ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ನ್ಯಾಯಾಲಯ

ಬಳ್ಳಾರಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿ ಅಪರಾಧಿ ಎಂದು ನ್ಯಾಯಾಲಯ ಪ್ರಕಟಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಹೈದರಾಬಾದ್ ನಾಮಪಲ್ಲಿಯಲ್ಲಿರೋ ಸಿಬಿಐ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದ್ದು ಜನಾರ್ಧನ ರೆಡ್ಡಿ ಸೇರಿ 5 ಮಂದಿ ಜೈಲು ಶಿಕ್ಷೆ ಅನುಭವಿಸಲಿದ್ದಾರೆ.

ಈಗಾಗಲೇ ಜನಾರ್ಧನ ರೆಡ್ಡಿ ಮೂರುವರೆ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಪ್ರಕರಣಲ್ಲಿ ಆರೋಪಿಗಳಾಗಿದ್ದ ಆಂಧ್ರಪ್ರದೇಶದ ಮಾಜಿ ಸಚಿವೆ ಸಬಿತಾ ಇಂದ್ರ ರೆಡ್ಡಿ ಮತ್ತು ಕೃಷ್ಣಾನಂದಗೆ ಬಿಗ್‌ ರಿಲೀಪ್‌ ಸಿಕ್ಕಿದೆ.

ನ್ಯಾಯಾಲಯದ ವಿಚಾರಣೆ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಸೋಮವಾರವೇ ಹೈದರಾಬಾದ್ ಗೆ ತೆರಳಿದ್ದರು.ಮಂಗಳವಾರ ವಿಚಾರಣೆ ನಡೆಸಿದ ನಾಮಪಲ್ಲಿಯಲ್ಲಿರೋ ಸಿಬಿಐ ಕೋರ್ಟ್ ಜನಾರ್ದನ ರೆಡ್ಡಿ ದೋಷಿ ಎಂದು ತೀರ್ಪು ಪ್ರಕಟಿಸಿ,7ವರ್ಷ ಶಿಕ್ಷೆಯ ಪ್ರಮಾಣವನ್ನು ಕೂಡ ಘೋಷಿಸಿದೆ.

ಪ್ರಕರಣದಲ್ಲಿ A1 ಓಎಂಸಿ ಎಂಡಿ ಶ್ರೀನಿವಾಸ ರೆಡ್ಡಿ, A2 ಜನಾರ್ದನ ರೆಡ್ಡಿ, A3 ರಾಜಗೋಪಾಲ್ ರೆಡ್ಡಿ, A4 ಅಲಿಖಾನ್ ಅಪರಾಧಿಗಳೆಂದು ಪ್ರಕಟಿಸಲಾಗಿದೆ.

ಬೆಳಿಗ್ಗೆ ದಾಖಲಾತಿ ಪರಿಶೀಲಿಸಿದ ಕೋರ್ಟ್ ಮಧ್ಯಾಹ್ನದ ನಂತರ ತೀರ್ಪು ಪ್ರಕಟಿಸಿತು. ತೀರ್ಪು ಬಳಿಕ ರೆಡ್ಡಿ ಒಂದು ಕ್ಷಣ ಕುಸಿದು ಹೋದರು ಎಂದು ವರದಿ ತಿಳಿಸಿದೆ.

ಹೈದರಾಬಾದ್‌ ಸಿಬಿಐ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಜನಾರ್ಧನ ರೆಡ್ಡಿ ಹೈಕೋರ್ಟ್ ಹೋಗುವ ಸಾಧ್ಯತೆ ಇದೆ.

