ನಿಜವಾದ ಕೂಗುಮಾರಿ ಪ್ರತಾಪ್‌ ಸಿಂಹ – ಬಿ ಸುಬ್ರಹ್ಮಣ್ಯ ಟಾಂಗ್

ಮೈಸೂರು: ಕೂಗು ಮಾರಿಗಳಿರುವುದು ರಾಜ್ಯ ಸರ್ಕಾರದಲ್ಲಲ್ಲ, ನಿಜವಾದ ಕೂಗುಮಾರಿ ಪ್ರತಾಪ್‌ ಸಿಂಹ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಕೂಗುಮಾರಿಗಳಿದ್ದಾರೆ ಎಂಬ ಪ್ರತಾಪ್‌ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಸುಬ್ರಹ್ಮಣ್ಯ, ಮೈಸೂರು ದಸರಾಕ್ಕೆ ಮೊದಲ ಕೂಗುಮಾರಿನೇ ಪ್ರತಾಪ್‌ ಸಿಂಹ ಎಂದು ಕುಟುಕಿದ್ದಾರೆ.

ಭಾನು ಮುಷ್ತಾಕ್‌ ಅವರ ಯಾವುದೋ ಒಂದು ವಿಡಿಯೋ ತುಣುಕನ್ನು ಹಾಕಿ ಇಡೀ ಹಿಂದೂ ಮುಸ್ಲಿಂ ಬಾಂಧವರ ನಡುವೆ ಎತ್ತಿಕಟ್ಟುವ ಕೆಲಸ ಮಾಡಿದ್ದು ಇದೇ ಪ್ರತಾಪ್‌ ಸಿಂಹ. ಹೈಕೋರ್ಟ್‌, ಸುಪ್ರೀಂ ಕೋರ್ಟ್‌ನಲ್ಲೂ ಛೀಮಾರಿ ಹಾಕಿಸಿಕೊಂಡ್ರು, ಜನರ ಕಾಯಕ ಮಾಡುತ್ತಿರುವ ಸಿದ್ದರಾಮಯ್ಯ ನವರ ಜನಪರ ಕೆಲಸಗಳು ಪ್ರತಾಪ್ ಸಿಂಹ ಅವರಿಗೆ ಕಾಣುತ್ತಿಲ್ಲ ಹಾಗಾಗಿ ಪದೇ ಪದೇ ಮೈಸೂರಿನಲ್ಲಿ ತಾನು ಬದುಕಿದ್ದೇನೆ ಎಂಬುದನ್ನು ತೋರಿಸಲು ಟೀಕೆ ಮಾಡುತ್ತಿರುವ ನಿಜವಾದ ಕೂಗುಮಾರಿ ಕೆಲಸ ಮಾಡ್ತಿರೋದೇ ಪ್ರತಾಪ್‌ ಸಿಂಹ ಎಂದು ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಬಲೂನ್‌ ಮಾರುವ ಬಾಲಕಿ ಮೇಲೆ ನಡೆದದ್ದು ಘೋರ ಕೃತ್ಯ, ಅದನ್ನ ಯಾರೂ ಸಹಿಸಲು ಸಾಧ್ಯವಿಲ್ಲ, ಕೃತ್ಯ ಎಸಗಿದ ಕಿಡಿಗೇಡಿಯನ್ನ ಗಲ್ಲಿಗೇರಿಸಬೇಕು ಎಂಬುದು ಕೂಡಾ ನಮ್ಮ ಒತ್ತಾಯ ವಾಗಿದೆ ಎಂದು ಸುಬ್ರಹ್ಮಣ್ಯ ಹೇಳಿದ್ದಾರೆ.

