H-1B ವೀಸಾ ಅರ್ಜಿಗಳಿಗೆ 100,000 ಡಾಲರ್​ ಶುಲ್ಕ: ಟ್ರಂಪ್‌ ವಿರುದ್ಧ ಮೊಕದ್ದಮೆ

ವಾಶಿಂಗ್ಟನ್:‌ H-1B ವೀಸಾ ಅರ್ಜಿಗಳಿಗೆ ಅಗತ್ಯವಿರುವ ಹೊಸ ಶುಲ್ಕ 100,000 ಡಾಲರ್​ ಶುಲ್ಕ ವಿಧಿಸಿರುವ ಟ್ರಂಪ್​ ಆದೇಶವನ್ನು ಪ್ರಶ್ನಿಸಿ ಅಮೆರಿಕದ ಇಪ್ಪತ್ತು ರಾಜ್ಯಗಳು ಮೊಕದ್ದಮೆ ಹೂಡಿವೆ.

ಈ ನೀತಿ ಕಾನೂನುಬಾಹಿರವಾಗಿದ್ದು, ಪ್ರಮುಖ ಸಾರ್ವಜನಿಕ ಸೇವೆಗಳಿಗೆ ಗಂಭೀರ ಬೆದರಿಕೆಯನ್ನು ಒಡ್ಡಿದೆ ಎಂದು ಪ್ರತಿಪಾದಿಸಲಾಗಿದೆ.

ಈ ವೀಸಾ ಯೋಜನೆಯನ್ನು ಆಸ್ಪತ್ರೆಗಳು, ವಿಶ್ವವಿದ್ಯಾಲಯಗಳು ಮತ್ತು ಸಾರ್ವಜನಿಕ ಶಾಲೆಗಳು ವ್ಯಾಪಕವಾಗಿ ಬಳಸುತ್ತಿವೆ. ಈ ಶುಲ್ಕ ಹೆಚ್ಚಳವು ಹೆಚ್ಚು ಕೌಶಲ್ಯಪೂರ್ಣ ವಿದೇಶಿ ಕೆಲಸಗಾರರನ್ನು ನೇಮಿಸಿಕೊಳ್ಳಲು ಬಯಸುವ ಉದ್ಯೋಗದಾತರ ಮೇಲೆ ಭಾರೀ ಹೊರೆಯಾಗುತ್ತದೆ ಎಂದು ಅರ್ಜಿಯಲ್ಲಿ
ತಿಳಿಸಲಾಗಿದೆ.

ಟ್ರಂಪ್ ಆಡಳಿತವು ಶುಲ್ಕ ವಿಧಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ರಾಬ್ ಬೊಂಟಾ ಹೇಳಿದ್ದಾರೆ.

ಪ್ರಪಂಚದಾದ್ಯಂತದ ಕೌಶಲ್ಯಪೂರ್ಣ ಪ್ರತಿಭೆಗಳು ನಮ್ಮ ಕಾರ್ಯಪಡೆಗೆ ಸೇರಿದಾಗ ಅವರು ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ.

ಅಧ್ಯಕ್ಷ ಟ್ರಂಪ್ ವಿಧಿಸಿರುವ ಈ ಅಕ್ರಮ 100,000 ಡಾಲರ್​ ಶುಲ್ಕವು ಕ್ಯಾಲಿಫೋರ್ನಿಯಾದ ಸಾರ್ವಜನಿಕ ಸಂಸ್ಥೆಗಳ ಮೇಲೆ ಅನಗತ್ಯ ಹೊರೆಯನ್ನು ಹೆಚ್ಚುವಂತೆ ಮಾಡುತ್ತಿದೆ. ಇದು ಪ್ರಮುಖ ವಲಯಗಳಲ್ಲಿ ಕಾರ್ಮಿಕರ ಕೊರತೆಯನ್ನು ಉಲ್ಬಣಗೊಳಿಸುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ರಾಬ್ ಬಂಟಾ ಮತ್ತು ಮ್ಯಾಸಚೂಸೆಟ್ಸ್ ಅಟಾರ್ನಿ ಜನರಲ್ ಆಂಡ್ರಿಯಾ ಜಾಯ್ ಕ್ಯಾಂಪ್ಬೆಲ್ ಅವರು ಈ ಮೊಕದ್ದಮೆ ಹೂಡಿದ್ದಾರೆ.