ಒಂದು ವೇಳೆ ಹೈಕೋರ್ಟ್ ನಿಂದ ಜನಾರ್ದನರೆಡ್ಡಿ ಪರವಾಗಿ ತೀರ್ಪು ಬಂದರೆ ಸಮಸ್ಯೆ ಆಗುವುದಿಲ್ಲ. ಶಾಸಕ ಸ್ಥಾನ ಉಳಿಯಲಿದೆ. ಒಂದು ವೇಳೆ ರೆಡ್ಡಿ ವಿರುದ್ಧವಾಗಿ ತೀರ್ಪು ಬಂದರೆ ಶಾಸಕ ಸ್ಥಾನ ರದ್ದಾಗಲಿದೆ,ಜತೆಗೆ ಜೈಲು ಸೇರುವುದು ಖಚಿತ

ಕರ್ನಾಟಕ – ಆಂಧ್ರಪ್ರದೇಶದ ಗಡಿಯಲ್ಲಿರುವ ಓಬಳಾಪುರಂ ಗಣಿಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಒಎಂಸಿಯಿಂದ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಕಬ್ಬಿಣದ ಅದಿರನ್ನು ವಿವೇಚನಾರಹಿತವಾಗಿ ಗಣಿಗಾರಿಕೆ ನಡೆಸಿದೆ ಎಂಬ ಆರೋಪಗಳಿತ್ತು.

ಅಕ್ರಮ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಆಂಧ್ರದಲ್ಲಿ ಪ್ರಕರಣ ದಾಖಲಾಗಿತ್ತು. ಜೊತೆಗೆ ಕರ್ನಾಟಕ ಮತ್ತು ಆಂಧ್ರದ ಗಡಿಯನ್ನು ವಿರೂಪಗೊಳಿಸಿದ ಆರೋಪ ಕೂಡ ರೆಡ್ಡಿ ಮತ್ತು ಆಂಧ್ರದ ಪ್ರಭಾವಿಗಳ ಮೇಲಿತ್ತು.

ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು.

ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ನ್ಯಾಯಾಲಯ Read More

ಮಾ.6 ರಂದು ಬಳ್ಳಾರಿಯ ಹಿರಿಯ ನಾಗರಿಕರಿಗೆ ಡಿಜಿಟಲ್ ಮೀಡಿಯಾ ಮಹತ್ವದ ಬಗ್ಗೆ ಅರಿವು

ಬಳ್ಳಾರಿ,ಮಾ.3: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ವತಿಯಿಂದ ಬಳ್ಳಾರಿಯ ಹಿರಿಯ ನಾಗರಿಕರಿಗೆ ಡಿಜಿಟಲ್ ಮೀಡಿಯಾ ಮಹತ್ವದ ಬಗ್ಗೆ ಅರಿವು ಮತ್ತು ಸಾಧಕ ಗಣ್ಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮಾ.6 ರಂದು ಹಮ್ಮಿಕೊಳ್ಳಲಾಗಿದೆ.

ಬಳ್ಳಾರಿಯ ಮೋತಿ ಸರ್ಕಲ್‌ ಬಳಿ
ಹೋಟೆಲ್ ಮಾಡ್ರನ್ ಗ್ರಾಂಡ್ ಇನ್ ನಲ್ಲಿ ಅಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ

ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆ ಚಂಡೂರು ತಾಲೂಕಿನ ಬಂಡ್ರಿ ಗ್ರಾಮದ ಜಾನಪದ ಹಿರಿಯ ಗಾಯಕರಾದ ಶ್ರೀ ದಡವಾಯಿ ಚಿತ್ತಪ್ಪ ಮತ್ತು ರೈತ ಮುಖಂಡರಾದ ಡೋಂಗಿ ಹನುಮಪ್ಪ, ಬಳ್ಳಾರಿಯ ಸ್ಮೈಲ್ ಫೌಂಡೇಶನ್ ಮುಖ್ಯಸ್ಥರಾದ ಉಮಾಪತಿ ಗೌಡ, ಶ್ರೀರಕ್ಷೆ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಸಂಡೂರು ಸಂಸ್ಥಾಪಕರಾದ ಡಾ. ಜಿ ವಿ ಲಕ್ಷ್ಮೀದೇವಿ,ಜನಪರ ಹೋರಾಟಗಾರರು ಕೆ.ಎಂ ಮಹೇಶ್ವರ ಸ್ವಾಮಿ‌ ಸೇರಿದಂತೆ ಹಲವು ಸಾಧಕ ಗಣ್ಯರನ್ನು ಅಭಿನಂದಿಸಲಾಗುವುದು.

