ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ:ಅಶೋಕ್‌ ವ್ಯಂಗ್ಯ ಸಲಹೆ

ಬೆಂಗಳೂರು: ಅಭಿವೃದ್ಧಿಗೆ ದುಡ್ಡಿಲ್ಲ,ರಾಜ್ಯದ ಪ್ರಗತಿಗೆ ಯಾವುದೇ ದೂರದೃಷ್ಟಿ ಇಲ್ಲ,ಹೂಡಿಕೆದಾರರನ್ನು, ಉದ್ಯಮಿಗಳನ್ನು ಆಕರ್ಷಿಸುವ, ಹಿಡಿದಿಟ್ಟುಕೊಳ್ಳುವ ಆಸಕ್ತಿ ಇಲ್ಲದ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ನಡೆಸಿದ್ದಾರೆ.

ಹಿಂದೆಂದೂ ಕಂಡರಿಯದ ದುರಾಡಳಿತ, ಭ್ರಷ್ಟಾಚಾರದ ಕೂಪದಲ್ಲಿ ರಾಜ್ಯವನ್ನು ಮುಳುಗಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಮುಜುಗರಕ್ಕೊಳಗಾದಾಗಲೆಲ್ಲ ಜನರ ದಿಕ್ಕು ತಪ್ಪಿಸಲು, ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ಎಂಬ ಮೆಗಾ ಸೀರಿಯಲ್ ನ ಒಂದೊಂದೇ ಸಂಚಿಕೆ ಹೊರಬಿಡುವ ನಾಟಕ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ‌

ಸಿಎಂ ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಈ ಭಂಡ ಬಾಳು. ನೀವು ಹೇಳಿದ್ದನ್ನ ನಿಮ್ಮ ಸಂಪುಟ ಸದಸ್ಯರೆ ಒಪ್ಪುವುದಿಲ್ಲ, ಶಾಸಕರೂ ಒಪ್ಪುವುದಿಲ್ಲ, ಹೈಕಮಾಂಡ್ ಅಂತೂ ನಿಮ್ಮ ಮಾತಿಗೆ ಕವಡೆ ಕಿಮ್ಮತ್ತು ಕೊಡುತ್ತಿಲ್ಲ, ಈ ಭಂಡ ಬಾಳು ಸಾಕು ಮಾಡಿ ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಅಶೋಕ್ ಹೇಳಿದ್ದಾರೆ.

ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ:ಅಶೋಕ್‌ ವ್ಯಂಗ್ಯ ಸಲಹೆ Read More

‘ಕೈ’ಲಾಗದವರ ಕೊನೆಯ ಅಸ್ತ್ರವೇ ಆಪಪ್ರಚಾರ-ಅಶೋಕ್ ಟೀಕಾಪ್ರಹಾರ

ಬೆಂಗಳೂರು: ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯ ಬಗ್ಗೆ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ ‌

ರಾಹುಲ್ ಗಾಂಧಿ ಅವರ ಆರೋಪಗಳಲ್ಲಿ ಹುರುಳಿದ್ದರೆ ಚುನಾವಣಾ ಆಯೋಗಕ್ಕೆ ಪುರಾವೆ ಒದಗಿಸಬೇಕು. ಇಲ್ಲವಾದರೆ ದೇಶದ ಮತದಾರರಲ್ಲಿ ಕ್ಷಮೆ ಯಾಚಿಸಬೇಕು ಎಂದು ಟ್ವೀಟ್ ಮಾಡಿ ಅಶೋಕ್ ಒತ್ತಾಯಿಸಿದ್ದಾರೆ.

ಒಂದು ವೇಳೆ ಆರೋಪಗಳಿಗೆ ಪುರಾವೆ ಇದ್ದರೆ 7 ದಿನಗಳಲ್ಲಿ ಅಫಿಡವಿಟ್ ಸಲ್ಲಿಸಿ, ಇಲ್ಲದಿದ್ದರೆ ಇಡೀ ದೇಶಕ್ಕೆ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಈಗಾಗಲೇ
ಪ್ರತ್ಯುತ್ತರ ಕೊಟ್ಟಿದೆ. ಹಾಗಾಗಿ ರಾಹುಲ್ ಗಾಂಧಿ ಪುರಾವೆ ಒದಗಿಸಲಿ ಎಂದು ತಿಳಿಸಿದ್ದಾರೆ.

ಅದು ಬಿಟ್ಟು ಹೀಗೆ ಹಾದಿ ಬೀದಿಯಲ್ಲಿ ಪೋಸ್ಟರ್ ಅಂಟಿಸಿ ನಮ್ಮ ದೇಶದ ಚುನಾವಣಾ ವ್ಯವಸ್ಥೆಗೆ, ಮತದಾರರಿಗೆ, ಜನಾದೇಶಕ್ಕೆ ಅಪಮಾನ ಮಾಡುವುದು ಯಾವ ಸೀಮೆ ನ್ಯಾಯ ಎಂದು ಅಶೋಕ್ ಕಟುವಾಗಿ ಪ್ರಶ್ನಿಸಿದ್ದಾರೆ.