ಜೊತೆಗೆ ಅರಿಜೋನಾ, ಕೊಲೊರಾಡೋ, ಕನೆಕ್ಟಿಕಟ್, ಡೆಲವೇರ್, ಹವಾಯಿ, ಇಲಿನಾಯ್ಸ್, ಮೇರಿಲ್ಯಾಂಡ್, ಮಿಚಿಗನ್, ಮಿನ್ನೇಸೋಟ, ನೆವಾಡಾ, ನಾರ್ತ್ ಕೆರೊಲಿನಾ, ನ್ಯೂಜೆರ್ಸಿ, ನ್ಯೂಯಾರ್ಕ್, ಒರೆಗಾನ್, ರೆಡ್​ ಐಲ್ಯಾಂಡ್,ವರ್ಮೊಂಟ್, ವಾಷಿಂಗ್ಟನ್ ಮತ್ತು ವಿಸ್ಕಾನ್ಸಿನ್ ರಾಜ್ಯಗಳ ಅಟಾರ್ನಿ ಜನರಲ್‌ಗಳು ಸಹ ಮೊಕದ್ದಮೆ ದಾಖಲಿಸಿವೆ.

H-1B ವೀಸಾ ಅರ್ಜಿಗಳಿಗೆ 100,000 ಡಾಲರ್​ ಶುಲ್ಕ: ಟ್ರಂಪ್‌ ವಿರುದ್ಧ ಮೊಕದ್ದಮೆ Read More

ಅಮೆರಿಕದಲ್ಲಿ ಓದಿದ ವಿದ್ಯಾರ್ಥಿಗಳು ತವರಿಗೆ ಹೋಗುವುದು ನಾಚಿಕೆಗೇಡು: ಟ್ರಂಪ್​

ವಾಷಿಂಗ್ಟನ್: ನಮ್ಮಲ್ಲಿನ ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಿ, ಪ್ರತಿಭೆ ಸಂಪಾದಿಸಿದ ವಿದೇಶಿ ವಿದ್ಯಾರ್ಥಿಗಳು ತವರೂರಿಗೆ ತೆರಳುವುದು ನಾಚಿಕೆಗೇಡಿನ ಸಂಗತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​ ಚಾಟಿ ಬೀಸಿದ್ದಾರೆ.

ಹೊಸ ವಲಸೆ ನೀತಿ ಟ್ರಂಪ್​ ಗೋಲ್ಡ್​ ಕಾರ್ಡ್​ ಜಾರಿ ಅನುಷ್ಠಾನ ಮಾಡಿದ ನಂತರ ಮಾತನಾಡಿದ ಟ್ರಂಪ್, ಭಾರತ ಮತ್ತು ಚೀನಾದ ವಿದ್ಯಾರ್ಥಿಗಳು ಅಮೆರಿಕದ ಉನ್ನತ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದು ನಂತರ ತಾಯ್ನಾಡಿಗೆ ಹಿಂತಿರುಗುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮಲ್ಲಿನ ಕಂಪನಿಗಳು ಅಂತಹ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ಟ್ರಂಪ್ ಗೋಲ್ಡ್ ಕಾರ್ಡ್ ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಅಮೆರಿಕಕ್ಕೆ ಶ್ರೀಮಂತ ವ್ಯಕ್ತಿಗಳು ಬರುವಂತೆ ಮಾಡುವುದು ಗೋಲ್ಡ್ ಕಾರ್ಡ್​ ಹಿಂದಿನ ಉದ್ದೇಶ. ಜೊತೆಗೆ, ಇಲ್ಲಿ ವ್ಯಾಸಂಗ ಮಾಡಿ ಪ್ರತಿಭೆಯನ್ನು ಹೊತ್ತೊಯ್ಯಬಾರದು ಎಂಬುದು ನನ್ನ ಉದ್ದೇಶ. ಅಂಥವರನ್ನು ಇಲ್ಲಿಯೇ ಉಳಿಸಿಕೊಳ್ಳಲು ಸರ್ಕಾರ ಹೊಸ ವಲಸೆ ನೀತಿ ರೂಪಿಸಿದೆ. ಈ ಮೂಲಕ ಅಮೆರಿಕನ್ನರಿಗೂ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಕಂಪನಿಗಳು ಉನ್ನತ ವಿಶ್ವವಿದ್ಯಾಲಯಗಳಾದ ವಾರ್ಟನ್, ಹಾರ್ವರ್ಡ್ ಮತ್ತು ಎಂಐಟಿಯಿಂದ ನೇಮಕ ಮಾಡಿಕೊಳ್ಳುವ ವಿದ್ಯಾರ್ಥಿಗಳನ್ನು ಉಳಿಸಿಕೊಳ್ಳಲು ಗೋಲ್ಡ್ ಕಾರ್ಡ್ ಖರೀದಿಸಬಹುದು ಎಂದು ಟ್ರಂಪ್ ಕರೆ ನೀಡಿದರು.

ಹೊಸ ಗೋಲ್ಡ್ ಕಾರ್ಡ್ ಯೋಜನೆ ಬುಧವಾರದಿಂಸ ಆರಂಭವಾಗಿದ್ದು,
ನಿನ್ನೆಯಿಂದಲೇ ಅರ್ಜಿಗಳನ್ನು ಆಹ್ವಾನಿಸಿದೆ.

