ಶಿಗ್ಗಾವಿ: ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಏರತೊಡಗಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಚಾರದಲ್ಲಿ ತೊಡಗಿದರು.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ಪರವಾಗಿ ಶಿಗ್ಗಾವಿ- ಸವಣೂರು ಕ್ಷೇತ್ರದ ಮಣ್ಣೂರ , ಫಕೀರ ನಂದಿಹಳ್ಳಿ, ಮಾವೂರ ಹಾಗೂ ಚಳ್ಯಾಳ ಗ್ರಾಮಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಲಾಯಿತು.
ಪ್ರಚಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್,ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀ ವತ್ಸ ಸಾಥ್ ನೀಡಿ ಮತಯಾಚನೆ ಮಾಡಿದರು.

ಈ ವೇಳೆ ಶ್ರೀವತ್ಸ ಅವರು ಭರತ್ ಬೊಮ್ಮಾಯಿ ಅವರೊಂದಿಗೆ ಚುನಾವಣೆ ಕುರಿತು ಸಮಾಲೋಚನೆ ನಡೆಸಿದರು