ಮೈಸೂರು: ರಾಜ್ಯಸಭಾ ಸದಸ್ಯರೂ ಹೆಮ್ಮೆಯ ಕನ್ನಡತಿ, ಪದ್ಮಭೂಷಣ ಪುರಸ್ಕೃತರಾದ ಸುಧಾಮೂರ್ತಿ ಮತ್ತು ಪದ್ಮಶ್ರೀ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ
ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು.
ಅಪೂರ್ವ ಸ್ನೇಹ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ನೀಡುವ ಮೂಲಕ ಈ ಇಬ್ಬರು ಸಾಧಕರ ಜನುಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಕರ್ನಾಟಕದ ಇಬ್ಬರು ಮಹನೀಯರ ಕೊಡುಗೆ ಅಪಾರ.ಸಾಹಿತ್ಯ,ಹಾಗೂ ಅವರ ಸಮಾಜ ಸೇವೆಗಳು ಅನನ್ಯ, ಅವರ ಸೇವೆಗಳು ನಮ್ಮಂತ ನೂರಾರು ಸಂಘಟನೆಗಳಿಗೆ ಸ್ಪೂರ್ತಿದಾಯಕ,ಕನ್ನಡದ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಶ್ರೀಮಂತ ಗೊಳಿಸಿರುವ ಇಬ್ಬರು ಮಹನೀಯರು ಆದರ್ಶಪ್ರಾಯರು ಎಂದು ಹೇಳಿದರು.
ಈ ವೇಳೆ ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಚಕ್ರಪಾಣಿ, ಜತ್ತಿ ಪ್ರಸಾದ್, ಮಹಾನ್ ಶ್ರೇಯಸ್, ಶಾಲೆಯ ಮುಖ್ಯ ಶಿಕ್ಷಕರಾದ ರತ್ನಮಾಲ,ಶೃತಿ, ನರಸಿಂಹ,ಶಾಲೆಯ ಶಿಕ್ಷಕ ವೃಂದ ಮತ್ತಿತರರು ಹಾಜರಿದ್ದರು.