ ಹೋರಾಟ ಮಾಡಿದ ಮಹಾನ್ ಗುರುಗಳು ಎಂದು ಬಣ್ಣಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಯಶಸ್ವಿ ಎಸ್ ಸೋಮಶೇಖರ್ ಅವರು ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಕೆ.ವಿ ಶ್ರೀಧರ್, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಉಪಾಧ್ಯಕ್ಷ ಶಿವಲಿಂಗಯ್ಯ, ಮಹಿಳಾ ಅಧ್ಯಕ್ಷೆ ಲತಾ ರಂಗನಾಥ್, ಯಶ್ವಂತ್, ಸಂಜಯ್ ಕೆ, ಸುಬ್ಬೆಗೌಡ, ಕೃಷ್ಣಪ್ಪ, ನೇಹಾ, ಪದ್ಮ, ಲಕ್ಷ್ಮೀ ಶಿವರಾಜ್, ಭಾಗ್ಯಮ್ಮ, ದರ್ಶನ್ ಗೌಡ, ರವಿವಲಂಪಿಯ, ರಾಮಕೃಷ್ಣೇಗೌಡ, ಪ್ರಭಾಕರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.