ಕಾರು ಉರುಳಿ ಮಗು ಸಾವು

ಮೈಸೂರು, ಏ.1: ನಗರದ ಹಿನಕಲ್‌ ಬಳಿ ರಿಂಗ್‌ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಮೃತಪಟ್ಟಿದೆ.

ಬೆಂಗಳೂರಿನ ನರೇಶ್ ಎಂಬುವರ ಕಾರು ಉರುಳಿ ಅವರ ಪುತ್ರಿ ಮೈಥಿಲಿ (2) ಎಂಬ ಮಗು ಮೃತಪಟ್ಟಿದೆ.

ಉಡುಪಿಯ ನರೇಶ್ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಯುಗಾದಿ ರಜೆ ಕಾರಣ ಕುಟುಂಬದೊಂದಿಗೆ ಕೇರಳದ ವಯನಾಡ್ ಪ್ರವಾಸಕ್ಕೆ ಹೋಗಿ, ಪ್ರವಾಸ ಮುಗಿಸಿ ಸೋಮವಾರ ಸಂಜೆ ಬೆಂಗಳೂರಿಗೆ ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ.

ಮೈಸೂರಿನ ಹೊರ ವರ್ತುಲ ರಸ್ತೆ, ವಿಜಯನಗರ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.

ಈ ವೇಳೆ ಕಾರಿನಲ್ಲಿ ನರೇಶ್ ಅವರೊಂದಿಗೆ ಪತ್ನಿ ಸಂಧ್ಯಾ, ಸಂದೇಶ್, ಲಿಖಿತಾ, ಮನೋರಮಾ ಹಾಗೂ ಮಗು ಮೈಥಿಲಿ ಇದ್ದರು ಕಾರಲ್ಲಿದ್ದವರಿಗೆ ಗಾಯ ವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿದೆ,ಮೈಥಿಲಿ ಮೃತಪಟ್ಟಿದ್ದಾಳೆ

ಅಪಘಾತ ಸಂಬಂದ ವಿ.ವಿ.ಪುರಂ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾರು ಉರುಳಿ ಮಗು ಸಾವು Read More

ಅಮೆರಿಕದಲ್ಲಿ ವಿಮಾನ ಪತನ

ವಾಷಿಂಗ್ಟನ್: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, ವಿಮಾನವೊಂದು ಜನವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಅಮೆರಿಕದ ಅಯೋವಾದಿಂದ ಮಿನ್ನೇಸೋಟಕ್ಕೆ ತೆರಳುತ್ತಿದ್ದ ಸಣ್ಣ ವಿಮಾನವೊಂದು ಮಿನ್ನಿಯಾಪೋಲಿಸ್ ಉಪನಗರದಲ್ಲಿರುವ ಕಟ್ಟಡಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸ್ಪೋಟವಾಗಿದೆ.

ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿಮಾನವು ಡಿಕ್ಕಿ ಹೊಡೆದ ಕಾರಣ ಕಟ್ಟಡಕ್ಕೆ ಬಹಳ ಹಾನಿಯಾಗಿದೆ. ಅದೃಷ್ಟವಶಾತ ಮನೆಯಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಸಿಂಗಲ್ ಎಂಜಿನ್ ಹೊಂದಿರುವ ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಗೊತಗತಾಗಿಲ್ಲ ಆದರೆ ಇದ್ದವರು ಯಾರೂ ಬದುಕುಳಿದಿಲ್ಲ ಎಂದು ವರದಿಯಾಗಿದೆ.

ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ (FAA) ಪ್ರಕಾರ, ವಿಮಾನವು ಡೆಸ್ ಮೊಯಿನ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮತ್ತೊಂದು ಮಿನ್ನಿಯಾಪೋಲಿಸ್ ಉಪನಗರದಲ್ಲಿರುವ ಅನೋಕಾ ಕೌಂಟಿ-ಬ್ಲೇನ್ ವಿಮಾನ ನಿಲ್ದಾಣಕ್ಕೆ ತೆರಳಿತ್ತು. ಮಾರ್ಗಮಧ್ಯೆ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ಜನವಸತಿ ಕಟ್ಟಡಕ್ಕೆ ಢಿಕ್ಕಿಯಾಗಿದೆ.