ಈ ಘಟನೆ ದಸರಾ ಮುಗಿದ ಮೇಲೆ ಆಗಿದೆ, ಇದನ್ನ ನಾಡಹಬ್ಬಕ್ಕೆ ಹೋಲಿಸಿ ಧಕ್ಕೆ ತರುವುದು ಸರಿಯಲ್ಲಾ, ಅಲ್ಲದೇ ಘಟನೆಗೆ ಸರ್ಕಾರವನ್ನ ಹೊಣೆ ಮಾಡುವುದು ಕೂಡಾ ಸರಿಯಲ್ಲ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಎನ್‌ಡಿಎ ಸರ್ಕಾರ ಇರುವ ಬಿಹಾರದಲ್ಲಿ, ಬಿಜೆಪಿ ಸರ್ಕಾರ ಇರುವ ಉತ್ತರ ಪ್ರದೇಶದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ತಾಕತ್ತಿದ್ದರೆ ಹೋಗಿ ಯೋಗಿ ಅವರ ವಿರುದ್ಧ ಮಾತಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಈಗ ಬೊಬ್ಬೆ ಹೊಡೆಯುವ ಪ್ರತಾಪ್‌ ಸಿಂಹ ಸುಪ್ರೀಂ ಕೋರ್ಟ್‌ ಸಿಜೆಐ ಮೇಲೆ ಶೂ ಎಸೆದಾಗ ಏಕೆ ಸೊಲ್ಲೆತ್ತಲಿಲ್ಲ, ನಿಮ್ಮಿಂದ ಪಾಸ್‌ ಪಡೆದವರು ಪಾರ್ಲಿಮೆಂಟ್‌ನಲ್ಲಿ ಸ್ಮೋಕ್‌ ಬಾಂಬ್‌ ಹಾಕಿದ್ದರಲ್ಲಾ, ಆಗಲೂ ಏನೂ ಮಾತಾಡಲಿಲ್ಲ. ಮದ್ದೂರಲ್ಲಿ ಗಣೇಶ ಮೂರ್ತಿ ವಿಚಾರದಲ್ಲಿ ಗಲಾಟೆ ಆದಾಗ ಬೆಂಕಿ ಹಚ್ಚುವ ಕೆಲಸ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರ ಮೇಲೆ ಈವರೆಗೆ ಮಾಡಿದ ಆರೋಪಗಳು ಫಲ ಕೊಡಲಿಲ್ಲ ಅದಕ್ಕಾಗಿ ಈಗ ಅವರ ಮಗನ ಮೇಲೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿಗಳಾಗಿ ಅಧಿಕಾರ ಪೂರೈಸಿದರೆ 2028ರಲ್ಲೂ ಕಾಂಗ್ರೆಸ್‌ ಪಟ್ಟಕ್ಕೇರಿಬಿಡುತ್ತೆ ಅನ್ನೋ ಭಯ ಕಾಡುತ್ತಿದೆಯೇನೊ ಅಲ್ಲದೇ ಬಿಜೆಪಿ ಅವಧಿಯಲ್ಲಿ ನಡೆಯುತ್ತಿದ್ದ ಪ್ರೈವೆಟ್‌ ಕ್ಲಬ್‌ಗಳನ್ನ ಸಿದ್ದರಾಮಯ್ಯ ಅವರು ಬಂದ್‌ ಮಾಡಿಸಿದ್ದಾರೆ. ಅದಕ್ಕಾಗಿ ಪ್ರತಾಪ್‌ ಸಿಂಹ ಸಿಎಂ ಮಗನ ಮೇಲೆ ನಿರಾಧಾರವಾಗಿ ಆರೋಪ ಮಾಡ್ತಿದ್ದಾರೆ. ದಾಖಲೆಗಳಿದ್ದರೆ, ಬಿಡುಗಡೆ ಮಾಡಲಿ, ಅದು ಬಿಟ್ಟು ಬೀದಿಯಲ್ಲಿ ಕೂಗುಮಾರಿ ಕೆಲಸ ಮಾಡೋದು ನಾಚಿಗೇಡು ಎಂದು ಸುಬ್ರಹ್ಮಣ್ಯ ಲೇವಡಿ ಮಾಡಿದ್ದಾರೆ,

ಇನ್ನು ನಳಪಾಕ್‌ನಲ್ಲಿ ಕಾಫಿ ಕುಡಿಯಲು, ಮೈಲಾರಿ ಹೊಟೇಲ್ ನಲ್ಲಿ ದೋಸೆ ತಿನ್ನಲು ಅಷ್ಟೇ ಪೊಲೀಸರ ಬಳಕೆ ಮಾಡ್ತಿದ್ದಾರೆ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಬ್ರಹ್ಮಣ್ಯ, ಪೊಲೀಸ್‌ ಭದ್ರತೆ ಕೊಡೋದು ಸಿದ್ದರಾಮಯ್ಯ ಅಂತ ಅಲ್ಲ, ಮುಖ್ಯಮಂತ್ರಿಗಳು ಎಂಬ ಕಾರಣಕ್ಕೆ.ಆ ಸ್ಥಾನದಲ್ಲಿ ಯಾರಿದ್ದರೂ ಅವರಿಗೆ ಸೂಕ್ತ ಭದ್ರತೆ ಕೊಟ್ಟೇ ಕೊಡ್ತಾರೆ. ಕಾರ್ಯಕ್ರಮ ನಿಮಿತ್ತ ಬಂದಾಗ ಊಟ, ತಿಂಡಿ ಮಾಡಲೇಬೇಕಲ್ಲವೇ? ಮೋದಿ ಅವರು ಮೈಸೂರಿನ ರ್‍ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾಗ ಎಷ್ಟು ಖರ್ಚಾಗಿತ್ತು? ಆಗ ಎಷ್ಟು ಜನ ಭದ್ರತೆಗೆ ಇದ್ದರು? ಇದ್ಯಾವುದು ತಲೆಯಲ್ಲಿ ನಿಮ್ಮ ತಲೆಯಲ್ಲಿ ಇಲ್ಲವೆ, ಮೋದಿ ಅವರನ್ನೂ ಹೀಗೆಯೆಡ ಪ್ರಶ್ನೆ ಮಾಡಲು ಧೈರ್ಯ ಇದೆಯೇ ಎಂದು ಬಿ ಸುಬ್ರಹ್ಮಣ್ಯ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ನಿಜವಾದ ಕೂಗುಮಾರಿ ಪ್ರತಾಪ್‌ ಸಿಂಹ – ಬಿ ಸುಬ್ರಹ್ಮಣ್ಯ ಟಾಂಗ್ Read More

