ಬಿಜೆಪಿ ಸದಸ್ಯತ್ವ ಅಭಿಯನಾನ ಯಶಸ್ವಿಗೊಳಿಸಿ- ಶ್ರೀವತ್ಸ ಕರೆ

ಮೈಸೂರು: ದೇಶದಲ್ಲಿ ಬಿಜೆಪಿಯನ್ನು ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನವನ್ನು ಎಲ್ಲಾ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಯಶಸ್ವಿಗೊಳಿಸಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ಕರೆ ನೀಡಿದರು.

ನಗರದ ಚಾಮುಂಡಿ ಬೆಟ್ಟದ ಪಾದದ ಬಳಿ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಬಿಜೆಪಿ
ಸದಸ್ಯತ್ವ ಅಭಿಯಾನದ ಮಹಾಸಂಪರ್ಕ ಅಭಿಯಾನದಲ್ಲಿ ಸದಸ್ಯತ್ವ ನೊಂದಣಿ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪ್ರತೀ ಬೂತ್ ನಲ್ಲಿ ಕನಿಷ್ಠ 300 ಸದಸ್ಯರಂತೆ ಕ್ಷೇತ್ರದಲ್ಲಿ 80000ಸಾವಿರಕ್ಕೂ ಅಧಿಕ ಸದಸ್ಯರನ್ನು ನೋಂದಣಿ ಮಾಡಬೇಕಿದೆ, ಮಾಹಾಸಂಪರ್ಕ ಅಭಿಯಾನದಲ್ಲಿ ಕ್ಷೇತ್ರಾದ್ಯಂತ ಎಲ್ಲ 265 ಬೂತ್ ಗಳಲ್ಲೂ ಏಕಕಾಲಕ್ಕೆ ಕಾರ್ಯಕರ್ತರು ಸದಸ್ಯತ್ವ ನೋಂದಣಿ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಪ್ರತಿ ಬೂತಿನಲ್ಲಿ ಗರಿಷ್ಠ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಗುರಿ ಹೊಂದಬೇಕು ಎಂದು ಶ್ರೀವತ್ಸ ಸಲಹೆ ನೀಡಿದರು

ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಉಪಾಧ್ಯಕ್ಷ ಜೋಗಿಮಂಜು, ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಕೆ.ಆರ್. ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಜಯಶಂಕರ್, ರಮೇಶ್, ಡಿ.ಪಿ. ಸುರೇಶ್, ಅಶೋಕ್, ಪ್ರದೀಪ್, ಮಧುಸೂಧನ್, ಕಿಶೋರ್, ವರುಣ್, ಹರ್ಷ, ಚರಣ್, ಪ್ರಶೀಕ್, ಶಿವಪ್ರೇರಣ್, ರವಿಕುಮಾರ್, ಶಾರದ, ಮಂಜುನಾಥ್ ಮತ್ತಿತರ ಮುಖಂಡರು ಹಾಜರಿದ್ದರು.

ಬಿಜೆಪಿ ಸದಸ್ಯತ್ವ ಅಭಿಯನಾನ ಯಶಸ್ವಿಗೊಳಿಸಿ- ಶ್ರೀವತ್ಸ ಕರೆ Read More

ಬಿಜೆಪಿ ಸದಸ್ಯತ್ವ ಅಭಿಯಾನ:ಮಂಡ್ಯದಲ್ಲಿ ಅಶೋಕ್ ಸಮ್ಮುಖದಲ್ಲಿ ಸಭೆ

ಮಂಡ್ಯ: ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಬಿಜೆಪಿ ಮಂಡ್ಯ ಕಚೇರಿಯಲ್ಲಿ ಸಭೆ ಹಮ್ಮಿಕೊಂಡು ಸುದೀರ್ಘ ಚರ್ಚೆ ನಡೆಸಲಾಯಿತು.ಪ್ರತಿಪಕ್ಷ ನಾಯಕ ಆರ್.ಅಶೋಕ್ ಅಗತ್ಯ ಸಲಹೆ ನೀಡಿದರು.

ಬಿಜೆಪಿ ಸದಸ್ಯತ್ವದ ಅಭಿಯಾನ ಶ್ರೀರಂಗಪಟ್ಟಣ ಕ್ಷೇತ್ರದ ತಾಲೂಕು ಮಾಜಿ ಅಧ್ಯಕ್ಷ ಟಿ ಶ್ರೀಧರ್ ಹಾಗೂ ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭಾಗವಹಿಸಿ ಅಗತ್ಯ ಸಲಹೆ ನೀಡಿದರು.

ಸದಸ್ಯತ್ವ ಗುರಿ ಮುಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಶೋಕ್ ಮಾರ್ಗದರ್ಶನ ನೀಡಿದರು.

