ಹುಣಸೂರು: ಹುಣಸೂರು ತಾಲೂಕಿನಲ್ಲಿ ಕಬ್ಬು ಬೆಳೆಗಾರರಿಗೆ ಭಾರಿ ಬೆಂಬಲ ವ್ಯಕ್ತವಾಯಿತು.
ನಿನ್ನೆ ಅಂದರೆ ಶುಕ್ರವಾರ ಕರ್ನಾಟಕ ರೈತ ಸಂಘ ಪುಟ್ಟಣ್ಣಯ್ಯ ಬಣ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಸೇರಿದಂತೆ ತಾಲೂಕಿನ ಅನೇಕ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸರ್ಕಾರ ಪೂರ್ಣವಾಗಿ ಈಡೇರಿಸಬೇಕೆಂದು ಒತ್ತಾಯಿಸಿದರು.
ಹುಣಸೂರಿನಲ್ಲಿ ಹೆದ್ದಾರಿ ತಡೆದು ನಂತರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯು ಕರ್ನಾಟಕ ರೈತ ಸಂಘ ಪುಟ್ಟಣ್ಣಯ್ಯ ಬಡದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ನೇತೃತ್ವದಲ್ಲಿ ನಡೆಯಿತು.

ಆನಂತರ ತಹಸೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿ ಕಬ್ಬು ಬೆಳೆಗಾರರು ಇಟ್ಟಿರುವ ಬೇಡಿಕೆಯಂತೆ ಟನ್ ಕಬ್ಬಿಗೆ 3500 ರೂ ನೀಡುವಂತೆ ಒತ್ತಾಯಿಸಿದರು.