ಅಮೆರಿಕದಲ್ಲಿ ಓದಿದ ವಿದ್ಯಾರ್ಥಿಗಳು ತವರಿಗೆ ಹೋಗುವುದು ನಾಚಿಕೆಗೇಡು: ಟ್ರಂಪ್​ Read More

ರಷ್ಯಾ- ಉಕ್ರೇನ್​ ನಡುವೆ ಯುದ್ಧ ಅಂತ್ಯಗೊಳಿಸಲು ಅಮೆರಿಕ ಮಧ್ಯಸ್ಥಿಕೆ

ಉಕ್ರೇನ್: ರಷ್ಯಾ ಮತ್ತು ಉಕ್ರೇನ್​ ನಡುವಿನ ಯುದ್ಧ ಅಂತ್ಯಗೊಳಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಶಾಂತಿ ಪ್ರಸ್ತಾವನೆಯನ್ನು ಎರಡು ರಾಷ್ಟ್ರಗಳು ಒಪ್ಪಿವೆ. ಆದರೆ, ಈ ಶಾಂತಿ ಪ್ರಸ್ತಾವಕ್ಕೆ ಸಹಿ ಹಾಕಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಿದ್ಧರಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರ ಪಟ್ಟಿದ್ದಾರೆ.
ಅಮೆರಿಕ ಆಡಳಿತದ ಶಾಂತಿ ಪ್ರಸ್ತಾವನೆಯನ್ನು ಮಾರ್ಪಡಿಸುವಂತೆ ಈ ಹಿಂದೆಯೂ ಕೂಡ ಉಕ್ರೇನ್​ ಒತ್ತಾಯಿಸಿತ್ತು. ಹಾಗಾಗಿ ತಿದ್ದುಪಡಿಯ ಬಳಿಕ ಪ್ರಸ್ತಾವನೆಯ ಮೇಲಿನ ಭಿನ್ನಾಭಿಪ್ರಾಯಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಅಮೆರಿಕ ಮತ್ತು ಉಕ್ರೇನ್ ಸಮಾಲೋಚಕರು ಮೂರು ದಿನಗಳ ಮಾತುಕತೆ ನಡೆಸಿದ ನಂತರವೂ ಝೆಲೆನ್ಸ್ಕಿ ಒಪ್ಪಿಗೆ ನೀಡಿಲ್ಲ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಟ್ರಂಪ್​, ಉಕ್ರೇನ್ ನಾಯಕ ಮಾತುಕತೆಗಳು ಮುಂದುವರಿಯುವುದನ್ನು ತಡೆಹಿಡಿಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಝೆಲೆನ್ಸ್ಕಿ ನಮ್ಮ ಪ್ರಸ್ತಾವನೆಯನ್ನು ಇನ್ನೂ ಓದಿಲ್ಲ ಎಂಬುದು ನಿರಾಶೆಯಾಗುತ್ತಿದೆ. ಈ ಪ್ರಸ್ತಾವನೆಯನ್ನು ಅವರ ಜನರು ಮೆಚ್ಚಿದ್ದಾರೆ. ರಷ್ಯಾ ಪ್ರಸ್ತಾವನೆಗೆ ಒಪ್ಪಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.
ಆದರೆ, ಈ ಪ್ರಸ್ತಾವಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಕೂಡ ಸಾರ್ವಜನಿಕವಾಗಿ ಅನುಮೋದನೆ ನೀಡಿಲ್ಲ.
ಫ್ಲೋರಿಡಾದಲ್ಲಿ ಉಕ್ರೇನಿಯನ್ ನಿಯೋಗದೊಂದಿಗೆ ಅಮೆರಿಕದ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ. ಝೆಲೆನ್ಸ್ಕಿ ಅವರಿಗೆ ಅಮೆರಿಕ ಮತ್ತು ಉಕ್ರೇನ್ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಝೆಲೆನ್ಸ್ಕಿ ಪೋಸ್ಟ್ ಹಾಕುದ್ದು,ಉಕ್ರೇನ್ ಶಾಂತಿ ಸಾಧಿಸಲು ಅಮೆರಿಕದೊಂದಿಗೆ ದೃಢನಿಶ್ಚಯ ಹೊಂದಿದೆ ಎಂದು ತಿಳಿಸಿದ್ದಾರೆ.