ಅಮೆರಿಕದಲ್ಲಿ ವಿಮಾನ ಪತನ Read More

ಬಸ್, ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು 15 ಮಂದಿಗೆ ಗಂಭೀರ ಗಾಯ

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಕೆ.ಎಸ್.ಆರ್.ಟಿ. ಸಿ ಬಸ್ ಹಾಗೂ ಟಾಟಾಏಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿ 15 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಹೊರವಲಯದಲ್ಲಿಂದು ನಡೆದಿದೆ.

ಕೊಳ್ಳೇಗಾಲ ಸಮೀಪದ ಸಿದ್ದಯ್ಯನಪುರ ಗ್ರಾಮದ ಬಳಿ ಇಂದು ಮಧ್ಯಾಹ್ನ ಈ ಭೀಕರ ಅಪಘಾತ ಸಂಭವಿಸಿದ್ದು,
ತಾಲೂಕಿನ ಬಾನೂರು ಗ್ರಾಮದ ರಾಜಮ್ಮ (53) ಶೃತಿ (30) ಮೃತ ದುರ್ದೈವಿಗಳು.

ರತ್ನಮ್ಮ, ಹರ್ಷಿತ, ನಿಂಗರಾಜು, ಸುಧಾ, ಗೌತಮ್, ಪ್ರಕಾಶ್, ರಮೇಶ್, ಮಹೇಶ್, ರಾಧಮ್ಮ, ಸಣ್ಣಮ್ಮ, ಸಿಂಧು, ಮಹದೇವ ಅವರುಗೆ ಗಂಭೀರ ಗಾಯಗಳಾಗಿವೆ.

ಎಲ್ಲರೂ ಕೊಳ್ಳೇಗಾಲದಿಂದ ಟಾಟಾ ಏಸ್ ನಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಈ ವೇಳೆ ಹನೂರು ಕಡೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಸಿದ್ದಯ್ಯನಪುರದ ಬಳಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಟಾಟಾ ಎಸ್ ನಜ್ಜುಗುಜ್ಜಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ, 15 ಮಂದಿ ಗಾಯಗೊಂಡಿದ್ದಾರೆ.

ವಿಷಯ ತಿಳಿದ ಕೂಡಲೇ ಕೊಳ್ಳೇಗಾಲ ಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಸಾಗಿಸಿದ್ದಾರೆ.

ಅಲ್ಲಿನ ವೈದ್ಯರಾದ ಡಾಕ್ಟರ್ ರಾಜಶೇಖರ್ ಡಾಕ್ಟರ್ ದಿಲೀಪ್ ಡಾಕ್ಟರ್ ರಮೇಶ್ ಹಾಗೂ ಇತರ ವೈದ್ಯರು ತುರ್ತು ಪ್ರಥಮ ಚಿಕಿತ್ಸೆ ನೀಡಿದರು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಚಾಮರಾಜನಗರ ಹಾಗೂ ಮೈಸೂರಿನ ಆಸ್ಪತ್ರೆಗಳಿಗೆ ರವಾನಿಸಲಾಯಿತು.ಆಸ್ಪತ್ರೆ ಮುಂದೆ ಜನಜಾತ್ರೆ ಸೇರಿದೆ.

ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ

ಬಸ್, ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು 15 ಮಂದಿಗೆ ಗಂಭೀರ ಗಾಯ Read More

ಅಪರಿಚಿತ ವಾಹನ ಡಿಕ್ಕಿ ಇಬ್ಬರು ಯುವಕರ ದುರ್ಮರಣ

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತಾಲೂಕಿನ ಬ್ಯಾಡಮೂಡ್ಲು ಗ್ರಾಮದ ಬಸವಣ್ಣ ಅವರ ಪುತ್ರ ಅಭಿ(24) ಮತ್ತು ಸಿದ್ದರಾಜು ಮಗ ಅಭಿಷೇಕ್(24) ಮೃತಪಟ್ಟವರು. ಸಿದ್ದರಾಜು ಅವರ ಎರಡನೇ ಮಗ ಗಾಯಾಳು ಮಾದೇಶ್(23) ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಪರಿಚಿತ ವಾಹನ ಡಿಕ್ಕಿ ಇಬ್ಬರು ಯುವಕರ ದುರ್ಮರಣ Read More