ಜಿಲ್ಲಾ ಅದ್ಯಕ್ಷ ಇಂದ್ರೇಶ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಹೆಚ್. ಆರ್ ಅಶೋಕ್ ಕುಮಾರ್, ಮದ್ದೂರು ಸ್ವಾಮಿ, ಹಿಂಡುವಾಳು ಸಚಿನ್ ಮತ್ತಿತರರು ಭಾಗವಹಿಸಿದ್ದರು.

ಬಿಜೆಪಿ ಸದಸ್ಯತ್ವ ಅಭಿಯಾನ:ಮಂಡ್ಯದಲ್ಲಿ ಅಶೋಕ್ ಸಮ್ಮುಖದಲ್ಲಿ ಸಭೆ Read More

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಯದುವೀರ್ ಚಾಲನೆ

ಮೈಸೂರು: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ಸಂಸದ ಯದುವೀರ್ ಒಡೆಯರ್ ಚಾಲನೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಶ್ರೀರಾಂಪುರ ಮಹಾ ಶಕ್ತಿ ಕೇಂದ್ರದ ಬೂತ್ ನಂಬರ್ 268ರಲ್ಲಿ ಯದುವೀರ್ ಚಾಲನೆ ಕೊಟ್ಟರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್,ಜಿಲ್ಲಾ ಕಾರ್ಯದರ್ಶಿ ಮೋನಿಕಾ. ಎಂ ,ಕ್ಷೇತ್ರದ ಅಧ್ಯಕ್ಷ ಪೈಲ್ವಾನ್ ರವಿ, ಬಿಜೆಪಿ ಮುಖಂಡರಾದ ಹೇಮಂತ್ ಕುಮಾರ್ ಗೌಡ,ನಿಕಟಪೂರ್ವ ಜಿಲ್ಲಾಧ್ಯಕ್ಷರುಗಳಾದ ಮಹೇಂದ್ರ, ಅರುಣ್ ಕುಮಾರ್ ಗೌಡ, ಗೊರೂರು ಶಿವು,ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಿರಣ್ ನಾಯ್ಡು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶಿವು,ಕ್ಷೇತ್ರ ಕಾರ್ಯದರ್ಶಿಗಳಾದ ಸುರೇಶ್ ಮತ್ತು ಸುನಿಲ್ ಮತ್ತಿತರ ಮುಖಂಡರು ಹಾಜರಿದ್ದರು.

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಯದುವೀರ್ ಚಾಲನೆ Read More

ರಾಮಕೃಷ್ಣನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಜನರಿಂದ ಉತ್ತಮ ಸ್ಪಂದನೆ

ಮೈಸೂರು: ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಚಾಮುಂಡೇಶ್ವರಿ ನಗರ ಮಂಡಲದಿಂದ ರಾಮಕೃಷ್ಣ ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆರಂಭಿಸಲಾಗಿದ್ದು ಉತ್ತಮ ಸ್ಪಂದನೆ‌ ವ್ಯಕ್ತವಾಗಿದೆ.

ಅಭಿಯಾನದ ವೇಳೆ ಮನೆ,ಮನೆಗಳಿಗೆ ತೆರಳಿ ಸಾರ್ವಜನಿಕರನ್ನು ಭೇಟಿಯಾಗಿ ಮಿಸ್ಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯರಾಗುವ ಬಗೆಯನ್ನು ತಿಳಿಸಿಕೊಡಲಾಯಿತು.

ಲಿಂಕ್ ಹಾಗೂ ಒಟಿಪಿ ಮೂಲಕ ಅರ್ಜಿ ಬರೆಸಿ ನೂರಾರು ಕುಟುಂಬಗಳವರನ್ನು ಸದಸ್ಯರನ್ನು ಮಾಡಲಾಯಿತು.

ಈ ವೇಳೆ ಸಾರ್ವಜನಿಕರೊಬ್ಬರು ಇದರಿಂದ ನಮಗೇನು ಪ್ರಯೋಜನ ಎಂಬ ಪ್ರಶ್ನೆಯನ್ನು ಮಂಡಲದ ಅಧ್ಯಕ್ಷ ರಾಕೇಶ್ ಭಟ್ ಅವರಿಗೆ ಕೇಳಿದರು.