ಮತಗಳ್ಳತನ ಎಂಬ ಈ ನಾಟಕ ತಮ್ಮ ಮೂರ್ಖತನ ಪ್ರದರ್ಶನ ಮಾಡುತ್ತದೆಯೇ ಹೊರತು ಮತ್ತೇನೂ ಅಲ್ಲ,’ಕೈ’ಲಾಗದವರ ಕೊನೆಯ ಅಸ್ತ್ರವೇ ಆಪಪ್ರಚಾರ ಎಂದು ಪ್ರತಿಪಕ್ಷ ನಾಯಕ ಕುಟುಕಿದ್ದಾರೆ.

ನಿಮ್ಮ ಸೋಲಿನ ಹತಾಶೆಯಿಂದ ನಮ್ಮ ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಊಹಾಪೋಹ ಸೃಷ್ಟಿಸುವ ಪಾಪದ ಕೆಲಸ ಮಾಡಬೇಡಿ ಅವರು ಸಲಹೆ ನೀಡಿದ್ದಾರೆ ‌

‘ಕೈ’ಲಾಗದವರ ಕೊನೆಯ ಅಸ್ತ್ರವೇ ಆಪಪ್ರಚಾರ-ಅಶೋಕ್ ಟೀಕಾಪ್ರಹಾರ Read More

ಧರ್ಮಸ್ಥಳದ ಮುಸುಕುಧಾರಿ ಹೆಸರು ಬಹಿರಂಗಪಡಿಸಿ- ಅಶೋಕ ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿ ಹೆಸರನ್ನು ಬಹಿರಂಗ ಪಡಿಸಬೇಕೆಂದು ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ.

ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು, ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಕೊನೆಯಲ್ಲಿ ಮಾಸ್ಕ್‌ ಮ್ಯಾನ್‌ ಹುಚ್ಚ ಎಂದು ಹೇಳುವ ಬದಲು, ಮೊದಲೇ ತನಿಖೆ ಮಾಡಬೇಕು, ಈವರೆಗೆ ಆತನ ಮಂಪರು ಪರೀಕ್ಷೆ ಮಾಡಿಲ್ಲ, ಈವರೆಗೆ ಒಂದು ಕೋಟಿ ರೂ.ಗೂ ಅಧಿಕ ಖರ್ಚಾಗಿದೆ, ಹಿಟಾಚಿ, ಜೆಸಿಬಿಗಳನ್ನು ಬಳಸುತ್ತಿದ್ದಾರೆ,ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದಾರೆ, ಇದು ಪ್ರಾಯೋಜಿತ ಕೆಲಸವಾಗಿದೆ, ಈ ಮುಸುಕುಧಾರಿ ಯಾರೆಂದು ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದರು.

ಅಪರಾಧಿ ಚಟುವಟಿಕೆಗಳಿಗೆ ಅಪರಾಧಿಗಳಿಗೆ ಖಂಡಿತ ಶಿಕ್ಷೆಯಾಗುತ್ತದೆ. ಅನೇಕ ಪ್ರಕರಣಗಳಲ್ಲಿ ಮುಖ್ಯಮಂತ್ರಿಗೇ ಶಿಕ್ಷೆಯಾಗಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ಯಾರನ್ನೂ ಬಿಡುವುದಿಲ್ಲ. ಎಸ್‌ಐಟಿ ರದ್ದು ಮಾಡದೆ ಮುಂದುವರಿಸಬೇಕು, ತನಿಖೆ ಮಾಡಬೇಕು, ಹಾಗೆಯೇ ಯಾರ ಒತ್ತಡದ ಮೇಲೆ ಈ ಎಸ್‌ಐಟಿ ರಚಿಸಲಾಗಿದೆ ಎಂದು ತಿಳಿಸಬೇಕು. ಇದಕ್ಕೆ ವಿದೇಶದಿಂದ ಫಂಡಿಂಗ್‌ ಬಂದಿರುವ ಅನುಮಾನವಿದ್ದು, ಷಡ್ಯಂತ್ರ ಮಾಡಿರುವ ಗುಂಪನ್ನು ಪತ್ತೆ ಮಾಡಲು ಎನ್‌ಐಎಗೆ ತನಿಖೆಯನ್ನು ನೀಡಿ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ನೂರಾರು ಅಸ್ತಿಪಂಜರ ಇದೆ ಎಂದು ದೂರು ನೀಡಿದಾಗ ಕಾಂಗ್ರೆಸ್‌ ಸರ್ಕಾರ ಕೂಡಲೇ ಎಸ್‌ಐಟಿ ರಚಿಸಿದೆ. ಎಸ್‌ಐಟಿ ಮಾಡಬೇಕೆಂದು ಕೋರ್ಟ್‌ ಹೇಳಿಲ್ಲ ಅಥವಾ ಅಧಿಕಾರಿ ಪ್ರಣವ್‌ ಮೊಹಂತಿ ಹೇಳಿಲ್ಲ. ಇದರ ಹಿಂದೆ ಇರುವ ಗ್ಯಾಂಗ್‌ ಯಾವುದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುತ್ತ ಇರುವ ಗ್ಯಾಂಗ್‌ ಯಾವುದು, ಇದಕ್ಕೆ ಪ್ರೇರಣೆ ನೀಡಿದವರು ಯಾರು, ಈ ರೀತಿ ನೆಲ ಅಗೆಯುವುದಕ್ಕೆ ಸಾರ್ವಜನಿಕ ಹಣ ಬಳಸಲಾಗಿದೆ. ಆದರೆ ಬೆಟ್ಟ ಅಗೆದು ಇಲಿ ಹಿಡಿಯುವಂತಹ ಕೆಲಸವಾಗಿದೆ ಹುಲಿ ಬಂತು ಎಂದು ಹೆದರಿಸಿ ಕೊನೆಗೆ ಇಲಿಯೂ ಸಿಕ್ಕಿಲ್ಲ ಎಂದು ಟೀಕಿಸಿದರು.