ರಷ್ಯಾ- ಉಕ್ರೇನ್​ ನಡುವೆ ಯುದ್ಧ ಅಂತ್ಯಗೊಳಿಸಲು ಅಮೆರಿಕ ಮಧ್ಯಸ್ಥಿಕೆ Read More

ಅಲಾಸ್ಕಾ-ಕೆನಡಾದ ಯುಕಾನ್ ಪ್ರದೇಶದಲ್ಲಿ ಪ್ರಭಲ ಭೂಕಂಪ

ವಾಷಿಂಗ್ಟನ್‌: ಅಲಾಸ್ಕಾ ಮತ್ತು ಕೆನಡಾದ ಯುಕಾನ್ ಪ್ರದೇಶದ ನಡುವಿನ ಗಡಿಯ ಸಮೀಪ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಕೇಂದ್ರಬಿಂದುವು ಅಲಾಸ್ಕಾದ ರಾಜಧಾನಿ ಜುನೌದಿಂದ ವಾಯುವ್ಯಕ್ಕೆ ಸುಮಾರು 370 ಕಿಲೋಮೀಟರ್ ದೂರದಲ್ಲಿ ಮತ್ತು ಕೆನಡಾದ ವೈಟ್‌ಹಾರ್ಸ್‌ನಿಂದ ಪಶ್ಚಿಮಕ್ಕೆ ಸುಮಾರು 250 ಕಿಲೋಮೀಟರ್ ದೂರದಲ್ಲಿತ್ತು. ಸಾವಿರಾರು ಕಿಲೋಮೀಟರ್ ದೂರದ ಜನರು ಭೂಮಿ ಕಂಪಿಸುತ್ತಿರುವಂತೆ ಅನುಭವಿಸಿದ್ದಾರೆ.ಆದರೆ‌ ಯಾವುದೇ‌ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಕೆನಡಾದ ವೈಟ್‌ಹಾರ್ಸ್‌ನಲ್ಲಿರುವ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಅಧಿಕಾರಿ ಕ್ಯಾಲಿಸ್ಟಾ ಮ್ಯಾಕ್‌ಲಿಯೋಡ್ ಭೂಕಂಪ ಕುರಿತು ನಡುಕವು ಸಾಕಷ್ಟು ಬಲವಾಗಿ ಅನುಭವಿಸಿದೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಮನೆಗಳು ನಡುಗಿವೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎರಡೂ ಪ್ರದೇಶಗಳಲ್ಲಿನ ಜನರು ತುಂಬಾ ಆತಂಕಕ್ಕೀಡಾಗಿದ್ದಾರೆ. ಭೂಕಂಪದ ಆಳವು ಸುಮಾರು 10 ಕಿಲೋಮೀಟರ್ ಎಂದು ವರದಿಯಾಗಿದೆ, ಅಂದರೆ ಅದು ಮೇಲ್ಮೈಗೆ ಬಹಳ ಹತ್ತಿರದಲ್ಲಿದೆ, ಇದು ಕಂಪನವನ್ನು ಇನ್ನಷ್ಟು ಅನುಭವಿಸುವಂತೆ ಮಾಡುತ್ತದೆ. ಹಲವಾರು ಸಣ್ಣ ನಂತರದ ಆಘಾತಗಳು ದಾಖಲಾಗಿದ್ದು, ಇದು ಜನರಲ್ಲಿ ಭಯ,ಆತಂಕವನ್ನು ಹೆಚ್ಚುಸುತ್ತಲೇ ಇದೆ.

ಭೂಕಂಪಕ್ಕೆ ಹತ್ತಿರದ ಕೆನಡಾದ ಪಟ್ಟಣ ಹೈನ್ಸ್ ಜಂಕ್ಷನ್ ಎಂದು ವರದಿಯಾಗಿದೆ, ಇದು ಕೇಂದ್ರಬಿಂದುದಿಂದ ಸುಮಾರು 130 ಕಿಲೋಮೀಟರ್ ದೂರದಲ್ಲಿದೆ. ಅಮೆರಿಕದ ಯಾಕುಟಾಟ್ ಪಟ್ಟಣವು ಕೇಂದ್ರಬಿಂದುದಿಂದ ಕೇವಲ 90 ಕಿಲೋಮೀಟರ್ ದೂರದಲ್ಲಿದೆ.
ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರದಲ್ಲಿರುವ ಕೆನಡಾದ ಸಮುದಾಯವು ಹೈನ್ಸ್ ಜಂಕ್ಷನ್ ಆಗಿದ್ದು, ಸುಮಾರು 80 ಮೈಲುಗಳು (130 ಕಿಲೋಮೀಟರ್) ದೂರದಲ್ಲಿದೆ.

ಅಲಾಸ್ಕಾ-ಕೆನಡಾದ ಯುಕಾನ್ ಪ್ರದೇಶದಲ್ಲಿ ಪ್ರಭಲ ಭೂಕಂಪ Read More

ಅಮೆರಿಕಾದಲ್ಲಿ ತೆಲಂಗಾಣದ ಟೆಕ್ಕಿ ಪೊಲೀಸರ ಗುಂಡಿಗೆ ಬಲಿ

ಅಮೆರಿಕ: ರೂಮ್ ಮೇಟ್ ಜೊತೆಗೆ ಹೊಡೆದಾಟದ ನಂತರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ 29 ವರ್ಷದ ಟೆಕ್ಕಿ ಅಮೆರಿಕದಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್‌ವೇರ್ ವೃತ್ತಿ ಮಾಡುತ್ತಿದ್ದ ಮೊಹಮ್ಮದ್ ನಿಜಾಮುದ್ದೀನ್ ಎಂಬಾತ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್ 3 ರಂದು ಸಾಂಟಾ ಕ್ಲಾರಾ ಪೊಲೀಸರು ಕೊಂದಿದ್ದಾರೆ ಎಂದು ಹೇಳಲಾಗಿದೆ.

