ಹುಲಿಗಳಿಗೆ ವಿಷಹಾಕಿ ಕೊಲ್ಲುವವರಿಗೆ ಕಠಿಣ ಕ್ರಮ:ಸಿಎಂ ಹೇಳಿಕೆಗೆ ತೇಜಸ್ವಿ ಸ್ವಾಗತ

ಮೈಸೂರು: ಕನ್ನಡ ಕ್ರಾಂತಿದಳದ ನಿರಂತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಲಿಗಳನ್ನು ವಿಷಹಾಕಿ ಕೊಲ್ಲುವವರಿಗೆ ಕಠಿಣ ಕಾನೂನು ಕ್ರಮ ಶತ ಸಿದ್ಧ ಎಂದು ಹೇಳಿರುವುದನ್ನು ಸ್ವಾಗತಿಸುವುದಾಗಿ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ
ಹೇಳಿದ್ದಾರೆ.

ನಿರಂತರವಾಗಿ ಹುಲಿಗಳಿಗೆ ವಿಷಹಾಕಿ ಕೊಲ್ಲುತ್ತಿರುವುದರ ವಿರುದ್ಧ ತೇಜಸ್ವಿ ನಾಗಲಿಂಗಸ್ವಾಮಿ ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಾ ಬಂದಿದ್ದಾರೆ ಹಾಗೂ ಅನೇಕ ಬಾರಿ ಪತ್ರ ಬರೆಯುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ.

ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಹುಲಿಗಳು ಮತ್ತು ಆನೆಗಳ ಹತ್ಯೆ ಮಾಡುವವರ ವಿರುದ್ಧ ನಿರಂತರವಾಗಿ ಸಮರಸಾರುತ್ತ ಬಂದಿದಿದ್ದೇವೆ ಎಂದು ತೇಜಸ್ವಿ ತಿಳಿಸಿದ್ದಾರೆ.

ಇದೆಲ್ಲದರ ಪರಿಣಾಮವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕೆಟ್ ಹಾಲ್ ನಲ್ಲಿ ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಹುಲಿಗಳನ್ನು ವಿಷಾಹಾಕಿ ಹತ್ಯೆ ಮಾಡುವುದುನ್ನು ರಾಜ್ಯ ಸರ್ಕಾರ ಸಹಿಸಲ್ಲ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಕಠಿಣವಾಗಿ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿಯವರ ಈ ನಿಲುವಿನಿಂದ ನನಗೆ ಅತ್ಯಂತ ಸಂತಸ ತಂದಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಸ್ವಾಗತಿಸಿದ್ದಾರೆ.

ಆದರೆ ಮುಖ್ಯಮಂತ್ರಿಗಳ‌ ಈ ನಿರ್ಧಾರ ಹೇಳಿಕೆಗೆ ಮಾತ್ರ ಸಿಮೀತ ವಾಗಬಾರದು ಹುಲಿಗಳು ಮತ್ತು ಆನೆಗಳ ಹತ್ಯೆ ಪ್ರಕರಣದಲ್ಲಿ ಈ ಗಿರುವ ಕಾನೂನನ್ನು ತಿದ್ದುಪಡಿ ಮಾಡಿ ಹೇಳಿದ ಹಾಗೆ ಅತ್ಯಂತ ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ತೇಜಸ್ವಿ ಮನವಿ ಮಾಡಿದ್ದಾರೆ.

ಆನೆಗಳು ಮತ್ತು ಹುಲಿಗಳು ನಮ್ಮ ರಾಜ್ಯದ ಮೊದಲ ಮತ್ತು ಎರಡನೇಯ ಸ್ಥಾನದಲ್ಲಿದೆ ಇವುಗಳ ಸಂತತಿ ಬೇಟೆಗಾರರ ದುಷ್ಕೃತ್ಯ ದಿಂದ ನಾಶವಾಗದಂತೆ ಕಠಿಣ ಕಾನೂನು ಜಾರಿಗೆ ತರಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಹುಲಿಗಳಿಗೆ ವಿಷಹಾಕಿ ಕೊಲ್ಲುವವರಿಗೆ ಕಠಿಣ ಕ್ರಮ:ಸಿಎಂ ಹೇಳಿಕೆಗೆ ತೇಜಸ್ವಿ ಸ್ವಾಗತ Read More

ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮಕೈಗೊಳ್ಳಿ:ಪಾಕ್ ಗೆ ಭಾರತ ಒತ್ತಾಯ

ನವದೆಹಲಿ: ನಿಷೇಧಿತ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ ಅಜರ್ ಸಾರ್ವಜನಿಕ ಭಾಷಣ ಮಾಡಿದ್ದಾನೆ.ಭಾರತದ ಮೇಲೆ ದಾಳಿಯನ್ನು ಮುಂದುವರೆಸಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾನೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಆತನ ಭಾಷಣದ ವರದಿ ಆಧರಿಸಿ ಭಾರತ ಅಜರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ವನ್ನು ಆಗ್ರಹಿಸಿದೆ.

ಅಜರ್‌ನ ಭಾಷಣದ ವರದಿಗಳನ್ನು ಉಲ್ಲೇಖಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇದು ನಿಜವಾಗಿದ್ದರೆ, ಗಡಿಯಾಚೆಗೆ ತನ್ನ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳು ಮತ್ತು ಭಯೋತ್ಪಾದಕರನ್ನು ಒಳಗೊಂಡಿರುವ ಪಾಕಿಸ್ತಾನದ ದ್ವಂದ್ವ ನಿಲುವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ಮಸೂದ್ ಅಜರ್ ಭಾರತದಲ್ಲಿನ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಆದ್ದರಿಂದ ಅವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕು. ಆದರೆ, ಅವನು ಪಾಕಿಸ್ತಾನದಲ್ಲಿ ಇಲ್ಲ ಎಂದು ಆ ದೇಶ ಹೇಳಿದೆ. ಆದರೆ, ವರದಿಗಳನ್ನು ನಂಬುವುದಾದರೆ, ಅದು ಪಾಕಿಸ್ತಾನದ ದ್ವಂದ್ವವನ್ನು ಬಹಿರಂಗಪಡಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯನ್ನು ಹೆಚ್ಚಿಸುವುದಾಗಿಯೂ ಅಜರ್ ಘೋಷಿಸಿದ್ದಾನೆ,ಈತ ಈ ಭಾಷಣವನ್ನು ನವೆಂಬರ್‌ನಲ್ಲಿ ಮಾಡಲಾಗಿದೆ ಎಂದು ವರದಿಯಾಗಿದೆ.

ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮಕೈಗೊಳ್ಳಿ:ಪಾಕ್ ಗೆ ಭಾರತ ಒತ್ತಾಯ Read More