ಮಾಸ್ಕ್‌ ಮ್ಯಾನ್‌ ಬಗ್ಗೆ ಪ್ರತಿ ಕ್ಷಣದ ಮಾಹಿತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಆ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಆತನ ಹೆಸರು ಚಿನ್ನಯ್ಯ, ಕ್ರೈಸ್ತ ಧರ್ಮಕ್ಕೆ ಮತಾಂತರವಾದವನು ಎಂದು ಜನರು ಹೇಳುತ್ತಿದ್ದಾರೆ. ಪೊಲೀಸರು ಪ್ರತಿ ದಿನ ಆತನಿಗೆ ಮೇಕಪ್‌ ಮಾಡಿ, ಬಿರಿಯಾನಿ ತಿನ್ನಿಸಿ, ಸಂಪೂರ್ಣ ಭದ್ರತೆ ನೀಡಿ ಕರೆದೊಯ್ಯುತ್ತಿದ್ದಾರೆ. ಆತ ಇವೆಲ್ಲವನ್ನೂ ಎಂಜಾಯ್‌ ಮಾಡುತ್ತಿದ್ದಾರೆ. ಆತ ಹೇಳಿದ ಕಡೆಯಲ್ಲ ಪೊಲೀಸರು ನೆಲ ಅಗೆದರು. ನಂತರ ಒಂದೂವರೆ ಲಕ್ಷ ರೂ. ಖರ್ಚು ಮಾಡಿ ಡ್ರೋಣ್‌ ಹಾಗೂ ಇತರೆ ಯಂತ್ರಗಳನ್ನು ಬಳಸಿದರು. 20 ಅಡಿ ಆಳದಲ್ಲಿ ಯಾರಾದರೂ ಹೆಣ ಹೂಳುತ್ತಾರಾ ಸರ್ಕಾರಕ್ಕೆ ಸಾಮಾನ್ಯ ಪ್ರಜ್ಞೆ ಕೂಡಾ ಇಲ್ಲವೇ ಎಂದು ಪ್ರಶ್ನಿಸಿದರು.

ಒಬ್ಬ ವ್ಯಕ್ತಿ ಆರಡಿ ಅಗೆಯಬೇಕೆಂದರೂ ಅದು ಬಹಳ ಕಷ್ಟ. ಆದರೆ ಈ ವ್ಯಕ್ತಿ ಒಬ್ಬನೇ ಇಷ್ಟು ಕೆಲಸವನ್ನು ಮಾಡಿದ್ದಾನೆ ಎಂದರೆ ಇದನ್ನು ಚಂದಾಮಾಮ ಕಥೆ ಎಂದೇ ಹೇಳಬೇಕು. ಈತ ಹೆಣವನ್ನು ಹೆಗಲ ಮೇಲೆ ಹೊತ್ತುಕೊಂಡು ಒಬ್ಬನೇ ಕಾಡಿಗೆ ಹೋಗಿದ್ದಾನೆ ಎಂದರೆ ನಂಬಲು ಸಾಧ್ಯವಿಲ್ಲ. ಈಗ ಅಗೆದಿರುವುದನ್ನೇ ಕೃಷಿ ಹೊಂಡ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಅಶೋಕ್ ಕುಟುಕಿದರು.