ಏನಾಯಿತು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕ್ಷುಲಕ ವಿಚಾರಕ್ಕೆ ರೂಮ್‌ಮೇಟ್‌ನೊಂದಿಗೆ ಜಗಳ ನಡೆದಿದೆ. ಗುರುವಾರ ಬೆಳಗ್ಗೆ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಮೃತ ಮೊಹಮ್ಮದ್ ನಿಜಾಮುದ್ದೀನ್ ತಂದೆ ಹಸ್ನುದ್ದೀನ್ ತಮ್ಮ ಮಗನ ಮೃತದೇಹವನ್ನು ಮಹಬೂಬ್‌ನಗರಕ್ಕೆ ತರಲು ನೆರವು ನೀಡುವಂತೆ ಕೋರಿದ್ದಾರೆ. ವಾಷಿಂಗ್ಟನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಅಧಿಕಾರಿಗಳಿಂದ ತುರ್ತು ಸಹಾಯವನ್ನು ಕೋರಿದ್ದು, ಅಮೆರಿಕದ ಪೊಲೀಸರು ತನ್ನ ಮಗನನ್ನು ಯಾಕೆ ಗುಂಡಿಕ್ಕಿ ಕೊಂದಿದ್ದಾರೆ ಎಂಬುದಕ್ಕೆ ನಿಜವಾದ ಕಾರಣಗಳು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಐಸೆನ್‌ಹೋವರ್ ಡ್ರೈವ್‌ನಲ್ಲಿರುವ ಮನೆಯೊಳಗೆ ತನ್ನ ರೂಮ್‌ಮೇಟ್‌ಗೆ ಇರಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಅಧಿಕಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸಾಂಟಾ ಕ್ಲಾರಾ ಪೋಲೀಸರು ತಿಳಿಸಿದ್ದಾರೆ.

ಅಮೆರಿಕಾದಲ್ಲಿ ತೆಲಂಗಾಣದ ಟೆಕ್ಕಿ ಪೊಲೀಸರ ಗುಂಡಿಗೆ ಬಲಿ Read More

ವಿಮಾನದ ಮೇಲೆಯೇ‌ ಮತ್ತೊಂದು ವಿಮಾನ ಪತನ

ಕಾಲಿಸ್ಪೆಲ್: ಅಮೆರಿಕದ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ಇನ್ನೊಂದು ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.

ಇದರಿಂದಾಗಿ ವಿಮಾನ ನಿಲ್ದಾಣದಲ್ಲೆಲ್ಲಾ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿತು,ಅಲ್ಲಿದ್ದವರೆಲ್ಲ ಆತಂಕಕ್ಕೆ ಒಳಗಾದರು.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನ ಅಲ್ಲಿನ ಕಾಲಮಾನ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಂಟಾನಾದ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ.

ವಿಮಾನ ಲ್ಯಾಂಡ್ ಆಗುವ ಸಮಯದಲ್ಲಿ ಪೈಲಟ್ ಮತ್ತು ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ಇಬ್ಬರು ಗಾಯಗೊಂಡಿದ್ದು ಏರ್ಪೋರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ವಿಮಾನದ ಮೇಲೆಯೇ‌ ಮತ್ತೊಂದು ವಿಮಾನ ಪತನ Read More

ಭಾರತ ತಲುಪಿದ ತಹವ್ವೂರ್ ರಾಣಾಗೆ ಭಾರೀ ಭದ್ರತೆ

ಮುಂಬೈ: ಅಮೆರಿಕದಿಂದ ಗಡಿಪಾರಾಗಿದ್ದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆತರಲಾಗಿದೆ,ಭಾರೀ ಭದ್ರತೆಯಲ್ಲಿ ಮುಂದಿನ ಪ್ರಕ್ರಿಯೆ ನಡೆಯುತ್ತಿದೆ.