ಹಾಲಿ, ಮಾಜಿ ಶಾಸಕರ ವಿರುದ್ದ ಬಿಜೆಪಿ ಮುಖಂಡ ನಿಶಾಂತ್ ಕಿಡಿ

(ವರದಿ: ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಮೂರು-ಮೂರು ಸಾರಿ ಕುಳಿತವರು ಏನು ಮಾಡದೆ ಈವಾಗ ಹೋಗಿ ಕುಳಿತು ನಾನ್ ಮಾಡ್ದೆ ನಾನ್ ಮಾಡ್ದೆ ಎಂದು ಏನು ಮಾಡದೆ ಹಳೇದನ್ನೇ ತೆಗೆದುಕೊಂಡು ಕುಳಿತರೆೆ ಅಪಘಾತಗಳು ಹೆಚ್ಚಾಗುತ್ತವೆ ಎಂದು ಹನೂರು ಬಿಜೆಪಿ ಮುಖಂಡ ನಿಶಾಂತ್ ಹಾಲಿ ಹಾಗೂ ಮಾಜಿ ಶಾಸಕರ ವಿರುದ್ದ ಕಿಡಿಕಾರಿದರು.

ತೆಳ್ಳನೂರು-ಬಂಡಳ್ಳಿ ಮಾರ್ಗದ ಬಸ್ ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಗಾಯಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಅವರ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಚಾಮರಾಜನಗರ ಮತ್ತು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಯನ್ನು ವೈದ್ಯರಿಂದ ಕೊಡಿಸಲಾಗುವುದು ಎಂದು ಹೇಳಿದರು.

ನಿರ್ವಾಹಕ ನವೀನ್ ಕುಮಾರ್ ಸಾವು ಬಹಳ ನೋವು ತಂದಿದೆ. ಅಪಘಾತಗಳು ಸಂಭವಿಸಲು ಕೆಟ್ಟ ರಸ್ತೆಗಳೆ ಕಾರಣ, ತಾಲ್ಲೂಕು ಕೇಂದ್ರವಾಗಿ ಇಷ್ಟು ವರ್ಷಗಳು ಕಳೆದರು ಹನೂರು ಕ್ಷೇತ್ರದಲ್ಲಿ ರಸ್ತೆಗಳಾಗಿಲ್ಲ, ಸರ್ಕಾರ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂಬುದಕ್ಕೆ ಇದೇ ಸೂಕ್ತ ಉದಾಹರಣೆ ಎಂದು ಕಿಡಿಕಾರಿದರು.

ಇನ್ನು ಎಷ್ಟು ಜನರ ಪ್ರಾಣದ ಜೊತೆ ಚಲ್ಲಾಟವಾಡುತ್ತಾರೆ. ಸರ್ಕಾರಕ್ಕೆ ಇದು ಸರಿಯಾದ ಸಮಯ ಈಗಲಾದರೂ ಸರ್ಕಾರ ಕಣ್ತರೆದು ನೋಡಿ ಉತ್ತಮ ರಸ್ತೆ ಸೌಕರ್ಯ ಕೊಡಬೇಕು ಎಂದು ಮನವಿ ಮಾಡುತ್ತೇನೆ. ಕನಿಷ್ಟ ತೇಪೆ ಹಾಕುವ ಕೆಲಸವಾದರು ಜನ ನಿಟ್ಟಸಿರು ಬಿಡುತ್ತಾರೆ ಎಂದು ತಿಳಿಸಿದರು.