ಪ್ರತಿ ದಿನ ಅಷ್ಟೆಲ್ಲ ಅಗೆದರೂ ಏನೂ ಸಿಗುತ್ತಿಲ್ಲ. ದೂರು ನೀಡಿದವನು ಯಾರು ಎಂದು ಪೊಲೀಸರು ಮೊದಲು ತನಿಖೆ ಮಾಡಬೇಕಿತ್ತು. ಆ ವ್ಯಕ್ತಿ ಯಾರು? ಆತನ ಹಿನ್ನೆಲೆ ಏನು ಎಂಬುದನ್ನು ನೋಡಬೇಕಿತ್ತು. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸುವುದಾದರೆ ನಾವೆಲ್ಲರೂ ಬೆಂಬಲ ನೀಡುತ್ತೇವೆ. ಆದರೆ ಆ ನೆಪದಲ್ಲಿ ಮಂಜುನಾಥ ಸ್ವಾಮಿಗೆ ಅಪಮಾನ ಮಾಡಲಾಗುತ್ತಿದೆ. ಈ ಹಿಂದೆ ತಿರುಪತಿಯನ್ನು ಮುಳುಗಿಸಲು ಮುಂದಾಗಿದ್ದರು. ನಂತರ ಶಬರಿಮಲೆ, ಶನಿಸಿಂಗಾಪುರ ಕ್ಷೇತ್ರಗಳನ್ನು ಹಾಳು ಮಾಡಲು ಯತ್ನಿಸಿದರು ಮಾರ್ಮಿಕವಾಗಿ ನುಡಿದರು.

ಧರ್ಮಸ್ಥಳದ ಮುಸುಕುಧಾರಿ ಹೆಸರು ಬಹಿರಂಗಪಡಿಸಿ- ಅಶೋಕ ಆಗ್ರಹ Read More

ಡಾ.ಕೆ.ಸುಧಾಕರ್‌ ರನ್ನು ಗುರಿಯಾಗಿಸಿ ಎಫ್‌ಐಆರ್:‌ ಅಶೋಕ ಕಿಡಿ

ಬೆಂಗಳೂರು: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ಮಾಡಿ ಎ1 ಆರೋಪಿ ಮಾಡಿದ್ದಾರೆ. ಆತ್ಮಹತ್ಯೆಗೆ ಅವರೇ ಸಂಪೂರ್ಣ ಒತ್ತಡ ಹೇರಿದರೆ ಮಾತ್ರ ಈ ರೀತಿ ಎಫ್‌ಐಆರ್‌ ಮಾಡಬೇಕಾಗುತ್ತದೆ. ಆದರೆ ಸುಧಾಕರ್‌ ಗೆ ಚಾಲಕ ಬಾಬು ಅವರ ಜೊತೆ ಆಪ್ತ ಸಂಬಂಧವೇನೂ ಇಲ್ಲ. ಅಲ್ಲದೆ, ಈ ಪ್ರಕರಣದಲ್ಲಿ ಜಾತಿ ನಿಂದನೆಯ ಆರೋಪ ಬರುವುದೇ ಇಲ್ಲ ಎಂದು ಹೇಳಿದರು.

ಸುಧಾಕರ್‌ ಆ ವ್ಯಕ್ತಿಯನ್ನು ಎದುರಿಗೆ ನಿಲ್ಲಿಸಿಕೊಂಡು ನಿಂದಿಸಿಲ್ಲ, ಅಥವಾ ಸಂದೇಶ ಕಳುಹಿಸಿಲ್ಲ. ಕಾಂಗ್ರೆಸ್‌ ಸರ್ಕಾರ ವಿಪಕ್ಷಗಳ ನಾಯಕರನ್ನು ಗುರಿಯಾಗಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ದೂರಿದರು.

ಈ ಹಿಂದೆ ಶಾಸಕ ಬೈರತಿ ಬಸವರಾಜ್‌ ಅವರ ಮೇಲೂ ಇದೇ ರೀತಿ ಕ್ರಮ ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಡೆತ್‌ನೋಟ್‌ ಬರೆದಿಟ್ಟು ಸತ್ತಿದ್ದರು. ಆದರೆ ಕಾಂಗ್ರೆಸ್‌ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಲೇ ಇಲ್ಲ. ಪೊಲೀಸರು ಎಲ್ಲರಿಗೂ ಸಮಾನವಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲ ಮಂದಿ ವಂಚನೆ ಮಾಡಿದ್ದರು. ಆದರೆ ಇದರಲ್ಲಿ ಡಾ.ಕೆ.ಸುಧಾಕರ್‌ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಅಶೋಕ್ ಹೇಳಿದರು.

ಈ ಪ್ರಕರಣದಲ್ಲಿ ಡೆತ್‌ನೋಟ್‌ ಮುಂಚಿತವಾಗಿಯೇ ಸಿಕ್ಕರೂ ಅದನ್ನು ಪೊಲೀಸರಿಗೆ ತಿಳಿಸಿಲ್ಲ. ಚಾಲಕ ಬಾಬು ಅವರ ಕುಟುಂಬದವರು ಡಾ.ಕೆ.ಸುಧಾಕರ್‌ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದರೂ, ಅವರನ್ನು ಎ1 ಆರೋಪಿ ಮಾಡಿದ್ದಾರೆ ಎಂದು ದೂರಿದರು.

ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಶಾಸಕರಾದ ಮುನಿರತ್ನ, ಸಿ.ಟಿ.ರವಿ, ರವಿಕುಮಾರ್‌ ಮೊದಲಾದ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಟಾರ್ಗೆಟ್‌ ಮಾಡಿದೆ. ಮಂಜುನಾಥ್‌ ಹಾಗೂ ನಾಗೇಶ್‌ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಚಾಲಕ ಬಾಬು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. ಹಾಗೆಯೇ ಆನ್‌ಲೈನ್‌ ಗೇಮ್‌ನಿಂದಲೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿ ಎಲ್ಲೂ ಸಂಸದ ಡಾ.ಕೆ.ಸುಧಾಕರ್‌ ಅವರ ಬಗ್ಗೆ ಆರೋಪ ಮಾಡಿಲ್ಲ. ನಮ್ಮ ಬಳಿ ಯಾರೇ ಬಂದರೂ ಸಹಾಯ ಮಾಡುತ್ತೇವೆ. ಆದರೆ ಹಾಗೆ ಸಹಾಯ ಕೇಳಿ ಹೋದವರು ಸುಸೈಡ್‌ ಮಾಡಿಕೊಂಡರೆ ಅದಕ್ಕೆ ನಾವೇ ಕಾರಣರಾಗುವುದಿಲ್ಲ ಎಂದು ತಿಳಿಸಿದರು.

ಈ ಹಿಂದೆ ಕೊಡಗು ಶಾಸಕರಾದ ಮಂಥರ್‌ ಗೌಡ ಹಾಗೂ ಎ.ಎಸ್‌.ಪೊನ್ನಣ್ಣ, ಸಚಿವ ಪ್ರಿಯಾಂಕ್‌ ಖರ್ಗೆ ಹೆಸರುಗಳು ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯಾಧಾರಗಳೂ ಇತ್ತು. ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅನೇಕ ಬಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಸಚಿನ್‌ ಸಚಿವರ ಜೊತೆಗೆ ಮಾತಾಡಿದ್ದರು. ಅಷ್ಟೆಲ್ಲ ಸಾಕ್ಷಿಗಳಿದ್ದರೂ ಸಚಿವರ ವಿರುದ್ಧ ಪೊಲೀಸರು ಕ್ರಮ ವಹಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಾ.ಕೆ.ಸುಧಾಕರ್‌ ರನ್ನು ಗುರಿಯಾಗಿಸಿ ಎಫ್‌ಐಆರ್:‌ ಅಶೋಕ ಕಿಡಿ Read More

ಕಾಂಗ್ರೆಸ್ ಸರ್ಕಾರ‌ ದಿವಾಳಿ: ಅಶೋಕ್

ಬೆಂಗಳೂರು: ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿ ಆಗಿದ್ದರೂ, ಎಲ್ಲವೂ ಚೆನ್ನಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬೊಗಳೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಜರಿದಿದ್ದಾರೆ.

ಎಲ್ಲವೂ ಸರಿ ಇದ್ದಿದ್ದರೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ಒಟ್ಟು 1,17,884 ರಾಜ್ಯ ಸರ್ಕಾರಿ ನೌಕರರಿಗೆ ಕಳೆದ ಮೂರು ತಿಂಗಳಿಂದ 834.9 ಕೋಟಿ ಮೊತ್ತದ ಸಂಬಳ ಕೊಟ್ಟಿಲ್ಲವಲ್ಲ ಯಾಕೆ ಎಂದು ಅವರು ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಇನ್ನೆಷ್ಟು ದಿನ ಈ ಸುಳ್ಳು, ಈ ಭಂಡತನದ ಬಾಳು ಬಾಳುತ್ತೀರಿ ಮೊದಲು ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಅಶೋಕ್ ವ್ಯಂಗ್ಯವಾಗಿ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ‌ ದಿವಾಳಿ: ಅಶೋಕ್ Read More

ಡಿಕೆಶಿ,ಸುರ್ಜೆವಾಲಾ ವಿರುದ್ಧ ಅಶೋಕ್ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕ್ಷೇತ್ರದ ಅನುದಾನಕ್ಕಾಗಿ ವಿಪಕ್ಷದ ಶಾಸಕರು ತಾಳ್ಮೆಯಿಂದ ಕಾಯಬೇಕು ಎಂದರೆ ಏನು ಸ್ವಾಮಿ ಅರ್ಥ ಎಂದು ‌ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ ವಾಡಿದ್ದಾರೆ.

ತಾವು ಈ ಮೊದಲೇ ಹೇಳಿರುವಂತೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎನ್ನುವುದು ನಿಮ್ಮ ಮಾತಿನ ಅರ್ಥವೇನು ಅಥವಾ ತಾಳ್ಮೆಯಿಂದ ಇರದಿದ್ದರೆ ನಟ್ಟು-ಬೋಲ್ಟು ಟೈಟು ಮಾಡುತ್ತೇನೆ ಎನ್ನುವ ಧಮ್ಕಿನಾ ಎಂದು ಅಶೋಕ್ ಟ್ವೀಟ್ ಮಾಡಿ ಕಾರವಾಗಿ ಪ್ರಶ್ನಿಸಿದ್ದಾರೆ.