ಎನ್ಐಎ,ಆರ್ ಎ ಡಬ್ಲ್ಯೂ,ಎಸ್‌ಡಬ್ಲ್ಯು‌ಎಟಿ ತಂಡಗಳು ಅಮೆರಿಕಕ್ಕೆ ತೆರಳಿ ನಿನ್ನೆ ವಿಶೇಷ ವಿಮಾನದಲ್ಲಿ ರಾಣಾ ಜೊತೆ ಭಾರತಕ್ಕೆ ಹೊರಟಿದ್ದರು. ಇಂದು ಮಧ್ಯಾಹ್ನ ಸಂಜೆ ರಾಣಾ ಇದ್ದ ವಿಮಾನ ದೆಹಲಿಯಲ್ಲಿ ಇಳಿಯಿತು.ಬಿಗಿ ಭದ್ರತೆಯಲ್ಲಿ ಮುಂದಿನ ಪ್ರಕ್ರಿಯೆಗಳು ನಡೆದಿವೆ.

ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆಯಿದೆ. ರಾಣಾ ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತುರ್ತು ತಡೆಹಿಡಿಯುವಂತೆ ಕೋರಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ದೇಶದ ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಭಾರತದ ತನಿಖಾಧಿಕಾರಿಗಳ ತಂಡ ಅಮೆರಿಕಕ್ಕೆ ಪ್ರಯಾಣ ಬೆಳೆಸಿತ್ತು.

ಅಧಿಕಾರಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿರುವ ಹೈ ಸೆಕ್ಯುರಿಟಿ ಸೆಲ್‌ಗಳು ಹೆಚ್ಚಿನ ಅಪಾಯದ ಬಂಧಿತ ವ್ಯಕ್ತಿಗಾಗಿ ಸಿದ್ಧವಾಗಿವೆ.

ಎನ್‌ಐಎ ಇತ್ತೀಚೆಗೆ ರಾಣಾ ಪ್ರಕರಣವನ್ನು ಮುಂಬೈನಿಂದ ದೆಹಲಿಗೆ ವರ್ಗಾಯಿಸುವ ಬಗ್ಗೆ ನ್ಯಾಯಾಲಯದ ಆದೇಶವನ್ನು ಪಡೆದುಕೊಂಡಿದೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಏಜೆನ್ಸಿ ಅವರನ್ನು ಕಸ್ಟಡಿಗೆ ವಿಚಾರಣೆಗೆ ಒಳಪಡಿಸಬಹುದು. ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ರಾಣಾ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ.

ರಾಣಾನನ್ನು NIA ಔಪಚಾರಿಕವಾಗಿ ಬಂಧಿಸಿ, ನಂತರ ಪ್ರಧಾನ ಕಚೇರಿಗೆ ಕರೆದೊಯ್ಯಲಾಗುವುದು. ಅಲ್ಲಿ ಕೆಲವು ದಾಖಲೆಗಳು ಸೇರಿದಂತೆ ಔಪಚಾರಿಕ ಪ್ರಕ್ರಿಯೆಗಳನ್ನು ಮಾಡಲಾಗುತ್ತದೆ. ಅವರನ್ನು 24 ಗಂಟೆಗಳ ಒಳಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

ಆದರೆ,ರಾಣಾನನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅಥವಾ ದೈಹಿಕವಾಗಿ ಹಾಜರುಪಡಿಸಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಭಾರತ ತಲುಪಿದ ತಹವ್ವೂರ್ ರಾಣಾಗೆ ಭಾರೀ ಭದ್ರತೆ Read More

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾ ನಾಳೆ ಭಾರತಕ್ಕೆ

ಮುಂಬೈ: 2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು ಗುರುವಾರ ಬೆಳಗ್ಗೆ ಭಾರತಕ್ಕೆ ಕರೆತರಲಾಗುತ್ತಿದೆ.

ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ವಿಶೇಷ ತಂಡ ಈಗಾಗಲೇ ಅಮೆರಿಕದಿಂದ ವಿಮಾನದಲ್ಲಿ ಕರೆದುಕೊಂಡು ಬರುತ್ತಿದ್ದು ನಾಳೆ ಬೆಳಗ್ಗೆ ಭಾರತಕ್ಕೆ ಬರಲಿದ್ದಾರೆ.

ಅಮೆರಿಕದ ನ್ಯಾಯಾಲಯದ ಶಿಫಾರಸುಗಳಿಗೆ ಅನುಗುಣವಾಗಿ, ದೆಹಲಿ ಮತ್ತು ಮುಂಬೈನ ಎರಡು ಜೈಲುಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಜಾರಿ ಮಾಡಲಾಗಿದೆ. ಭಾರತಕ್ಕೆ ಬಂದ ನಂತರ ರಾಣಾನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಎನ್‌ಐಎ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹಸ್ತಾಂತರ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಂಡಿದ್ದಾರೆ.

ತಹಾವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಅಮೆರಿಕ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿತ್ತು.

ಮುಂಬೈ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿತ್ತು.

ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು.