ಇದು ಯಾರ ವೈಪಲ್ಯ ಎಂಬ ಮಾದ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಶಾಸಕರು ಜನನಾಯಕರು ತಾನೆ ಹೋಗಿ ಕೇಳಬೇಕು ಸರ್ಕಾರಕ್ಕೆ, ಸರ್ಕಾರದ ಕಣ್ಣುತೆರೆಸುವವರು ಯಾರು? ಮೂರು-ಮೂರು ಸಾರಿ ಕುಳಿತವರು ಏನು ಮಾಡದೆ ಈವಾಗ ಹೋಗಿ ಕುಳಿತು ನಾನ್ ಮಾಡ್ದೆ ನಾನ್ ಮಾಡ್ದೆ ಎಂದು ಏನು ಮಾಡದೆ ಹಳೆಯದನ್ನು ತೆಗೆದುಕೊಂಡು ಕುಳಿತರೆ ಇಂತಹ ಅಪಘಾತಗಳು ಇನ್ನೂ ನೂರಾಗುತ್ತವೆ ಎಂದು ಮಾರ್ಮಿಕವಾಗಿ ಹಾಲಿ ಶಾಸಕ ಎಂ.ಆರ್.ಮಂಜುನಾಥ್ ಹಾಗೂ ಮಾಜಿ ಶಾಸಕ ಆರ್.ನರೇಂದ್ರ ವಿರುದ್ದ ನಿಶಾಂತ್ ಕಿಡಿಕಾರಿದರು.

ಈ ಸಂಧರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಸುರೇಶ್, ತಿಮ್ಮರಾಜಿಪುರ ಪುಟ್ಟಣ್ಣ, ಯುವ ಮುಖಂಡ ಚೇತನ್, ಪಾಳ್ಯ ಸೋಮಣ್ಣ, ಉಪ್ಪಾರ ಮುಖಂಡ ನಾಗರಾಜು, ಅಪ್ಪು ಸ್ವಾಮಿ, ಕೃಷ್ಣಪ್ಪ, ಮಹದೇವಸ್ವಾಮಿ ಮತ್ತಿತರರು ಹಾಜರಿದ್ದರು.

ಹಾಲಿ, ಮಾಜಿ ಶಾಸಕರ ವಿರುದ್ದ ಬಿಜೆಪಿ ಮುಖಂಡ ನಿಶಾಂತ್ ಕಿಡಿ Read More

ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ: ಮೂವರ ಸಾವು

ಚಿತ್ರದುರ್ಗ, ಮಾ.5: ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಸಿಬಾರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು,ಎರಡೂ ಟ್ರಕ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.

ನಿದ್ರೆ ಮಂಪರಿನಲ್ಲಿ ಟ್ರಕ್ ಚಾಲಕ ಡ್ರೈವ್ ಮಾಡಿದ್ದರಿಂದ ಅಪಘಾತವಾಗಿದೆ, ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ: ಮೂವರ ಸಾವು Read More

ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ

ಲಕ್ನೋ: ರಸ್ತೆ ಅಪಘಾತ ಸಂಭವಿಸಿ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಮೃತಪಟ್ಟರೆ 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಅನಿತಾ ಮೃತಪಟ್ಟ ನತದೃಷ್ಟರು.

ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.

ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.

ಕಾಶಿ ಬಳಿ ಅಪಘಾತ:ಬೀದರ್ ನ ಐದು ಮಂದಿ ದುರ್ಮರಣ Read More

ನೆಲಮಂಗಲ ಬಳಿ ಸರಣಿ ಅಪಘಾತ:6 ಮಂದಿ ದುರ್ಮರಣ

ಬೆಂಗಳೂರು: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ನಡೆದ ಸರಣಿ ಅಪಘಾತ ಸಂಭವಿಸಿ, ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲ‌ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಟಿ.ಬೇಗೂರು ಬಳಿ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್‌ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಮನೆಯ‌ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ವಿಜಯಪುರದ ಇಂಜಿನಿಯರ್ ಚಂದ್ರಯಾಗಪ್ಪ, ಗೌರ ಬಾಯಿ, ದೀಕ್ಷಾ, ಧ್ಯಾನ್ ಮೃತಪಟ್ಟವರೆಂದು ಗುರುತಿಸಲಾಗಿದೆ.