ತಮಗೆ ಇಷ್ಟ ಬಂದ ಹಾಗೆ ಬರೀ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡೋಕೆ ರಾಜ್ಯ ಸರ್ಕಾರದ ಖಜಾನೆ ನಿಮ್ಮ ಪಕ್ಷದ ಪಾರ್ಟಿ ಫಂಡ್ ಅಲ್ಲ, ಅದು ಆರೂವರೆ ಕೋಟಿ ಕನ್ನಡಿಗರ ಬೆವರಿನ ತೆರಿಗೆ ಹಣ ಎಂಬುದನ್ನು ತಿಳಿದುಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

ಈ ಮಲತಾಯಿ ದೋರಣೆ ನಿಲ್ಲಿಸಿ, ಎಲ್ಲಾ ಕ್ಷೇತ್ರಗಳಿಗೂ ಸಮಬಾಗಿ ಅನುದಾನ ಬಿಡುಗಡೆ ಮಾಡಿ ಎಂದು ಅಶೋಕ್ ಆಗ್ರಹಿಸಿದ್ದಾರೆ.

ಕಳೆದ 26 ತಿಂಗಳುಗಳಲ್ಲಿ ತಮ್ಮದೇ ಪಕ್ಷದ ಸರ್ಕಾರದಿಂದ ನಯಾ ಪೈಸೆ ಅನುದಾನ ಪಡೆಯಲಾಗದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲಾಗದ ಪರಿಸ್ಥಿತಿ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರು, ಸೂಪರ್ ಸಿಎಂ ಸುರ್ಜೆವಾಲ ಅವರ 6 ದಿನಗಳ ಸಭೆಯ ಪರಿಣಾಮದಿಂದ, ಸಿಎಂ ಅವರ ಬಳಿ ತಲಾ 50 ಕೋಟಿ ರೂ ಅನುದಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಸೂಪರ್ ಸಿಎಂ ಅವರೇ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಿಸಿಕೊಟ್ಟ ತಮಗೆ ಅಭಿನಂದನೆಗಳು ಹಾಗೂ ಜೆಡಿಎಸ್, ಬಿಜೆಪಿ ಶಾಸಕರ ಕ್ಷೇತ್ರಗಳಿಗೂ ಅನುದಾನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಸ್ವಾಮಿ ಎಂದು ಸುರ್ಜೆವಾಲ ವಿರುದ್ಧವೂ ವ್ಯಂಗ್ಯ ವಾಡಿದ್ದಾರೆ.

ನಿಮ್ಮ ಸೂಚನೆಯ ಫಲವಾಗಿ ನಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕರೆ ತಮಗೆ ವಿಶೇಷ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸುತ್ತೇವೆ, ಕೊಡಿಸುತ್ತೀರಲ್ಲ ಎಂದು ವ್ಯಂಗ್ಯವಾಗಿಯೇ ಅಶೋಕ್ ಮನವಿ ಮಾಡಿದ್ದಾರೆ.

ಡಿಕೆಶಿ,ಸುರ್ಜೆವಾಲಾ ವಿರುದ್ಧ ಅಶೋಕ್ ವ್ಯಂಗ್ಯ Read More

ಕಾಂಗ್ರೆಸ್ ಸರ್ಕಾರದಿಂದ ಕೀಳು ಮಟ್ಟದ ರಾಜಕೀಯ- ಅಶೋಕ್ ಟೀಕೆ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆತನ ತಾಯಿ ನಾನು ಬೈರತಿ ಬಸವರಾಜ್ ವಿರುದ್ಧ ದೂರು ಕೊಟ್ಟಿಲ್ಲ, ಪೊಲೀಸರೇ ಹೆಸರು ಹಾಕಿಕೊಂಡಿದ್ದಾರೆ ಎಂದು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಕೀಳು ಮಟ್ಟದ ರಾಜಕೀಯ ತೋರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಮಾತೆತ್ತಿದರೆ ಸಿಬಿಐ, ಐಟಿ, ಇಡಿ ಮೂಲಕ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ ಕರ್ನಾಟಕದ ‌ಕಾಂಗ್ರೆಸ್ ನಾಯಕರು, ದೂರಿನಲ್ಲಿ ಶಾಸಕರ ಹೆಸರೇ ಇಲ್ಲದಿದ್ದರೂ ಅವರ ಮೇಲೆ ದುರುದ್ದೇಶದಿಂದ ಎಫ್ಐಆರ್ ಹಾಕಿರುವುದು ಯಾವ ಸೀಮೆ ನ್ಯಾಯ ಎಂದು ಅಶೋಕ್ ‌ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಸುಳ್ಳು ಕೇಸುಗಳನ್ನು ಹಾಕುವ ಮೂಲಕ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕಬಹುದು ಎಂಬ ಭ್ರಮೆಯಿಂದ ಕಾಂಗ್ರೆಸ್ ಸರ್ಕಾರ ಹೊರಬರಲಿ, ಬಿಜೆಪಿ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆರೋಪ ಇದ್ದರೆ ಕಾನೂನು ಪ್ರಕಾರ ತನಿಖೆ ಮಾಡಲಿ, ನ್ಯಾಯಾಲಯದಲ್ಲಿ ಸಾಬೀತು ಮಾಡಲಿ, ಅದು ಬಿಟ್ಟು ಈ ರೀತಿ ದ್ವೇಷ ರಾಜಕಾರಣ ಮಾಡಿ ವಿಪಕ್ಷ ಶಾಸಕರನ್ನು ಟಾರ್ಗೆಟ್ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅಶೋಕ್ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಕೀಳು ಮಟ್ಟದ ರಾಜಕೀಯ- ಅಶೋಕ್ ಟೀಕೆ Read More