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹಾವೂರ್ ರಾಣಾಗೆ ಸೋಲು ಉಂಟಾಗಿತ್ತು. ಕಳೆದ ವರ್ಷ ನವೆಂಬರ್ 13 ರಂದು ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದ

2008 ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾ ನಾಳೆ ಭಾರತಕ್ಕೆ Read More

ಟ್ರಂಪ್‌ ತೆರಿಗೆ ಸಮರದಿಂದ ಷೇರುಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ

ವಾಶಿಂಗ್ಟನ್,ಏ.7: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆರಂಭಿಸಿದ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲವಾಗಿದ್ದು, ಇಂದು ಒಂದೇ ದಿನ ಹೂಡಿಕೆದಾರರಿಗೆ 19 ಲಕ್ಷ ಕೋಟಿ ರೂ. ನಷ್ಟವಾಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ಭಾರೀ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ ಭಾರೀ ಇಳಿಕೆ ಕಂಡಿದೆ.

ಸೆನ್ಸೆಕ್ಸ್‌ ಆರಂಭದಲ್ಲಿ 4 ಸಾವಿರ ಅಂಕ ಪತನಗೊಂಡು ನಂತರ ಚೇತರಿಕೆ ಕಂಡಿತ್ತು. ಬೆಳಗ್ಗೆ 11 ಗಂಟೆ ವೇಳೆಗೆ 2,900 ಅಂಕ ಚೇತರಿಕೆಯಾಗಿ 72,423.48 ರಲ್ಲಿ ವ್ಯವಹಾರ ನಡೆಸುತ್ತಿತ್ತು. ನಿಫ್ಟಿ 900 ಅಂಕ ಇಳಿಕೆಯಾಗಿ 21,960.80 ರಲ್ಲಿ ವ್ಯವಹಾರ ನಡೆಸುತ್ತಿದೆ. ರಿಯಾಲ್ಟಿ, ಐಟಿ, ಆಟೋ ಮತ್ತು ಲೋಹ ಮುಂತಾದ ಕ್ಷೇತ್ರಗಳ ಷೇರುಗಳ ಮೌಲ್ಯ ಇಳಿಕೆಯಾಗಿದೆ.

ಸೋಮವಾರ ಬೆಳಿಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏಷ್ಯಾದ ಎಲ್ಲ ಮಾರುಕಟ್ಟೆಗಳಲ್ಲಿ ಭಾರೀ ಇಳಿಕೆಯಾಗಿತ್ತು.

ಗಿಫ್ಟ್‌ ನಿಫ್ಟಿಯೂ ಅಂಕ ಇಳಿಕೆಯಾಗುತ್ತಿದ್ದಂತೆ ಭಾರತದಲ್ಲೂ ಪರಿಣಾಮ ಬೀರುವುದು ಖಚಿತವಾಗಿತ್ತು. ಬೆಳಗ್ಗೆಯವರೆಗೆ 19 ಲಕ್ಷ ಕೋಟಿ ನಷ್ಟ ಸಂಭವಿಸಿದ್ದು ನಿಫ್ಟಿ ಮತ್ತು ಸೆನ್ಸೆಕ್ಸ್‌ ಮತ್ತಷ್ಟು ಕುಸಿದರೆ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ.

ಗಿಫ್ಟಿ ನಿಫ್ಟಿ 888, ಜಪಾನ್‌ನ ನಿಕ್ಕಿ 225 2,302 ಅಂಕ, ತೈವಾನ್‌ನ ವೈಯ್ಟೆಡ್ ಸೂಚ್ಯಂಕವೂ 2063 ಅಂಶ ಕುಸಿಯಿತು. ಹಾಂಕಾಂಗ್‌ನ ಹ್ಯಾಂಗ್‌ಸೆನ್‌ 2,677 ಅಂಕ ಕುಸಿದಿದೆ.

ಶುಕ್ರವಾರದಿಂದಲೇ ಅಮೆರಿಕ ಮಾಧ್ಯಮಗಳು ಹೆಸರಿನಲ್ಲಿ ಸೋಮವಾರ ಷೇರು ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದಲ್ಲಿ ಇಳಿಕೆಯಾಗಲಿದೆ ಎಂದು ವರದಿಗಳು ಬಿತ್ತರಿಸಿದ್ದವು. ನಿರೀಕ್ಷೆಯಂತೆ ಸೋಮವಾರ ವಿಶ್ವದ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲವಾಗಿದ್ದು ಹೂಡಿಕೆದಾರರಿಗೆ ಭಾರೀ ನಷ್ಟವಾಗಿದೆ.