ಅಪಘಾತದ ವೇಳೆ ಕಂಟೇನರ್‌ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ, ಕಾರು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.

ಹೆವಿ ಲೋಡ್ ತುಂಬಿದ್ದ ಕಂಟೇನರ್‌ ಮೇಲೆತ್ತಲು ಲಾರಿ ಬೆಲ್ಟ್‌, ಚೈನ್‌ಗಳನ್ನ ತರಿಸಲಾಗಿತ್ತು. ಕೊನೆಗೆ ಹರಸಾಹಸ ಪಟ್ಟು ಮೂರು ಕ್ರೇನ್‌ಗಳ ಸಹಾಯದಿಂದ ಕಂಟೇನರ್‌ ಮೇಲೆತ್ತಿ ಕಾರನ್ನು ಹೊರತೆಗೆಯಲಾಯಿತು.

ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ವೀಕೆಂಡ್‌ ಪ್ರವಾಸಕ್ಕೆ ಹೊರಟಿದ್ದ ಕುಟುಂಬ 6 ತಿಂಗಳ ಹಿಂದೆಯಷ್ಟೇ ಕಾರು ಖರೀದಿಸಿತ್ತೆಂದು ತಿಳಿದುಬಂದಿದೆ.

ನೆಲಮಂಗಲ ಬಳಿ ಸರಣಿ ಅಪಘಾತ:6 ಮಂದಿ ದುರ್ಮರಣ Read More

ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಪುಣೆ: ಹೆಲಿಕಾಪ್ಟರ್ ಪತನವಾಗಿ ಮೂವರು ದುರ್ಮರಣ ಅಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಸಮೀಪ ನಡೆದಿದೆ.

ಪುಣೆ ಸಮೀಪದ ಬವ್ಧಾನ್ ನ ಕಣಿವೆ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.

ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸ್ಪೋಟಗೊಂಡಿದೆ ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ ಗಳು ಮತ್ತು ಇಂಜಿನಿಯರ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮುಂಜಾನೆ‌ ಸುಮಾರು 6.30ರ ವೇಳೆ ಹೆಲಿಕಾಪ್ಟರ್ ಪತನಗೊಂಡಿದೆ ದಟ್ಟ ಮಂಜಿನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪುಣೆಯ ಪಿಂಪ್ರಿ ಚಿಂಚ್ವಾಡ್ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಇನ್ಸ್ಪೆಕ್ಟರ್ ಕನ್ಹಯ್ಯಾ ಥೋರಟ್ ಮಾಹಿತಿಯನ್ನು ನೀಡಿದ್ದು, ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಹೆಲಿಕಾಪ್ಟರ್ ಯಾರಿಗೆ ಸೇರಿದ್ದು ಎಂದು ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ Read More

ಬೈಕ್, ಲಾರಿ ಡಿಕ್ಕಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರ್ಕಳ: ಮಿನಿ ಲಾರಿ ಹಾಗೂ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ಕು ಮಂದಿ ದುರ್ಮರಣ ಅಪ್ಪಿದ ಘಟನೆ ಕಾರ್ಕಳ ಬಳಿ ನಡೆದಿದೆ.

ಕಾರ್ಕಳ ತಾಲೂಕಿನ ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರುನ ಪಾಜೆಗುಡ್ಡೆ ಬಳಿ ಈ ಅಪಘಾತ ಸಂಭವಿಸಿದೆ.

ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಎಂಬವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ‌ ನತದೃಷ್ಟರು ಒಂದೇ ಬೈಕ್ ನಲ್ಲಿ ಹೋಗುತ್ತಿದ್ದರು.ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದೆ.

ಸುದ್ದಿ ತಿಳಿದ ತಕ್ಷಣ ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು,ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು.

ಬೈಕ್, ಲಾರಿ ಡಿಕ್ಕಿ ಒಂದೇ ಕುಟುಂಬದ ನಾಲ್ವರ ದುರ್ಮರಣ Read More