ಸಮಾರಂಭದಲ್ಲಿ ಬಳ್ಳಾರಿಯ ಕೆಎಸ್‌ಡಿಎಂಎ ಅಧ್ಯಕ್ಷರಾದ ಸಿ ಬಸವರಾಜು ನಿರ್ದೇಶಕರಾದ ದೇವರಾಜು ಮತ್ತು ರಕ್ತದಾನಿ ಮಂಜು ಮತ್ತಿತರರು ಭಾಗವಹಿಸಲಿದ್ದಾರೆ.

ಮಾ.6 ರಂದು ಬಳ್ಳಾರಿಯ ಹಿರಿಯ ನಾಗರಿಕರಿಗೆ ಡಿಜಿಟಲ್ ಮೀಡಿಯಾ ಮಹತ್ವದ ಬಗ್ಗೆ ಅರಿವು Read More

ಐವಿ ದ್ರಾವಣ ಪೂರೈಕೆ ಹಿಂದೆ ಬಲಾಢ್ಯ ಕೈಗಳು:ಅಶೋಕ್ ಕಿಡಿ

ಬಳ್ಳಾರಿ: ಪಶ್ಚಿಮ ಬಂಗಾಳ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯ ಐವಿ ದ್ರಾವಣ ಕಳಪೆ ಎಂದು ಆರು ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾದರೂ, ಅದನ್ನೇ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಕಿಡಿ ಕಾರಿದ್ದಾರೆ.

ಇದರ ಹಿಂದೆ ಬಲಾಢ್ಯರ ಕೈ ಕೆಲಸ ಮಾಡಿದೆ, ಈ ಸಾವುಗಳಿಗೆ ಸರ್ಕಾರವೇ ನೇರ ಕಾರಣ ಎಂದು ಹೇಳಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 10 ತಿಂಗಳಲ್ಲಿ 111 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ತಾಯಂದಿರು ಹೆರಿಗೆ ನಂತರ ಮೃತರಾಗಿದ್ದಾರೆ.ಇದರಿಂದ ಜನರಲ್ಲಿ ಆತಂಕ ಮೂಡಿದೆ.

ಇಲ್ಲಿ ಮೆಡಿಕಲ್‌ ಮಾಫಿಯಾ ಕೂಡ ಇದೆ. ಇದು ಒಂದು ಜಿಲ್ಲೆಯಲ್ಲಿ ಕಂಡುಬಂದ ಸಮಸ್ಯೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಏನಾಗಿದೆ ಎಂಬುದನ್ನು ನೋಡಬೇಕಿದೆ. ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಇಲ್ಲವಾದರೆ ನಾನೇ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಎಂದು ಅಶೋಕ್ ಎಚ್ಚರಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವಿ ದ್ರಾವಣ ನೀಡಿದ ಬಳಿಕ ತಾಯಂದಿರ ಲಿವರ್‌ ವಿಫಲವಾಗಿದೆ. ರಕ್ತದೊತ್ತಡ ಸಂಪೂರ್ಣ ಇಳಿಮುಖವಾಗಿದೆ. ಈ ದ್ರಾವಣ ಯಾರ ಪ್ರಭಾವದಿಂದ ಕರ್ನಾಟಕಕ್ಕೆ ಬಂತು ಎಂದು ನೋಡಬೇಕಿದೆ. ಹಿಂದೆ ಇದ್ದ ಡ್ರಗ್‌ ಕಂಟ್ರೋಲರ್‌ ಆರು ತಿಂಗಳ ಹಿಂದೆ ಐವಿ ದ್ರಾವಣ ಖರೀದಿಸಬಾರದು ಎಂದು ಸರ್ಕಾರಕ್ಕೆ ತಿಳಿಸಿದ್ದರು. ಬಳಸಬಾರದು ಎಂದು ಹೇಳಿದ್ದರೂ ಯಾವ ಕಾಣದ ಬಲಾಢ್ಯ ಕೈ ಇದನ್ನೇ ಖರೀದಿ ಮಾಡಬೇಕೆಂದು ಪ್ರಭಾವ ಬೀರಿದೆ ಎಂದು ನೋಡಬೇಕಿದೆ. ಈ ಕಂಪನಿಯ ಅನ್ಸಾರಿ ಎಂಬುವರು ಇಲ್ಲಿ ಪ್ರಭಾವ ಬೀರಿದ್ದು, ಈತನನ್ನು ಬಂಧಿಸಿದರೆ ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬಹುದು ಎಂದು ಹೇಳಿದರು.