ಟ್ರಂಪ್‌ ತೆರಿಗೆ ಸಮರದಿಂದ ಷೇರುಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ Read More

ಭಾರತ ಮತ್ತಿತರ ದೇಶಗಳ ಸರಕುಗಳ ಮೇಲೆ ಪ್ರತಿ ಸುಂಕ ನೀತಿ ಇಂದಿನಿಂದ ಜಾರಿಗೆ

ವಾಷಿಂಗ್ಟನ್: ಅಮೆರಿಕದ ಕೃಷಿ ಉತ್ಪನ್ನಗಳ ಮೇಲೆ ಭಾರತವು ಶೇ.100ರಷ್ಟು ಸುಂಕ ವಿಧಿಸುತ್ತದೆ,ಹಾಗೆಯೇ ಇತರ ದೇಶಗಳು ಹೆಚ್ಚು ಸುಂಕ ವಿಧಿಸುವುದರಿಂದ ಅಮೆರಿಕದ ಉತ್ಪನ್ನಗಳನ್ನು ಆ ರಾಷ್ಟ್ರಗಳಿಗೆ ರಫ್ತು ಮಾಡುವುದು ಅಸಾಧ್ಯ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

ಭಾರತ ಮತ್ತು ಇತರ ದೇಶಗಳು ಅಮೆರಿಕದ ಸರಕುಗಳ ಮೇಲೆ ಹೆಚ್ಚಿನ ಸುಂಕ ವಿಧಿಸುತ್ತಿರುವುದನ್ನು ಡೊನಾಲ್ಡ್ ಟ್ರಂಪ್‌ ಹಲವು ಸಲ ಟೀಕಿಸಿದ್ದರು.

ಭಾರತ ಒಳಗೊಂಡಂತೆ ಕೆಲವು ದೇಶಗಳ ಸರಕುಗಳ ಮೇಲೆ ಟ್ರಂಪ್‌ ಘೋಷಿಸಿರುವ ಪ್ರತಿ ಸುಂಕ ನೀತಿಯು ಏಪ್ರಿಲ್ 2ರಿಂದ ಜಾರಿಗೆ ಬರಲಿದೆ,ಇದು ಅಮೆರಿಕದ ವಿಮೋಚನಾ ದಿನ ಎಂದು ಹೇಳಿದ್ದಾರೆ.

ದುರದೃಷ್ಟವಶಾತ್, ಈ ದೇಶಗಳು ಹಲವು ವರ್ಷಗಳಿಂದ ನಮ್ಮ ಹಣವನ್ನು ಸುಲಿಗೆ ಮಾಡುತ್ತಿವೆ ಮತ್ತು ಅಮೆರಿಕದ ಕಾರ್ಮಿಕರ ಬಗ್ಗೆ ಅವುಗಳು ತಿರಸ್ಕಾರ ಮನೋಭಾವ ಹೊಂದಿವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೆವಿಟ್ ಟೀಕಿಸಿದ್ದಾರೆ.

ಎಷ್ಟು ಪ್ರಮಾಣದಲ್ಲಿ ಪ್ರತಿ ಸುಂಕ ವಿಧಿಸಲಾಗುತ್ತದೆ ಮತ್ತು ಅವು ಯಾವೆಲ್ಲಾ ದೇಶಗಳ ಮೇಲೆ ಪರಿಣಾಮ ಬೀರಲಿವೆ ಎಂಬುದನ್ನು ಲೆವಿಟ್ ವಿವರಿಸಲಿಲ್ಲ.

ಅಮೆರಿಕದ ಡೇರಿ ಉತ್ಪನ್ನಗಳ ಮೇಲೆ ಯುರೋಪಿಯನ್ ಯೂನಿಯನ್ ಶೇ 50 ಸುಂಕ ವಿಧಿಸುತ್ತಿದ್ದರೆ, ನಾವು ಕಳುಹಿಸುವ ಅಕ್ಕಿಯ ಮೇಲೆ ಜಪಾನ್ ಶೇ 700ರಷ್ಟು ಸುಂಕ ವಿಧಿಸುತ್ತದೆ. ಅಮೆರಿಕದ ಕೃಷಿ ಉತ್ಪನ್ನಗಳ ಮೇಲೆ ಭಾರತವು ಶೇ 100ರಷ್ಟು ಸುಂಕ ಮತ್ತು ಅಮೆರಿಕದ ಬೆಣ್ಣೆ ಹಾಗೂ ಚೀಸ್ ಮೇಲೆ ಕೆನಡಾ ಶೇ 300ರಷ್ಟು ಸುಂಕ ವಿಧಿಸುತ್ತಿವೆ ಎಂದು ಲೆವಿಟ್ ಹೇಳಿದ್ದಾರೆ.

ಈ ರೀತಿಯ ಹೆಚ್ಚಿನ ಪ್ರಮಾಣದ ಸುಂಕದಿಂದ ಕಳೆದ ಕೆಲವು ದಶಕಗಳಲ್ಲಿ ಅಮೆರಿಕದ ಹಲವು ವ್ಯಾಪಾರಿಗಳು ನಷ್ಟ ಅನುಭವಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾರತ ಮತ್ತಿತರ ದೇಶಗಳ ಸರಕುಗಳ ಮೇಲೆ ಪ್ರತಿ ಸುಂಕ ನೀತಿ ಇಂದಿನಿಂದ ಜಾರಿಗೆ Read More