ಪಾಲಿಕೆ ಸಿಬ್ಬಂದಿಗಳ ಮುಷ್ಕರ ಸಿಂ ಕಣ್ಣಿಗೆ ಕಾಣುತ್ತಿಲ್ಲ.ಅಶೋಕ್ ಆಕ್ರೋಶ

ಬೆಂಗಳೂರು: ಐದು ವರ್ಷ ನಾನೇ ಅಂತ ದಿಲ್ಲಿತನಕ ಹಾದಿ ಬೀದಿಯಲ್ಲಿ ಬೊಬ್ಬೆ ಹೊಡೆಯುವ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಮಾಡುತ್ತಿರುವುದು ಕಾಣುತ್ತಿಲ್ಲ, ಕಿವಿಗೂ ಬಿದ್ದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಕುರ್ಚಿ ಕಿತ್ತಾಟದಲ್ಲಿ, ಬಣ ಬಡಿದಾಟದಲ್ಲಿ ಸಂಪೂರ್ಣವಾಗಿ ಮೈಮರೆತಿರುವ ರಾಜ್ಯ ಸರ್ಕಾರದ ಯಾವ ಮಂತ್ರಿಗಳೂ ಇದುವರೆಗೆ ಪ್ರತಿಭಟನಾ ನಿರತ ಪಾಲಿಕೆ ಸಿಬ್ಬಂದಿಯನ್ನು ಭೇಟಿ ಮಾಡುವ ಗೋಜಿಗೇ ಹೋಗಿಲ್ಲ ಎಂದು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬಂತೆ ಅಧಿಕಾರವಿಲ್ಲದ ಕುರ್ಚಿಯಲ್ಲಿ ಎಷ್ಟು ದಿನ ಅಂಟಿಕೊಂಡು ಕೂರುತ್ತೀರಿ,ರಾಜೀನಾಮೆ ಕೊಟ್ಟು ಹೊರಡಿ. ಒಂದು ಸುಭದ್ರ, ಸುಸ್ಥಿರ, ಜನಪರ ಆಡಳಿತ ಕೊಡಬಲ್ಲ ಬಲಿಷ್ಠ ಮುಖ್ಯಮಂತ್ರಿಗಾಗಿ ಕನ್ನಡಿಗರು ಕಾಯುತ್ತಿದ್ದಾರೆ ಎಂದು ಅಶೋಕ್ ವ್ಯಂಗ್ಯ ಸಲಹೆ ನೀಡಿದ್ದಾರೆ.

ಪಾಲಿಕೆ ಸಿಬ್ಬಂದಿಗಳ ಮುಷ್ಕರ ಸಿಂ ಕಣ್ಣಿಗೆ ಕಾಣುತ್ತಿಲ್ಲ.ಅಶೋಕ್ ಆಕ್ರೋಶ Read More

ಸಮೀಕ್ಷೆಯಲ್ಲೂ ಭ್ರಷ್ಟಾಚಾರ:ಸರ್ಕಾರದ ವಿರುದ್ಧ ಅಶೋಕ್ ಕಿಡಿ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುತ್ತೇವೆ ಎಂಬ ನೆಪವೊಡ್ಡಿ ಸಿಎಂ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ ‌

ಯಾರ ಮನೆಯ ಬಾಗಿಲು ತಟ್ಟದೇ, ಸಾರ್ವಜನಿಕರನ್ನು ಮಾತನಾಡಿಸದೆ ಕೇವಲ ಸ್ಟಿಕ್ಕರ್ ಅಂಟಿಸಲು ಸೀಮಿತವಾಗಿರುವ ಸಮೀಕ್ಷೆಯಲ್ಲಿ ಈಗ ಸಿಟ್ಕರ್ ಮುದ್ರಣದಲ್ಲೂ ಲೂಟಿ ಹೊಡೆದ ಅಂಶ ಬೆಳಕಿಗೆ ಬಂದಿದೆ ಎಂದು ಅವರು ದೂರಿದ್ದಾರೆ.