ಎರಡು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡ ಅಧಿಕಾರಿಯನ್ನು ಸರ್ಕಾರ ಅಮಾನತು ಮಾಡಿ ನುಣುಚಿಕೊಂಡಿದೆ. ಸಚಿವರೇ ರಾಜೀನಾಮೆ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದರು.

ಅಧಿಕಾರಿಗಳಾದ ಚಿದಾನಂದ ವಟಾರೆ, ರಘುನಂದನ್‌, ನಂದಿನಿ, ಶೈಲಾವತಿ ಇದನ್ನು ಶಿಫಾರಸು ಮಾಡಿದ್ದಾರೆ. 97 ಬ್ಯಾಚ್‌ಗಳಲ್ಲಿ 23 ಬ್ಯಾಚ್‌ಗಳು ಕಳಪೆ ಗುಣಮಟ್ಟ ಹೊಂದಿವೆ ಎಂದು ವರದಿ ನೀಡಲಾಗಿದೆ. ಔಷಧಿಯಲ್ಲಿ ಶೇ.1 ರಷ್ಟು ಕಳಪೆ ಇದ್ದರೂ ಅದು ರೋಗಿಗಳಿಗೆ ಅಪಾಯ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಕಳಪೆ ಔಷಧಿ ಇದ್ದರೂ ಅದನ್ನು ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಇದರ ಹಿಂದೆ ಸರ್ಕಾರವೇ ಇದೆ ಎಂದು ಅಶೋಕ್ ದೂರಿದರು.

ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ. ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಕಾಣೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿಗೆ ಬಂದರೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಾತ್ರ ಇವರ ಕಾರ್ಯಕ್ರಮ ಎಂದು ವಾಗ್ದಾಳಿ ನಡೆಸಿದರಲ್ಲದೆ ಮೃತಪಟ್ಟ ಪ್ರತಿ ಸಂತ್ರಸ್ತರಿಗೂ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಐವಿ ದ್ರಾವಣ ಪೂರೈಕೆ ಹಿಂದೆ ಬಲಾಢ್ಯ ಕೈಗಳು:ಅಶೋಕ್ ಕಿಡಿ Read More

6‌ ವಾರಗಳ ಮಧ್ಯಂತರ ಜಾಮೀನು ಮಂಜೂರು:ದರ್ಶನ್ ಗೆ ಬಿಡುಗಡೆ ಭಾಗ್ಯ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಗೆ ಕಡೆಗೂ 6 ವಾರಗಳ ಮಧ್ಯಂತರ ಜಾಮೀನು ದೊರೆತಿದ್ದು,ಅವರು ನಿಟ್ಟುಸಿರು ಬಿಟ್ಟಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲೇ ಮಧ್ಯಂತರ ಜಾಮೀನು ಮಂಜೂರಾಗಿರುವುದು ಹಬ್ಬಕ್ಕೆ ಗಿಫ್ಟ್ ಎಂದೇ ಅಭಿಮಾನಿಗಳು ಹೇಳುತ್ತಿದ್ದಾರೆ.ಅಂತೂ ಜೈಲಿನಿಂದ ಹೊರಬರಲು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ದರ್ಶನ್ 4 ತಿಂಗಳು 20 ದಿನಗಳ ಬಳಿಕ ಬಿಡುಗಡೆಯಾಗುತ್ತಿದ್ದಾರೆ.

ದರ್ಶನ್‌ಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರತಿ ವಾರ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಬೇಕು. ನ್ಯಾಯಾಲಯಕ್ಕೆ ಪಾಸ್‌ಪೋರ್ಟ್ ಒಪ್ಪಿಸಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.

