ಸುಪ್ರೀಂ ಕೋರ್ಟ್ ಆದೇಶ‌ ಸ್ವಾಗತಿಸುವೆ:ರಮ್ಯಾ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮೋಹಕ ತಾರೆ ರಮ್ಯಾ ತಿಳಿಸಿದ್ದಾರೆ.

ನಟ ದರ್ಶನ್ ಜಾಮೀನು ರದ್ದಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ,ಸುಪ್ರೀಂ ಕೋರ್ಟ್ ಆದೇಶಗಳಿಗೆ ಯಾವುದೇ ಕೇಸಾಗಲಿ ಎಲ್ಲರೂ ತಲೆಬಾಗಬೇಕು ಎಂದು ಹೇಳಿದರು.

ದರ್ಶನ್ ಅವರು ಲೈಟ್ ಬಾಯ್‌ ಆಗಿ ಸಿನಿಮಾರಂಗಕ್ಕೆ ಬಂದು ಬಹಳ ಕಷ್ಟಪಟ್ಟು ಮುಂದೆ ಬಂದಿದ್ದಾರೆ‌ ಎಂದು ತಿಳಿಸಿದರು.

ಅವರು ಮನಸು ಮಾಡಿದ್ದರೆ ಇನ್ನೂ ಎತ್ತರಕ್ಕೆ ಬೆಳೆಯಬಹುದಿತ್ತು,ಆದರೆ ಎಲ್ಲವನ್ನೂ ಹಾಳು ಮಾಡಿಕೊಂಡರು ಎಂದು ಹೇಳಿದರು.

ತಮಗೆ ಬರುತ್ತಿದ್ದ ಅಶ್ಲೀಲ ಸಂದೇಶಗಳು ಕಡಿಮೆಯಾಗಿದೆ ಸಧ್ಯ ನೆಮ್ಮದಿ ಇದೆ,ಕಿರಿಕ್ ತಪ್ಪಿದೆ ಎಂದು ರಮ್ಯಾ ತಿಳಿಸಿದರು.