ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ; 5 ಮಂದಿ ವಿರುದ್ಧ ‌ಎಫ್ ಐ ಆರ್

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆ ಆಗುವುದಾಗಿ ವಂಚಿಸಿದ ನವೀನ್ ಪೊನ್ನಯ್ಯ ಹಾಗೂ ಅವರ ತಂದೆ ಪಿ.ಕೆ.ಪೊನ್ನಯ್ಯ,ತಾಯಿ ಎಂ.ಬಿ.ಕುಮಾರಿ,ಪತ್ನಿ ಲಕ್ಷಿತ್ ಚಿಂಗಪ್ಪ,ದೊಡ್ಡಮ್ಮನ ಮಗಳು ಸುಮ್ಮ ಹಾಗೂ ಬೆಳ್ಳಿಯಪ್ಪ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.
ಖಾಸಗಿ ಕಂಪನಿಯೊಂದರಲ್ಲಿ ಕಾಜಲ್ ಪ್ರಸಾದ್ ಅವರು ಲೀಗಲ್ ಅಸೋಸಿಯೇಟ್ ಆಗಿ ಕೆಲಸ ಮಾಡುತ್ತಿದ್ದು ವಕೀಲ ನವೀನ್ ಪೊನ್ನಯ್ಯ ಜೊತೆ ಹಲವು ವರ್ಷಗಳಿಂದ ಸಂತ್ರಸ್ತ ವಕೀಲೆಗೆ ಪರಿಚಯ ಇತ್ತು.
ನವೀನ್ ಪೊನ್ನಯ್ಯ ಅವರು ತಮ್ಮಪತ್ನಿ ಜೊತೆ ಹೊಂದಾಣಿಕೆ ಇಲ್ಲವೆಂದು ಕಾರಣ ನೀಡಿ ವಿಚ್ಛೇದನ ಪಡೆದಿರುವುದಾಗಿ ವಕೀಲೆ ಜೊತೆ ಹೆಚ್ಚು ಒಡನಾಟ ಬೆಳೆಸಿಕೊಂಡಿದ್ದಾರೆ.
ನವೀನ್ ಪೊನ್ನಯ್ಯ ಅವರ ತಾಯಿ ಕುಮಾರಿ ಅವರು ವಕೀಲೆ ಮನೆಗೆ ಬಂದು ಮದುವೆ ಪ್ರಸ್ತಾಪ ಮಾಡಿ ಎಂಗೇಜ್ ಮೆಂಟ್ ಮಾಡಿಕೊಂಡು ಡಿಸೆಂಬರ್ 7 ರಂದು ವಿವಾಹ ನಿಶ್ಚಯಿಸಿದ್ದಾರೆ.
ಮದುವೆ ಫಿಕ್ಸ್ ಆದ ಹಿನ್ನಲೆ ಇಬ್ಬರೂ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾರೆ.ಕೆಲವು ದಿನಗಳ ಹಿಂದೆ ನವೀನ್ ಪೊನ್ನಯ್ಯ ಮೊಬೈಲ್ ಮೂಲಕ ತನಗಿನ್ನೂ ವಿಚ್ಛೇದನ ಆಗಿಲ್ಲ,ಪರಿಹಾರ ವಿಚಾರ ಕಂಡುಕೊಳ್ಳುವುದಾಗಿ ಹಾಗೂ ನಮ್ಮ ಯೋಜನೆಯಂತೆ ಮದುವೆ ನಡೆಯಲಿದೆ ಎಂದು ಮೆಸೇಜ್ ಮಾಡಿ ಸ್ವಿಚ್ ಆಫ್ ಮಾಡಿದ್ದಾರೆ.
ಇದೀಗ ಮದುವೆ ಆಮಂತ್ರಣಪತ್ರಿಕೆಗಳನ್ನು ವಿತರಿಸಲಾಗಿದೆ.ಆದರೆ ನವೀನ್ ಪೊನ್ನಯ್ಯ ಸಂಪರ್ಕಕ್ಕೆ ಸಿಗುತ್ತಿಲ್ಲ.ತಂದೆ ತಾಯಿ ಜೊತೆ ಮಾತನಾಡಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಕೋರ್ಟ್ ನಿಂದ ಸುಳ್ಳು ಡಿಕ್ರಿ ಪಡೆದು ನನ್ನನ್ನ ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿರುವ ನವೀನ್ ಪೊನ್ನಯ್ಯ ಹಾಗೂ ಇತರರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ವಕೀಲೆ ಪ್ರಕರಣ ದಾಖಲಿಸಿದ್ದಾರೆ.

ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ; 5 ಮಂದಿ ವಿರುದ್ಧ ‌ಎಫ್ ಐ ಆರ್ Read More

ದೇಶಕ್ಕೆ,ರಾಜ್ಯಕ್ಕೆ ಯತ್ನಾಳ್ ಅಂತವರ ಅವಶ್ಯಕತೆ ಇದೆ- ವಕೀಲ ವೆಂಕಟೇಶ್‌

ಮೈಸೂರು: ಸದ್ಯದ ಪರಿಸ್ಥಿತಿಯಲ್ಲಿ ದೇಶಕ್ಕೆ, ರಾಜ್ಯಕ್ಕೆ ಯತ್ನಾಳ್ ಅಂತವರ ಅವಶ್ಯಕತೆ ಇದೆ ಎಂದು ಹಿರಿಯ ವಕೀಲ ಎಚ್.ಎನ್.ವೆಂಕಟೇಶ್‌ ಹೇಳಿದರು.

ಹಿಂದೂ ಜಾಗೃತಾ ವೇದಿಕೆ ಮೈಸೂರಿನ ಕಲಾ ಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಸನಾತನ ಧರ್ಮ ಅಳಿವಿನಂಚಿನಲ್ಲಿದೆ, ಅದನ್ನು ಪ್ರಶ್ನೆ ಮಾಡುವವರೇ ಇಲ್ಲದಂತಾಗಿದೆ
ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಒಂದು ಕಡೆ ಒಂದು ಧರ್ಮದ ವಿದ್ಯಾವಂತರು, ವೈದ್ಯರೇ ಬಾಂಬ್ ಇಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ತಡೆಯುವುದಕ್ಕೆ , ಅಂತಹವರನ್ನು ದೂರ ಇಡಲು ಯತ್ನಾಳ್ ಅಂತಾ ನಾಯಕರು ದೇಶಕ್ಕೆ ಬೇಕಾಗಿದ್ದಾರೆ‌,ಯತ್ನಾಳ್ ಅಂತವರು
ದೇಶದಲ್ಲಿ ಹೆಚ್ಚು ಜನ ಹುಟ್ಟಬೇಕು
ಎಂದು ತಿಳಿಸಿದರು.

ಅನ್ಯ ಧರ್ಮದ ವೈದ್ಯರ ಬಗ್ಗೆ ಅನುಮಾನ ಮೂಡುವಂತ ಪರಿಸ್ಥಿತಿ ಇದೆ. ಕೆಲವರಿಗೆ ಆರ್ ಎಸ್ ಎಸ್ ಟೀಕೆ‌ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಇದು ನಿಲ್ಲಬೇಕು. ಇದೆಲ್ಲಾ ನಿಲ್ಲಬೇಕಾದರೆ ಯತ್ನಾಳ್ ಅವರು ಈ ರಾಜ್ಯ ಸಿಎಂ ಆಗಬೇಕು ಎಂದು ಎಚ್.ಎನ್.ವೆಂಕಟೇಶ್‌ ಆಶಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗಿಯಾಗಿದ್ದರು‌.

ಯೋಗಾನರಸಿಂಹ ಸ್ಟಾಮಿ ದೇಗುಲದ ಡಾ ಭಾಷ್ಯಂ ಸ್ವಾಮೀಜಿ, ಹಿರಿಯ ವಕೀಲ ಎಂ ಡಿ ಹರೀಶ್ ಕುಮಾರ್ ಹೆಗ್ಡೆ, ಮಲ್ಲೇಶ್, ಭಾಸ್ಕರ್ ನಾಯ್ಡು, ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

ದೇಶಕ್ಕೆ,ರಾಜ್ಯಕ್ಕೆ ಯತ್ನಾಳ್ ಅಂತವರ ಅವಶ್ಯಕತೆ ಇದೆ- ವಕೀಲ ವೆಂಕಟೇಶ್‌ Read More