ದರ್ಶನ್ ಪರ ವಕೀಲರು ಮೂರು ತಿಂಗಳ ಜಾಮೀನು ಕೋರಿದ್ದರು. ಆದರೆ ಕೋರ್ಟ್ 6 ವಾರಗಳ ಜಾಮೀನು ಮಂಜೂರು ಮಾಡಿದೆ ಹಾಗಾಗಿ ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

ನ್ಯಾಯಾಲಯದ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡರೆ ಇಂದು ಸಂಜೆ ಅಥವಾ ರಾತ್ರಿಯೇ ದರ್ಶನ್‌ ಜೈಲಿನಿಂದ ಹೊರಬರಲಿದ್ದಾರೆ,ಇಲ್ಲದಿದ್ದರೆ ಗುರುವಾರ ಬಿಡುಗಡೆಯಾಗುವರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲದೆ ಹೋದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಮತ್ತೊಂದು ಕಾಲಿಗೂ ಆಗಬಹುದು ಆದ್ದರಿಂದ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು.ಅದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೈಸೂರಿನಲ್ಲಿ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು.11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು.

ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು. ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಬಂದಿದ್ದು,ಸಧ್ಯ ತಾತ್ಕಾಲಿಕ ಬಿಡುಗಡೆ ಭಾಗ್ಯ ಸಿಕ್ಕಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಗ್ಯದ ವಿಚಾರವಾಗಿ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ, ಆರೋಗ್ಯ ಎಲ್ಲರ ಹಕ್ಕು ಎಂದು ಹೇಳಿ ಬುಧವಾರಕ್ಕೆ ಆದೇಶ ಕಾಯ್ದಿರಿಸಿದ್ದರು.

ಹಾಗಾಗಿ ಇಂದು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದರು.

6‌ ವಾರಗಳ ಮಧ್ಯಂತರ ಜಾಮೀನು ಮಂಜೂರು:ದರ್ಶನ್ ಗೆ ಬಿಡುಗಡೆ ಭಾಗ್ಯ Read More

ಇಂದು ಕೂಡ ದರ್ಶನ್​ಗೆ ಸಿಗಲಿಲ್ಲ ಬೇಲ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು,
ಶನಿವಾರ ಕೋರ್ಟ್​​ನಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಿತು.

ಆದರೆ ಸತತ ನಾಲ್ಕು ಗಂಟೆಗಳ ಕಾಲ ಹಿರಿಯ ವಕೀಲ ಸಿ.ವಿ ನಾಗೇಶ್​ ವಾದ ಮಂಡಿಸಿದರೂ ಕೂಡಾ ನಟ ದರ್ಶನ್​ಗೆ ಬೇಲ್ ಸಿಗಲಿಲ್ಲ.

ದರ್ಶನ್ ಪರ ವಕೀಲರಾದ ಸಿ.ವಿ ನಾಗೇಶ್ ಅವರು, ತನಿಖೆಯಲ್ಲಿ ಪೊಲೀಸರು ಮಾಡಿದ ತಪ್ಪುಗಳನ್ನು ಪ್ರಶ್ನೆ ಮಾಡಿದ್ದು, ತನಿಖೆ ತಡವಾಗಿದ್ದು ಯಾಕೆ, ದರ್ಶನ್ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ವಾದ ಮಂಡಿಸಿದರು.ಜತೆಗೆ ಕೇಸ್​ ತನಿಖೆಯ
ತಪ್ಪುಗಳ ಪಟ್ಟಿಯನ್ನು ಕೋರ್ಟ್​​ಗೆ ನೀಡಿದರು.

ಸಿ.ವಿ. ನಾಗೇಶ್ ಅವರು ವಾದ ಮುಗಿಸುತ್ತಿದ್ದಂತೆ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಅ.8ಕ್ಕೆ ಮುಂದೂಡಿದರು.