ಬೇಕಾಬಿಟ್ಟಿಯಾಗಿ 87 ಲಕ್ಷ ರೂಪಾಯಿ ಮೌಲ್ಯದ ಸ್ಟಿಕ್ಕರ್ ಮುದ್ರಿಸಿ, ಈಗ 25 ಲಕ್ಷ ರೂಪಾಯಿ ಮೌಲ್ಯದ ಸ್ಟಿಕ್ಕರ್ ಗಳನ್ನು ಕಸದ ಬುಟ್ಟಿಗೆ ಎಸೆಯಲು ಹೊರಟಿರುವ
ಸರ್ಕಾರ, ಜನರ ತೆರಿಗೆ ಹಣವನ್ನು ಹಗಲು ದರೋಡೆ ಮಾಡುತ್ತಿದೆ ಎಂದು ಟ್ವೀಟ್ ಮಾಡಿ ಅಶೋಕ್ ಕಿಡಿಕಾರಿದ್ದಾರೆ.

ಸಮೀಕ್ಷೆಯಲ್ಲೂ ಭ್ರಷ್ಟಾಚಾರ:ಸರ್ಕಾರದ ವಿರುದ್ಧ ಅಶೋಕ್ ಕಿಡಿ Read More

ಜನೌಷಧಿ ಕೇಂದ್ರ‌‌: ಹೈಕೋರ್ಟ್‌ ಆದೇಶ;ಸರ್ಕಾರಕ್ಕೆ ಹಿನ್ನಡೆ-ಅಶೋಕ್

ಬೆಂಗಳೂರು: ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್‌ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸಿರುವ ಪ್ರತಿಪಕ್ಷ ನಾಯಕ‌ ಆರ್.ಅಶೋಕ್,
ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಜನೌಷಧಿ ಕೇಂದ್ರಗಳ ಸ್ಥಗಿತದ ಬಗ್ಗೆ ಹೈಕೋರ್ಟ್‌ ಮಧ್ಯಂತರ ತಡೆ ಆದೇಶ ನೀಡಿದೆ. ಈ ಕುರಿತು ನಮ್ಮ ಪಕ್ಷದಿಂದ ಹೋರಾಟ ಮಾಡಿದ್ದೆವು, ಖಾಸಗಿ ಮೆಡಿಕಲ್‌ ಫಾರ್ಮಾಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿತ್ತು. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ. ಇನ್ನಾದರೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಜನರಿಗೆ ಏನು ಬೇಕೆಂದು ಅರಿತು ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ 260-270 ಔಷಧಿಗಳನ್ನು ನೀಡಬೇಕಾಗುತ್ತದೆ. ಆದರೆ ಅಷ್ಟೊಂದು ಔಷಧಿ ಇಲ್ಲ. ಔಷಧಿಗಳು ಜನೌಷಧಿ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇತ್ತೀಚೆಗೆ ಹಾಸನ ಆಸ್ಪತ್ರೆಗೆ ಹೋದಾಗ ಒಬ್ಬರೇ ಹೃದ್ರೋಗ ತಜ್ಞ ವೈದ್ಯರು ಇರುವುದು ಕಂಡುಬಂತು. ಹೃದಯ ಸಂಬಂಧಿ ರೋಗದ ತುರ್ತು ಪರಿಸ್ಥಿತಿಯಲ್ಲಿ ಅವರು ಇಂಜೆಕ್ಷನ್‌ ಕೊಟ್ಟು ಬೆಂಗಳೂರಿಗೆ ಕಳಿಸುತ್ತಾರೆ. ಇಂತಹ ಸ್ಥಿತಿಯಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಬಹಳ ಸಮಸ್ಯೆಯಾಗುತ್ತದೆ ಎಂದು ತಿಳಿಸಿದರು.

ಜೈಲಿನಲ್ಲೇ ಭಯೋತ್ಪಾದಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಗೃಹ ಇಲಾಖೆ ಸತ್ತುಹೋಗಿದೆ. ರಾಜ್ಯ ಸರ್ಕಾರ ಕೂಡಲೇ ಬಾಂಗ್ಲಾ ಹಾಗೂ ಪಾಕ್‌ ಪ್ರಜೆಗಳನ್ನು ಹೊರಕ್ಕೆ ಕಳಿಸಬೇಕು,ಅದಕ್ಕಾಗಿ ವಿಶೇಷ ಪಡೆ ರಚಿಸಬೇಕು, ಕೈದಿಗಳ ಚಲನವಲನಗಳ ಬಗ್ಗೆ ನಿಗಾ ಇರಿಸಲು ಕ್ರಮ ವಹಿಸಬೇಕು,ಜೈಲಿನಲ್ಲಿ ಮೊಬೈಲ್‌ ಬಳಕೆ ತಡೆಗಟ್ಟಬೇಕು ಎಂದು ಅಶೋಕ್ ಆಗ್ರಹಿಸಿದರು.

ಜನೌಷಧಿ ಕೇಂದ್ರ‌‌: ಹೈಕೋರ್ಟ್‌ ಆದೇಶ;ಸರ್ಕಾರಕ್ಕೆ ಹಿನ್ನಡೆ-ಅಶೋಕ್ Read More