ಇಡಿ ಛೂ ಬಿಟ್ಟಿದ್ದ ಬಿಜೆಪಿಗೆ ಸುಪ್ರೀಂ ಕಪಾಳ ಮೋಕ್ಷ-ಬಿ ಸುಬ್ರಹ್ಮಣ್ಯ ಟಾಂಗ್

ಮೈಸೂರು: ಮುಡಾ ವಿಚಾರದಲ್ಲಿ ಸಿಎಂ ವಿರುದ್ಧ ಇಡಿ ಛೂ ಬಿಟ್ಟಿದ್ದ ಬಿಜೆಪಿಗೆ ಸುಪ್ರೀಂ ಕಪಾಳ ಮೋಕ್ಷ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಟಾಂಗ್ ನೀಡಿದ್ದಾರೆ.

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನ ಸುಪ್ರೀಂ ಕೋರ್ಟ್ ವಜಾ ಮಾಡಿದ್ದು,
ಬಿಜೆಪಿಗೆ ಕಪಾಳ ಮೋಕ್ಷ ಆದಂತಾಗಿದೆ ಎಂದು ಸುಬ್ರಹ್ಮಣ್ಯ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನ ನಾವೆಲ್ಲ ಸ್ವಾಗತಿಸುತ್ತೇವೆ. ಮುಖ್ಯಮಂತ್ರಿಗಳ ಪತ್ನಿ ಯಾವುದೇ ರಾಜಕೀಯ ವೇದಿಕೆಯಲ್ಲಿ ಕಾಣಿಸಿಕೊಂಡವರಲ್ಲ, ಪ್ರಚಾರಕ್ಕೂ ಬಂದವರಲ್ಲ, ಆದಾಗ್ಯೂ ಕಾನೂನಿನ ಅನ್ವಯ ಪಡೆದಿದ್ದ 14 ಸೈಟುಗಳನ್ನು ಹಿಂದಿರುಗಿಸಿ ಘನತೆ ಮೆರೆದಿದ್ದರು. ಆದರೆ ವಿಪಕ್ಷಗಳ ಕುತಂತ್ರ ಅವರನ್ನು ಜೈಲಿಗೆ ಕಳಿಸುವುದಾಗಿತ್ತು. ಜೊತೆಗೆ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯುವ ಹುನ್ನಾರವೂ ನಡೆದಿತ್ತು ಇದೀಗ ನ್ಯಾಯ ದೇವತೆಯೇ ಬಿಜೆಪಿಗೆ ತಪರಾಕಿ ಹಾಕಿದೆ ಎಂದು ಅವರು ಕುಟುಕಿದ್ದಾರೆ.

ಬಿಜೆಪಿಯವರು ಹಿಂದುಳಿದ ವರ್ಗದ ನಾಯಕ ಅನ್ನೋ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಿದ್ದರು, ರಾಜಕೀಯವಾಗಿ ಸಿದ್ದರಾಮಯ್ಯ ಅವರನ್ನ ಎದುರಿಸಲಾಗದೇ ಇಡಿಯನ್ನ ದುರ್ಬಳಕೆ ಮಾಡಿಕೊಂಡು, ಪಾರ್ವತಿ ಅವರ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ಮಾನಸಿಕವಾಗಿಯೂ ಕಿರುಕುಳ ನೀಡಿದ್ದರು. ಸುಪ್ರೀಂ ಆದೇಶದಿಂದ ವಿರೋಧಿಗಳಿಗೆ ಮುಖಭಂಗವಾಗಿದೆ ಎಂದು ಸುಬ್ರಮಣ್ಯ ತಿಳಿಸಿದ್ದಾರೆ.

ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಇನ್ನಾದರೂ ಬಿಜೆಪಿಯವರು ವೈಯಕ್ತಿಕ, ದ್ವೇಷ ರಾಜಕಾರಣ ಬಿಟ್ಟು, ಆಡಳಿತ ವಿಚಾರದ ಬಗ್ಗೆ ಚರ್ಚೆ ಮಾಡಲಿ ಎಂದು ಸುಬ್ರಮಣ್ಯ ಸಲಹೆ ನೀಡಿದ್ದಾರೆ.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧ ಹೂಡಲಾದ ಹಣ ವರ್ಗಾವಣೆ ಪ್ರಕರಣವನ್ನು ನ್ಯಾಯಾಲಯ ರದ್ದು ಪಡಿಸಿರುವುದನ್ನು ಸ್ವಾಗತಿಸುತ್ತೇವೆ ಬಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಇಡಿ ಛೂ ಬಿಟ್ಟಿದ್ದ ಬಿಜೆಪಿಗೆ ಸುಪ್ರೀಂ ಕಪಾಳ ಮೋಕ್ಷ-ಬಿ ಸುಬ್ರಹ್ಮಣ್ಯ ಟಾಂಗ್ Read More