ಇಂದು ಬೇಲ್ ಸಿಗಬಹುದೆಂದು ಕಾಯುತ್ತಿದ್ದ ದರ್ಶನ್​ಗೆ ನಿರಾಸೆ ಆಗಿದೆ,ಜೈಲಿನಲ್ಲೇ ಇರಬೇಕಿದೆ. ಇನ್ನು ಪವಿತ್ರಾ ಗೌಡಗೂ ಬೇಲ್ ಸಿಕ್ಕಿಲ್ಲ. ಸಿಟಿ ಸಿವಿಲ್ ಕೋರ್ಟ್, ಪವಿತ್ರಾಗೌಡ ಜಾಮೀನು ಅರ್ಜಿಯನ್ನು ಸಹ ಅಕ್ಟೋಬರ್ 8 ಕ್ಕೆ ಮುಂದೂಡಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ ಆಗಿದ್ದು,ಅಂದು ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ಪ್ರತಿವಾದ ಮಂಡಿಸಲಿದ್ದಾರೆ.

ಇಂದು ಕೂಡ ದರ್ಶನ್​ಗೆ ಸಿಗಲಿಲ್ಲ ಬೇಲ್ Read More

ದರ್ಶನ್ ಗಿಲ್ಲ ಗಣೇಶನ ದರ್ಶನ,ಪೂಜೆ ಭಾಗ್ಯ

ಬಳ್ಳಾರಿ: ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಗಣೇಶ ಚತುರ್ಥಿ ಆಚರಿಸಿದರೂ ಕೂಡಾ ಆರೋಪಿ ದರ್ಶನ್‌ಗೆ ಗಣೇಶನ ದರ್ಶನ ಭಾಗ್ಯ ಸಿಗದಂತಾಗಿದೆ.

ಜೈಲು ಒಳಭಾಗದಲ್ಲಿ ಬಾಳೆ ಕಂಬ, ಬಲೂನ್, ಲೈಟಿಂಗ್, ಹಣ್ಣು, ಚಿತ್ತಾರದ ಹಾಳೆಯ ಅಲಂಕಾರದೊಂದಿಗೆ ಗಣೇಶ ಮೂರ್ತಿ ಪ್ರತಿಷ್ಟಾಪಿಸಲಾಯಿತು.

ಗಣೇಶ ಕೂರಿಸುವುದು ಜೈಲು ಸಿಬ್ಬಂದಿ ಮಾತ್ರ. ಆದರೆ, ಪ್ರತಿ ವರ್ಷ ಎಲ್ಲಾ ಕೈದಿಗಳು ಸೇರಿ ಅದ್ದೂರಿಯಾಗಿ ಅಲಂಕಾರ ಮಾಡಿ ಹಬ್ಬ ಮಾಡುತ್ತಿದ್ದರು.

ಈ ವರ್ಷ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಗಣೇಶನ ದರ್ಶನ ಮಾಡಿ ಕೈ ಮುಗಿದು ಪ್ರಾರ್ಥನೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಜೈಲಿನಲ್ಲಿ ಯಾವುದೇ ಸಾಂಸ್ಕೃತಿಕ ಚಟುವಟಿಕೆಗೆ ಅವಕಾಶ ನೀಡಿಲ್ಲ.

ಜೈಲಿನಲ್ಲಿ 3 ಅಡಿ ಎತ್ತರದ ಇಲಿಯ ಮೇಲೆ ಕುಳಿತಿರುವ ವಿಘ್ನೇಶ್ವರನ ಮಣ್ಣಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಹೈ ಸೆಕ್ಯುರಿಟಿ ಸೆಲ್‌ನಲ್ಲಿ ಆರೋಪಿ ದರ್ಶನ್ ಸೇರಿದಂತೆ ಇತರೆ ಮೂರು ಕೈದಿಗಳಿದ್ದಾರೆ.ದರ್ಶನ್ ಸೇರಿ ಹೈ ಸೆಕ್ಯೂರಿಟಿ ಸೆಲ್‌ನಲ್ಲಿರುವ ಯಾವೊಬ್ಬ ಕೈದಿಗೂ ಗಣೇಶ ಪೂಜೆಗೆ ಅವಕಾಶ ನೀಡಲಾಗಿಲ್ಲ.

ದರ್ಶನ್ ಗಿಲ್ಲ ಗಣೇಶನ ದರ್ಶನ,ಪೂಜೆ ಭಾಗ್ಯ Read More