ಅದಕ್ಕೆ,ಚುನಾವಣಾ ಸಮಯದಲ್ಲಿ ಮಾತ್ರ ಜನರ ಮನೆ ಮುಂದೆ ಬರುವ ಬದಲು, ಮೊದಲೇ ಅವರ ಬಳಿ ಬಂದು ಅವರ ಪರಿಚಯದ ಜೊತೆಗೆ ಅಭಿಪ್ರಾಯ ಪಡೆದು ಸ್ಥಳೀಯ ಸಮಸ್ಯೆಗಳು ಹಾಗೂ ಇತರ ವಸ್ತುಸ್ಥಿತಿ ತಿಳಿದುಕೊಳ್ಳುವುದು, ಪಕ್ಷದ ವಿಚಾರಗಳನ್ನು ತಿಳಿಸಿ ಜನರಿಗೆ ಹತ್ತಿರವಾಗಿಸುವುದು ಎಂದು ತಿಳಿಹೇಳಿದರು.

ಇತ್ತೀಚೆಗೆ ಚುನಾವಣಾ ಸಮಯದಲ್ಲಿ ಮತದಾರರಿಗೆ ಉಚಿತಗಳ ಆಮಿಷವೊಡ್ಡಿ ಮತ ಪಡೆಯುವ ಚಾಳಿ ಪ್ರಾರಂಭವಾಗಿದ್ದು, ಅದರಿಂದ ಜನರಿಗೆ ಅಗತ್ಯ ವಸ್ತುಗಳ ದರ ಹೆಚ್ಚಳ, ದುಬಾರಿ ತೆರಿಗೆ, ಸರ್ಕಾರಕ್ಕೆ ಆರ್ಥಿಕ ಹೊರೆ, ಅಭಿವೃದ್ಧಿ ಕುಂಠಿತವಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು, ಪ್ರಧಾನ ಕಾರ್ಯದರ್ಶಿಗಳಾದ ಆರ್. ಸೋಮಶೇಖರ್, ಈರೇಗೌಡ, ಉಪಾಧ್ಯಕ್ಷರಾದ ಹೆಚ್.ಜಿ.ರಾಜಮಣಿ, ಬಿ.ಸಿ.ಶಶಿಕಾಂತ್, ಶಿವಕುಮಾರ್, ಕಾಂತರಾಜ ಅರಸ್, ಎಸ್.ಸಿ.ಮೋರ್ಚಾ ನಗರ ಉಪಾಧ್ಯಕ್ಷರಾದ ಎನ್.ಪ್ರತಾಪ್, ಮಂಡಲ ಕಾರ್ಯದರ್ಶಿಗಳಾದ ವಿನುತ, ಕಲಾವತಿ, ಮೋರ್ಚಾಗಳ ಪದಾಧಿಕಾರಿಗಳಾದ ಚಂದನ್ ಗೌಡ, ಚಂದ್ರಶೇಖರ ಸ್ವಾಮಿ, ಶುಭಶ್ರೀ, ರಮಾಬಾಯಿ, ನವೀನ, ಮಹಾದೇವ, ರಾಧಾ ಮುತಾಲಿಕ್, ದೇವರಾಜು, ರಾಮಕೃಷ್ಣಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಸಾಯಿ ಬಾಬಾ ದೇವಸ್ಥಾನದ ಅರ್ಚಕರಾದ ಪ್ರಸನ್ನ ಅವರು ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಅರ್ಚನೆ ಮಾಡಿದರು.

ರಾಮಕೃಷ್ಣನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಜನರಿಂದ ಉತ್ತಮ ಸ್ಪಂದನೆ Read More

ಬಿಜೆಪಿಯಿಂದ ಸಮರ್ಥ ಆಡಳಿತ – ಎಲ್ ನಾಗೇಂದ್ರ

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಅಭಿಯಾನದ ಕಾರ್ಯಗಾರದಲ್ಲಿ ಮಾತನಾಡಿದ ಅವರು
ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ತಿಳಿಸಿದರು.

ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿಯ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ,
ಕಾರ್ಯಕರ್ತರು ಪ್ರತಿ ಬೂತಿನಲ್ಲೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಬೇಕು
ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕರಾಜ್, ಪ್ರಧಾನ ಕಾರ್ಯದರ್ಶಿ ಗಳಾದ ಗಿರೀಧರ್, ಬಿ ಎಂ ರಘು, ಉಪಾಧ್ಯಕ್ಷ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ಟಿ ಎನ್ ಶಾಂತ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಸದಸ್ಯತ್ವ ಅಭಿಯಾನದ ಸಂಚಾಲಕಿ ವಿಧ್ಯಾಅರಸ್, ಕಾರ್ಯದರ್ಶಿ ನಾಗೇಂದ್ರ,
ಸಹಾ ಸಂಚಾಲಕ ಜಾನ್ಸಿ ಹಾಗೂ ಅನಿತ ಮತ್ತು ಮಹಿಳಾ ಮೋರ್ಚಾ ಕ್ಷೇತ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು

ಬಿಜೆಪಿಯಿಂದ ಸಮರ್ಥ ಆಡಳಿತ – ಎಲ್ ನಾಗೇಂದ್ರ Read More